ಮನರಂಜನೆ

ಸದ್ಯ ಹಾಡು; ಅ. 21ರಂದು ‘ಬಘೀರ’ ಚಿತ್ರದ ಟ್ರೇಲರ್ ಬಿಡುಗಡೆ

ಶ್ರೀಮುರಳಿ ಅಭಿನಯದ ‘ಬಘೀರ’ ಚಿತ್ರದ ಬಿಡುಗಡೆಗೆ ಇನ್ನೇನು ಹೆಚ್ಚು ಸಮಯ ಉಳಿದಿಲ್ಲ. ಚಿತ್ರ ಬಿಡುಗಡೆಗೆ ಕೇವಲ 12 ದಿನಗಳಿದ್ದು, ಚಿತ್ರವನ್ನು ಪ್ರೇಕ್ಷಕರಿಗೆ ಮುಟ್ಟಿಸುವುದಕ್ಕೆ ಮುಂದಾಗಿದೆ. ಮೊದಲ ಹೆಜ್ಜೆಯಾಗಿ ಇದೇ ಸೋಮವಾರ, ಅಂದರೆ ಅ. 21ರಂದು ಚಿತ್ರದ ಟ್ರೇಲರ್‍ ಬಿಡುಗಡೆಯಾಗಿದೆ.

ಅದಕ್ಕೂ ಮೊದಲು ಚಿತ್ರದ ಮೊದಲ ಹಾಡಾದ ‘ರುಧಿರ ಧಾರ’ ಎಂಬ ಮೊದಲ ಹಾಡನ್ನು ಹೊಂಬಾಳೆ ಫಿಲ್ಮ್ಸ್ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಎರಡು ದಿನಗಳ ಹಿಂದೆ ಬಿಡುಗಡೆಯಾದ ಈ ಹಾಡು ಈಗಾಗಲೇ ಒಂದು ಮಿಲಿಯನ್‍ ವೀಕ್ಷಣೆ ಆಗಿರುವುದು ವಿಶೇಷ.

‘ರುಧಿರ ಧಾರ’ ಶೀರ್ಷಿಕೆ ಗೀತೆಗೆ ಅನಿರುದ್ಧ ಶಾಸ್ತ್ರೀ ಸಾಹಿತ್ಯ ಬರೆಯುವುದರ ಜತೆಗೆ ಹಾಡಿಗೆ ಧ್ವನಿ ನೀಡಿದ್ದಾರೆ. ಅಜನೀಶ್‌ ಲೋಕನಾಥ್‌ ಸಂಗೀತ ನಿರ್ದೇಶನ ಮಾಡಿದ್ದಾರೆ. ‘ರುಧಿರ ಧಾರ ಉಘೆ ಉಘೆ, ಮಾರ ಮಾರ ಕದನ ಕ್ರೂರ ಉಘೆ ಉಘೆ, ಬಘೀರ ಬಘೀರ, ಧ್ವಂಸ ಅಖಾಡ ಛಿದ್ರ ಮಾಡೋ ಅಟ್ಟಹಾಸ ಕೇಳು ಭೀಕರಾ, ಕಂಸ ಕಠೋರ ರಕ್ತ ಹೀರೋ ರುದ್ರ ರಕ್ಕಸ ಕಾಲ ಕಿಂಕರ…’ ಎಂದು ನಾಯಕನನ್ನು ಪರಿಚಯಿಸುವ ಗೀತೆ ಇದಾಗಿದ್ದು, ನಾಯಕ ಎಂಥವನೆಂದು ಈ ಹಾಡಿನಲ್ಲಿ ಬಣ್ಣಿಸಲಾಗಿದೆ.

‘ಬಘೀರ’ ಚಿತ್ರವನ್ನು ಹೊಂಬಾಳೆ ಫಿಲಂಸ್‌ನ ವಿಜಯ್‌ ಕಿರಗಂದೂರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದು, ಈ ಹಿಂದೆ ಯಶ್‍ ಅಭಿನಯದ ‘ಲಕ್ಕಿ’ ಚಿತ್ರವನ್ನು ನಿರ್ದೇಶನ ಮಾಡಿದ್ದ ಡಾ. ಸೂರಿ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ‘ಉಗ್ರಂ’, ‘ಕೆಜಿಎಫ್‍’ ಮತ್ತು ‘ಸಲಾರ್’ ಚಿತ್ರಗಳ ನಿರ್ದೇಶಕ ಪ್ರಶಾಂತ್‍ ನೀಲ್‍ ಈ ಚಿತ್ರಕ್ಕೆ ಕಥೆ ರಚಿಸಿದ್ದಾರೆ.

‘ಬಘೀರ’ ಚಿತ್ರದಲ್ಲಿ ಶ್ರೀಮುರಳಿ ಪೊಲೀಸ್‍ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದು, ಮಿಕ್ಕಂತೆ ರುಕ್ಮಿಣಿ ವಸಂತ್‍, ಪ್ರಕಾಶ್‍ ರೈ, ರಂಗಾಯಣ ರಘು, ಅಚ್ಯುತ್‍ ಕುಮಾರ್, ಗರುಡ ರಾಮ್‍ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅಜನೀಶ್‍ ಲೋಕನಾಥ್‍ ಸಂಗೀತ ಮತ್ತು ಎ.ಜೆ. ಶೆಟ್ಟಿ ಛಾಯಾಗ್ರಹಣವಿದೆ.

ಭೂಮಿಕಾ

Recent Posts

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

3 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

3 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

3 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

3 hours ago

ಇತಿಹಾಸದ ಪುಟಗಳಲ್ಲಿ ಜಿರಳೆಗಳು

ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…

3 hours ago