ಮನರಂಜನೆ

ಸದ್ಯ ಹಾಡು; ಅ. 21ರಂದು ‘ಬಘೀರ’ ಚಿತ್ರದ ಟ್ರೇಲರ್ ಬಿಡುಗಡೆ

ಶ್ರೀಮುರಳಿ ಅಭಿನಯದ ‘ಬಘೀರ’ ಚಿತ್ರದ ಬಿಡುಗಡೆಗೆ ಇನ್ನೇನು ಹೆಚ್ಚು ಸಮಯ ಉಳಿದಿಲ್ಲ. ಚಿತ್ರ ಬಿಡುಗಡೆಗೆ ಕೇವಲ 12 ದಿನಗಳಿದ್ದು, ಚಿತ್ರವನ್ನು ಪ್ರೇಕ್ಷಕರಿಗೆ ಮುಟ್ಟಿಸುವುದಕ್ಕೆ ಮುಂದಾಗಿದೆ. ಮೊದಲ ಹೆಜ್ಜೆಯಾಗಿ ಇದೇ ಸೋಮವಾರ, ಅಂದರೆ ಅ. 21ರಂದು ಚಿತ್ರದ ಟ್ರೇಲರ್‍ ಬಿಡುಗಡೆಯಾಗಿದೆ.

ಅದಕ್ಕೂ ಮೊದಲು ಚಿತ್ರದ ಮೊದಲ ಹಾಡಾದ ‘ರುಧಿರ ಧಾರ’ ಎಂಬ ಮೊದಲ ಹಾಡನ್ನು ಹೊಂಬಾಳೆ ಫಿಲ್ಮ್ಸ್ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಎರಡು ದಿನಗಳ ಹಿಂದೆ ಬಿಡುಗಡೆಯಾದ ಈ ಹಾಡು ಈಗಾಗಲೇ ಒಂದು ಮಿಲಿಯನ್‍ ವೀಕ್ಷಣೆ ಆಗಿರುವುದು ವಿಶೇಷ.

‘ರುಧಿರ ಧಾರ’ ಶೀರ್ಷಿಕೆ ಗೀತೆಗೆ ಅನಿರುದ್ಧ ಶಾಸ್ತ್ರೀ ಸಾಹಿತ್ಯ ಬರೆಯುವುದರ ಜತೆಗೆ ಹಾಡಿಗೆ ಧ್ವನಿ ನೀಡಿದ್ದಾರೆ. ಅಜನೀಶ್‌ ಲೋಕನಾಥ್‌ ಸಂಗೀತ ನಿರ್ದೇಶನ ಮಾಡಿದ್ದಾರೆ. ‘ರುಧಿರ ಧಾರ ಉಘೆ ಉಘೆ, ಮಾರ ಮಾರ ಕದನ ಕ್ರೂರ ಉಘೆ ಉಘೆ, ಬಘೀರ ಬಘೀರ, ಧ್ವಂಸ ಅಖಾಡ ಛಿದ್ರ ಮಾಡೋ ಅಟ್ಟಹಾಸ ಕೇಳು ಭೀಕರಾ, ಕಂಸ ಕಠೋರ ರಕ್ತ ಹೀರೋ ರುದ್ರ ರಕ್ಕಸ ಕಾಲ ಕಿಂಕರ…’ ಎಂದು ನಾಯಕನನ್ನು ಪರಿಚಯಿಸುವ ಗೀತೆ ಇದಾಗಿದ್ದು, ನಾಯಕ ಎಂಥವನೆಂದು ಈ ಹಾಡಿನಲ್ಲಿ ಬಣ್ಣಿಸಲಾಗಿದೆ.

‘ಬಘೀರ’ ಚಿತ್ರವನ್ನು ಹೊಂಬಾಳೆ ಫಿಲಂಸ್‌ನ ವಿಜಯ್‌ ಕಿರಗಂದೂರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದು, ಈ ಹಿಂದೆ ಯಶ್‍ ಅಭಿನಯದ ‘ಲಕ್ಕಿ’ ಚಿತ್ರವನ್ನು ನಿರ್ದೇಶನ ಮಾಡಿದ್ದ ಡಾ. ಸೂರಿ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ‘ಉಗ್ರಂ’, ‘ಕೆಜಿಎಫ್‍’ ಮತ್ತು ‘ಸಲಾರ್’ ಚಿತ್ರಗಳ ನಿರ್ದೇಶಕ ಪ್ರಶಾಂತ್‍ ನೀಲ್‍ ಈ ಚಿತ್ರಕ್ಕೆ ಕಥೆ ರಚಿಸಿದ್ದಾರೆ.

