ಮನರಂಜನೆ

ಒಂದೇ ವೇದಿಕೆಯಲ್ಲಿ ‘ಕಸ್ಟಡಿ’ ಹಾಗೂ ‘ಪಾಲ್ಗುಣಿ’ ಚಿತ್ರಗಳ ಟ್ರೇಲರ್ ಬಿಡುಗಡೆ

ಈ ಹಿಂದೆ ‘ನಮ್‍ ಗಣಿ ಬಿಕಾಂ ಪಾಸ್‍’ ಮುಂತಾದ ಚಿತ್ರಗಳನ್ನು ನಿರ್ಮಿಸಿದ್ದ ನಾಗೇಶ್‍ ಕುಮಾರ್‌, ಈಗ ಎರಡು ಚಿತ್ರಗಳನ್ನು ನಿರ್ಮಿಸಿದ್ದಾರೆ. ಎರಡೂ ಚಿತ್ರಗಳನ್ನು ಜೆ.ಜೆ.ಶ್ರೀನಿವಾಸ್‍ ನಿರ್ದೇಶಿಸಿದ್ದು, ಈ ಎರಡೂ ಚಿತ್ರಗಳು ಆಗಸ್ಟ್.08ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಒಬ್ಬರೇ ನಿರ್ಮಿಸಿದ ಹಾಗೂ ಒಬ್ಬರೇ ನಿರ್ದೇಶಿಸಿದ ಎರಡು ಚಿತ್ರಗಳು ಒಂದೇ ದಿನ ಬಿಡುಗಡೆಯಾಗುತ್ತಿರುವುದು ವಿಶೇಷ.

ಅಂದಹಾಗೆ, ಆ ಚಿತ್ರಗಳ ಹೆಸರು ‘ಕಸ್ಟಡಿ’ ಮತ್ತು ‘ಪಾಲ್ಗುಣಿ’. ಈ ಪೈಕಿ ಮೊದಲನೆಯದು ಆ್ಯಕ್ಷನ್ ಚಿತ್ರವಾದರೆ, ಎರಡನೆಯದು ಮಹಿಳಾ ಪ್ರಧಾನ ಚಿತ್ರ. ಈ ಎರಡೂ ಚಿತ್ರಗಳ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಗಿವೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದು ಹಾಗೂ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಈ ಎರಡು ಚಿತ್ರಗಳ ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

ಈ ಎರಡೂ ಚಿತ್ರಗಳ ಕುರಿತು ಮಾತನಾಡುವ ನಿರ್ದೇಶಕ ಶ್ರೀನಿವಾಸ್‍, ‘ಕಸ್ಟಡಿ’ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರವಾದರೆ, ‘ಪಾಲ್ಗುಣಿ’ ಮಂಡ್ಯದಲ್ಲಿ ನಡೆದ ನೈಜ ಘಟನೆಯೊಂದನ್ನು ಆಧರಿಸಿದ ಚಿತ್ರ. ನಾವು ಮೊದಲು ಪ್ರಾರಂಭಿಸಿದ್ದು ‘ಪಾಲ್ಗುಣಿ’. ಆ ಚಿತ್ರ ಮುಕ್ತಾಯದ ಹಂತದಲ್ಲಿ ‘ಭೀಮ’ ಚಿತ್ರವು ಬಿಡುಗಡೆಯಾಗಿತ್ತು. ಆ ಚಿತ್ರದಲ್ಲಿ ಪ್ರಿಯಾ ಅವರ ಅಭಿನಯ ನೋಡಿ, ಕಥೆ ಒಂದಿಷ್ಟು ಬದಲಾಯಿಸಿ ಅವರಿಂದ ಒಂದು ಪಾತ್ರ ಮಾಡಿಸಿದರೆ ಹೇಗೆ ಎಂಬ ಯೋಚನೆಯಲ್ಲಿ ಅವರನ್ನು ಭೇಟಿ ಮಾಡಿದೆ. ಅವರನ್ನು ಭೇಟಿ ಮಾಡಿ ಬಂದ ನಂತರ ಬೇರೆಯ ಯೋಚನೆ ಹೊಳೆಯಿತು. ಎರಡು ದಿನಗಳ ನಂತರ ಅವರನ್ನು ಭೇಟಿ ಮಾಡಿ ಇನ್ನೊಂದು ಕಥೆ ಹೇಳಿದೆ. ಅವರಿಗೆ ಇಷ್ಟವಾಯಿತು. ಅದೇ ‘ಕಸ್ಟಡಿ’. ಈ ಚಿತ್ರವು ಸೈಬರ್‌ ಕ್ರೈಮ್‍ ಸುತ್ತ ಸುತ್ತುವ ಚಿತ್ರ. ಇದರಲ್ಲಿ ನಾನು ಸಹ ಒಂದು ಪ್ರಮುಖ ಪಾತ್ರ ನಿರ್ವಹಿಸಿದ್ದೇನೆ’ ಎಂದರು.

ಈ ಚಿತ್ರವನ್ನು ನಾಗೇಶ್‍ ಕುಮಾರ್‌ ನಿರ್ಮಿಸುತ್ತಿರುವುದಷ್ಟೇ ಅಲ್ಲ, ತಮ್ಮದೇ ಸಂಸ್ಥೆಯಡಿ ವಿತರಣೆ ಮಾಡುತ್ತಿದ್ದಾರೆ. ‘ಈ ಎರಡೂ ಚಿತ್ರಗಳು ಆಗಸ್ಟ್. 08ರಂದು ಬಿಡುಗಡೆಯಾಗುತ್ತಿದೆ. ನಾವೇ ಕೆಲವು ಸ್ನೇಹಿತರು ಸೇರಿ ಈ ಚಿತ್ರಗಳನ್ನು ವಿತರಣೆ ಕೂಡ ಮಾಡುತ್ತಿದ್ದೇವೆ‌’ ಎಂದು ತಿಳಿಸಿದರು.

‘ಭೀಮ’ ಖ್ಯಾತಿಯ ಪ್ರಿಯಾ ಮಾತನಾಡಿ, ‘ನನಗೆ ನಿರ್ದೇಶಕರು ಬಂದು ಕಥೆ ಹೇಳಿದ್ದು ಬೇರೆ ಚಿತ್ರದ್ದು. ಆದರೆ, ಮೂರು ದಿನಗಳ ಬಳಿಕ ಮತ್ತೊಂದು ಕಥೆ ಹೇಳಿದರು. ಅದೇ ‘ಕಸ್ಟಡಿ’ ಚಿತ್ರದ ಕಥೆ. ನಾನು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿ. ದುರ್ಗಾ ಪರಮೇಶ್ವರಿ ನನ್ನ ಪಾತ್ರದ ಹೆಸರು ಎಂದರು‌.

‘ಪಾಲ್ಗುಣಿ’ ಚಿತ್ರದಲ್ಲಿ ರೇಖಾಶ್ರೀ ಹಳ್ಳಿ ಹುಡುಗಿ ‘ಪಾಲ್ಗುಣಿ’ಯಾಗಿ ನಟಿಸಿದ್ದಾರೆ. ಈ ಎರಡೂ ಚಿತ್ರಗಳಲ್ಲಿ ನಟ-ಸಂಕಲನಕಾರ ನಾಗೇಂದ್ರ ಅರಸ್‍ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

9 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

9 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

10 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

10 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

11 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

11 hours ago