ಮನರಂಜನೆ

ಮೋಷನ್‍ ಪೋಸ್ಟರ್‌ನಲ್ಲಿ ಗೊತ್ತಾಗಲಿದೆಯಾ ‘ದಿ ಡೆವಿಲ್’ ಚಿತ್ರದ ಬಿಡುಗಡೆ ದಿನಾಂಕ?

ದರ್ಶನ್‍ ಅಭಿನಯದ ‘ದಿ ಡೆವಿಲ್‍’ ಚಿತ್ರದ ಮಾತಿನ ಭಾಗದ ಚಿತ್ರೀಕರಣ ಮುಗಿದಿದ್ದು, ಸದ್ಯ ಚಿತ್ರತಂಡ ಹಾಡಿನ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದೆ. ಈ ಮಧ್ಯೆ, ಚಿತ್ರತಂಡದಿಂದ ಅಪ್ಡೇಟ್‍ ಸಿಕ್ಕಿದ್ದು, ಇದೇ ಶನಿವಾರ (ಜುಲೈ 19) ಚಿತ್ರದ ಮೋಷನ್‍ ಪೋಸ್ಟರ್‌ ಬಿಡುಗಡೆಯಾಗಲಿದೆ.

‘ದಿ ಡೆವಿಲ್‍’ ಚಿತ್ರದ ಹಾಡುಗಳ ಚಿತ್ರೀಕರಣ ಮಾತ್ರ ಬಾಕಿ ಇದ್ದು, ಹಾಡುಗಳನ್ನು ವಿದೇಶದಲ್ಲಿ ಚಿತ್ರೀಕರಿಸುವುದಕ್ಕೆ ಚಿತ್ರತಂಡ ನಿರ್ಧರಿಸಿತ್ತು. ಆದರೆ, ಕೊಲೆ ಆರೋಪದಡಿ ಕಳೆದ ವರ್ಷ ಬಂಧನಕ್ಕೊಳಗಾಗಿದ್ದ ದರ್ಶನ್‍, ದೇಶ ಬಿಟ್ಟು ಹೋಗದಂತೆ ನ್ಯಾಯಾಲಯವು ಸೂಚಿಸಿತ್ತು. ಆ ನಂತರ ವಿದೇಶಕ್ಕೆ ಹೋಗಿ ಚಿತ್ರೀಕರಣ ಮಾಡುವುದಕ್ಕೆ ನ್ಯಾಯಾಲಯವು ದರ್ಶನ್‍ಗೆ ಕೆಲವೇ ದಿನಗಳ ಹಿಂದಷ್ಟೇ ಅನುಮತಿ ನೀಡಿದೆ. ಅದರಂತೆ ದರ್ಶನ್‍ ಮತ್ತು ಚಿತ್ರತಂಡದವರು ಥಾಯ್ಲೆಂಡ್‍ನಲ್ಲಿ ಹಾಡಿನ ಚಿತ್ರೀಕರಣ ಮುಗಿಸಿ ವಾಪಸ್ಸಾಗಲಿದ್ದಾರೆ.

‘ದಿ ಡೆವಿಲ್‍’ ಚಿತ್ರದ ಪೋಸ್ಟ್ ಪ್ರೊಡಕ್ಷನ್‍ ಕೆಲಸಗಳು ಜೊತೆಜೊತೆಯಾಗಿ ನಡೆಯುತ್ತಿದ್ದು, ಅದೂ ಸಹ ಸದ್ಯದಲ್ಲೇ ಮುಗಿಯುವ ನಿರೀಕ್ಷೆ ಇದೆ. ಚಿತ್ರವು ಇದೇ ವರ್ಷ ಬಿಡುಗಡೆಯಾಗಲಿದೆ ಎಂದು ಚಿತ್ರತಂಡದವರು ಹೇಳಿಕೊಂಡಿದ್ದಾರೆ. ಆದರೆ, ಚಿತ್ರ ಯಾವಾಗ ಬಿಡುಗಡೆ ಎಂದು ಅಧಿಕೃತ ಬಿಡುಗಡೆ ದಿನಾಂಕವನ್ನು ಘೋಷಿಸಿಲ್ಲ.

