ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದರ್ಶನ್ಗೆ ಷರತ್ತು ಬದ್ದ ಜಾಮೀನು ನಿಯಮವನ್ನು ಸಡಿಲಿಸಿ ಹೈಕೋರ್ಟ್ ಆದೇಶಿಸಿದೆ.
ಹೈಕೋರ್ಟ್ನ ಈ ಆದೇಶದಿಂದ ದರ್ಶನ್ಗೆ ಮತ್ತೊಮ್ಮೆ ರಿಲೀಫ್ ಸಿಕ್ಕಂತಾಗಿದೆ. ಹಿಂದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಗೆ ಷರತ್ತು ಬದ್ದ ಜಾಮೀನು ನೀಡಲಾಗಿತ್ತು.
ಈ ಮೊದಲು ಸೆಷನ್ಸ್ ಕೋರ್ಟ್ ವ್ಯಾಪ್ತಿ ಬಿಟ್ಟು ತೆರಳುವಂತಿರಲಿಲ್ಲ ಎಂಬ ಷರತ್ತನ್ನು ಕೋರ್ಟ್ ವಿಧಿಸಿತ್ತು. ಇದರಿಂದ ದರ್ಶನ್ ಎಲ್ಲೆ ತೆರಳಬೇಕಾದರೂ ಕೋರ್ಟ್ ಅನುಮತಿ ಪಡೆದು ತೆರಳಬೇಕಿತ್ತು. ಹೀಗಾಗಿ, ಷರತ್ತು ಸಡಿಲಿಕೆ ಕೋರಿ ಹೈಕೋರ್ಟ್ಗೆ ದರ್ಶನ್ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಕೋರ್ಟ್ ಸಮ್ಮತಿ ನೀಡಿದೆ.
ದರ್ಶನ್ ಅವರ ಅರ್ಜಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಎಸ್ಪಿಪಿ ಪ್ರಸನ್ನಕುಮಾರ್, ಜಾಮೀನು ಪಡೆಯುವಾಗ ಅನಾರೋಗ್ಯದ ಕಾರಣ ನೀಡಿದ್ದರು. ಈಗ ದೇಶದೆಲ್ಲೆಡೆ ಸುತ್ತಾಡಲು ಬಯಸುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು.
ಈಗ ಕೋರ್ಟ್ ದರ್ಶನ್ ಅವರ ಷರತ್ತು ಬದ್ಧ ಜಾಮೀನನ್ನು ಸಡಿಲಿಸಿದ್ದು, ಕೋರ್ಟ್ ಅನುಮತಿಯಿಲ್ಲದೇ ದೇಶಬಿಟ್ಟು ತೆರಳುವಂತಿಲ್ಲ ಎಂದು ಹೇಳಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…