ನಂಜನಗೂಡು: ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಅವರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ್ದ ಬೆನ್ನಲ್ಲೇ ಸುತ್ತೂರು ಮಠಕ್ಕೆ ಭೇಟಿ ನೀಡಿದ್ದರು.
ಧನ್ಯತಾ ಜೊತೆ ಡಾಲಿ ಮದುವೆಗೆ ಸಜ್ಜಾಗಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕಪಿಲಾ ನದಿ ತೀರದಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡಿದರು.
ಈ ವೇಳೆ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ಆಶೀರ್ವಾದ ಪಡೆದು, ಮದುವೆಗೆ ಆಗಮಿಸುವಂತೆ ಆಮಂತ್ರಣ ಪತ್ರ ನೀಡಿದರು.
ಬಳಿಕ ಸುತ್ತೂರು ಮಠದಲ್ಲಿ ಶಿವರಾತ್ರಿ ಶಿವಯೋಗಿಗಲ 1065ನೇ ಜಯಂತಿಯ ಹಿನ್ನೆಲೆಯಲ್ಲಿ ನಂದಿ ಧ್ವಜಕ್ಕೆ ಪೂಜೆ ಜರುಗಿತು. ಈ ವೇಳೆ ನಂದಿಧ್ವಜ ಡಾಲಿ ಧನಂಜಯ್ ಅವರು ನಂದಿ ಧ್ವಜ ಹೊತ್ತು ಕುಣಿದು ಸಂಭ್ರಮಿಸಿದರು. ಡಾಲಿ ಹಾಗೂ ಧನ್ಯತಾಗೆ ನಟ ನಾಗಭೂಷಣ್ ಕೂಡ ಸಾಥ್ ನೀಡಿದರು. ಈ ವೇಳೆ ಡಾಲಿಯನ್ನು ನೋಡಿದ ಅಭಿಮಾನಿಗಳು ಧನಂಜಯ್ ಪರ ಜೈಕಾರ ಹಾಕಿ, ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು.
ಇನ್ನು 2025ರ ಫೆಬ್ರವರಿ 16ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಟ ಡಾಲಿ ಧನಂಜಯ್ ಮದುವೆ ಆಗಲಿದ್ದಾರೆ. ಈ ಮದುವೆಗೆ ರಾಜಕೀಯ ಗಣ್ಯರು ಹಾಗೂ ಸಿನಿಮಾ ಸ್ಟಾರ್ಗಳಿಗೆ ಈಗಾಗಲೇ ಆಮಂತ್ರಣ ಪತ್ರ ನೀಡಲಾಗಿದ್ದು, ಇಂದು ಸುತ್ತೂರು ಶ್ರೀಗಳನ್ನು ಭೇಟಿ ಮಾಡಿ ಮದುವೆಗೆ ಆಗಮಿಸುವಂತೆ ಆಮಂತ್ರಣ ಪತ್ರ ನೀಡಿದ್ದಾರೆ.
ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್ಜಿ ಯೋಧರು ಹುತಾತ್ಮರಾಗಿದ್ದಾರೆ.…
ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…
ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…
ಬೆಂಗಳೂರು : ಬಜೆಟ್ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…