ಚಿತ್ರ ಬಿಡುಗಡೆ ಯಾವಾಗ? ಎಂಬ ಪ್ರಶ್ನೆ ದರ್ಶನ್‍ ಅಭಿಮಾನಿಗಳಲ್ಲಿ ಇದ್ದು, ಈ ಪ್ರಶ್ನೆಗೆ ಇನ್ನಷ್ಟೇ ಉತ್ತರ ಸಿಗಬೇಕಿದೆ. ಬಹುಶಃ ಶನಿವಾರ ಬಿಡುಗಡೆಯಾಗಲಿರುವ ಮೋಷನ್‍ ಪೋಸ್ಟರ್‍ನಲ್ಲಿ ಚಿತ್ರದ ಬಿಡುಗಡೆ ದಿನಾಂಕ ಘೋಷಿಸಬಹುದು ಎಂದು ಹೇಳಲಾಗುತ್ತಿದೆ.

‘ದಿ ಡೆವಿಲ್‍’ ಚಿತ್ರವನ್ನು ಶ್ರೀಮಾತಾ ಕಂಬೈನ್ಸ್ ಬ್ಯಾನರ್‌ ಅಡಿ ಪ್ರಕಾಶ್‍ ವೀರ್ ನಿರ್ಮಿಸಿ-ನಿರ್ದೇಶಿಸುತ್ತಿದ್ದಾರೆ. ಚಿತ್ರದಲ್ಲಿ ದರ್ಶನ್, ರಚನಾ ರೈ, ಮಹೇಶ್‍ ಮಂಜ್ರೇಕರ್, ಅಚ್ಯುತ್ ಕುಮಾರ್, ತುಳಸಿ,‌ ಶ್ರೀನಿವಾಸಪ್ರಭು, ಶೋಭರಾಜ್ ಮುಂತಾದವರು ನಟಿಸುತ್ತಿದ್ದಾರೆ. ಚಿತ್ರಕ್ಕೆ ಈಗಾಗಲೇ ಬೆಂಗಳೂರು, ಮೈಸೂರು, ರಾಜಸ್ತಾನ ಮುಂತಾದ ಕಡೆಗಳಲ್ಲಿ 60ಕ್ಕೂ ಹೆಚ್ಚು ದಿನಗಳ ಚಿತ್ರೀಕರಣ ಮುಗಿದಿದೆ. ಚಿತ್ರಕ್ಕೆ ಸುಧಾಕರ್‌ ರಾಜ್‍ ಛಾಯಾಗ್ರಹಣ ಮತ್ತು ಅಜನೀಶ್‍ ಲೋಕನಾಥ್‍ ಸಂಗೀತವಿದೆ.

ಆಂದೋಲನ ಡೆಸ್ಕ್

Recent Posts

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

9 mins ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

23 mins ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

29 mins ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

45 mins ago

ಎಲ್‌ಪಿಜಿ ಗ್ರಾಹಕರಿಗೆ ಬಯೋಮೆಟ್ರಿಕ್ ದೃಢಿಕರಣ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ

ಹೊಸದಿಲ್ಲಿ : ಹಾರ್ಮುಜ್ ಜಲಸಂಧಿ ಸಂಘರ್ಷದಿಂದ ಉಂಟಾದ ಅಡುಗೆ ಅನಿಲ (ಎಲ್‌ಪಿಜಿ) ಸರಬರಾಜು ಕೊರತೆಯ ನಡುವೆ ಕೇಂದ್ರ ಪೆಟ್ರೋಲಿಯಂ ಮತ್ತು…

53 mins ago

ಜಾಹೀರಾತು ಫಲಕಗಳಲ್ಲಿ ಪ್ಲಾಸ್ಟಿಕ್ ನಿಷೇಧ : ಬೈರತಿ ಸುರೇಶ್

• ಅನಧಿಕೃತ ಜಾಹೀರಾತು ಹಾಕಿದರೆ ಕ್ರಿಮಿನಲ್ ಕೇಸ್ • ವಿಧಾನಸಭೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜಾಹೀರಾತು ನೀತಿ ಮಸೂದೆ ಮಂಡನೆ,…

2 hours ago