‘ಬಘೀರ’ ಚಿತ್ರದಲ್ಲಿ ಶ್ರೀಮುರಳಿ ಪೊಲೀಸ್‍ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದು, ಮಿಕ್ಕಂತೆ ರುಕ್ಮಿಣಿ ವಸಂತ್‍, ಪ್ರಕಾಶ್‍ ರೈ, ರಂಗಾಯಣ ರಘು, ಅಚ್ಯುತ್‍ ಕುಮಾರ್, ಗರುಡ ರಾಮ್‍ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅಜನೀಶ್‍ ಲೋಕನಾಥ್‍ ಸಂಗೀತ ಮತ್ತು ಎ.ಜೆ. ಶೆಟ್ಟಿ ಛಾಯಾಗ್ರಹಣವಿದೆ.

ಭೂಮಿಕಾ

Recent Posts

ಚಾರಣಕ್ಕೆ ಹೊಸ ಮಾರ್ಗಸೂಚಿ; ಮೆಚ್ಚುಗೆ

ನವೀನ್ ಡಿಸೋಜ ಚಾರಣಿಗರ ಸುರಕ್ಷತೆ, ಪ್ರಕೃತಿ ಸಂಪತ್ತಿನ ಉಳಿವಿಗೆ ಹೊಸ ಮಾರ್ಗಸೂಚಿ ಸಹಕಾರಿ; ಪರಿಣಾಮಕಾರಿಯಾಗಿ ಜಾರಿಗೊಳಿಸಲು ಒತ್ತಾಯ ಮಡಿಕೇರಿ: ಅರಣ್ಯ…

2 hours ago

ಖಾಸಗಿ ಶಾಲೆಗಳ ಆರ್ಭಟಕ್ಕೆ ಬಾಡಿದ ಸರ್ಕಾರಿ ಶಾಲೆ

ವರಹಳ್ಳಿ ಆನಂದ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಶಾಲೆಯಲ್ಲೀಗ ಕಲಿಯುತ್ತಿರುವುದು ಕೇವಲ ೩೯ ಮಕ್ಕಳು ಮೈಸೂರು: ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ…

2 hours ago

‘ಅಮೆರಿಕದಲ್ಲಿ ನೆಲೆ ಕಂಡುಕೊಂಡಿರುವ ಮಕ್ಕಳ ಭವಿಷ್ಯದ ಬಗ್ಗೆ ಭಯವಾಗುತ್ತದೆ…’

ಭಾರತದ ಕುರಿತು ಟ್ರಂಪ್ ಅವಹೇಳನಕಾರಿ ಹೇಳಿಕೆಗೆ ಒಂದು ಪ್ರತಿಕ್ರಿಯೆ ನಾನು ಅಮೆರಿಕಕ್ಕೆ ಪ್ರಥಮ ಬಾರಿಗೆ ಕಾಲಿಟ್ಟಿದ್ದು ಮೂರೂವರೆ ದಶಕಗಳಿಗೂ ಹಿಂದೆ.…

2 hours ago

ಕಾವೇರಿ ನದಿಯಲ್ಲಿ ಬರೀ ಬಂಡೆಗಲ್ಲುಗಳ ದರ್ಶನ

ಭೇರ್ಯ ಮಹೇಶ್ ಬಿರುಬಿಸಿಲಿಗೆ ನದಿಯಲ್ಲಿ ಕಡಿಮೆಯಾದ ನೀರಿನ ಹರಿವು; ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಆತಂಕ  ಕೆ.ಆರ್.ನಗರ: ಬಿರುಬಿಸಿಲಿನ ಝಳಕ್ಕೆ ಭತ್ತದ…

2 hours ago

ಮದ್ದೂರಮ್ಮ ಉತ್ಸವ; ಕಳೆಗಟ್ಟಿದ ದನಗಳ ಜಾತ್ರೆ

ಎಂ.ಆರ್.ಚಕ್ರಪಾಣಿ ಜಾತ್ರೆಯಲ್ಲಿ ಹಳ್ಳಿಕಾರ್ ಎತ್ತುಗಳು, ಟಗರುಗಳ ಆಕರ್ಷಣೆ; ಸ್ಥಳವಕಾಶದ ಕೊರತೆಗೆ ರೈತರು ಬೇಸರ ಮದ್ದೂರು: ಪಟ್ಟಣದ ಸರ್ಕಾರಿ ಕ್ರೀಡಾಂಗಣದಲ್ಲಿ ಶನಿವಾರ…

2 hours ago