ಮನರಂಜನೆ

ಹುಟ್ಟುಹಬ್ಬ ಆಚರಿಸಿಕೊಂಡ ಕೃಷ್ಣಗೆ ಎರಡು ಗಿಫ್ಟ್; ಏನದು?

‘ಮದರಂಗಿ’ ಕೃಷ್ಣ ಅಲಿಯಾಸ್‍ ‘ಡಾರ್ಲಿಂಗ್’ ಕೃಷ್ಣ, ಗುರುವಾರ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಅವರ ಮುಂಬರುವ ಚಿತ್ರಗಳ ತಂಡಗಳಿಂದ ಎರಡು ಗಿಫ್ಟ್ ಸಿಕ್ಕಿದೆ.

ಪ್ರಮುಖವಾಗಿ, ‘ಬ್ರ್ಯಾಟ್‍’ ಚಿತ್ರತಂಡದವರು ಕೃಷ್ಣಗೆ ಒಂದು ಟೀಸರ್‍ ಉಡುಗೊರೆಯಾಗಿ ನೀಡಿದ್ದಾರೆ. ‘ಫಸ್ಟ್ ರ‍್ಯಾಂಕ್ ರಾಜು’ ನಿರ್ಮಿಸಿದ್ದ ಮಂಜುನಾಥ್ ಕಂದಕೂರ್ ನಿರ್ಮಿಸುತ್ತಿರುವ ಮತ್ತು ಶಶಾಂಕ್ ನಿರ್ದೇಶನದ ‘ಬ್ರ್ಯಾಟ್‍’ ಚಿತ್ರವು ಸೆಪ್ಟೆಂಬರ್‍ ತಿಂಗಳಲ್ಲಿ ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಟೀಸರ್‍ ಬಿಡುಗಡೆ ಮಾಡಲಾಗಿದೆ. ಈ ಟೀಸರ್‍ನಲ್ಲಿ ಕೃಷ್ಣ ಅವರ ಪಾತ್ರದ ಪರಿಚಯವನ್ನು ಮಾಡಿಕೊಡಲಾಗಿದೆ. ಈ ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡವು ನಾಯಕನಿಗೆ ಹುಟ್ಟುಹಬ್ಬದ ಶುಭಾಶಯ ಹೇಳಿದೆ. ಚಿತ್ರದಲ್ಲಿ ಕೃಷ್ಣ ಜೊತೆಗೆ ಅಚ್ಯುತ್‍ ಕುಮಾರ್, ಮನಿಶಾ ಕಂದಕೂರ್, ರಮೇಶ್ ಇಂದಿರಾ, ಡ್ರ್ಯಾಗನ್ ಮಂಜು ಮುಂತಾದವರು ನಟಿಸುತ್ತಿದ್ದು, ಅರ್ಜುನ್‍ ಜನ್ಯ ಸಂಗೀತ ಮತ್ತು ಅಭಿಲಾಶ್ ಕಲ್ಲತ್ತಿ ಛಾಯಾಗ್ರಹಣವಿದೆ‌.

ಇದಲ್ಲದೆ ‘ಫಾದರ್‍’ ಚಿತ್ರದ ಪೋಸ್ಟರ್‍ ಸಹ ಬಿಡುಗಡೆ ಆಗಿದೆ. ಆರ್‍. ಚಂದ್ರು ಒಡೆತನದ ಆರ್.ಸಿ. ಸ್ಟುಡಿಯೋಸ್ ನಿರ್ಮಾಣದ ‘ಫಾದರ್’ ಚಿತ್ರ ಇದೀಗ ಪ್ರೇಕ್ಷಕರ ಮುಂದೆ ಬರಲು ತಯಾರಿ ನಡೆಸುತ್ತಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಈ ಚಿತ್ರದ ಹೊಸ ಪೋಸ್ಟರ್‍ ಕೃಷ್ಣ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆ ಆಗಿದೆ. ಪ್ರಕಾಶ್‍ ರೈ ಮತ್ತು ಕೃಷ್ಣ ತಂದೆ-ಮಗನಾಗಿ ಅಭಿನಯಿಸಿರುವ ಈ ಚಿತ್ರದಲ್ಲಿ ಅಮೃತಾ ಅಯ್ಯಂಗಾರ್‍ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಮೈಸೂರು, ಧರ್ಮಸ್ಥಳ, ಮಂಗಳೂರು, ಬೆಂಗಳೂರು ಮುಂತಾದ ಕಡೆಗಳಲ್ಲಿ ಚಿತ್ರೀಕರಣಗೊಂಡಿರುವ ಈ ಸಿನಿಮಾಗೆ ವಾರಣಾಸಿಯಲ್ಲೂ ಚಿತ್ರೀಕರಣವಾಗಿದೆ. ರಾಜ್‍ ಮೋಹನ್‍ ನಿರ್ದೇಶನ ಮಾಡಿದ್ದಾರೆ. ಸುಜ್ಞಾನ್ ಛಾಯಾಗ್ರಹಣವಿದೆ. ಗೌರ ಹರಿ ಸಂಗೀತ ಚಿತ್ರಕ್ಕಿದೆ.

ಸದ್ಯ, ಕೃಷ್ಣ ಈ ಎರಡು ಚಿತ್ರಗಳಲ್ಲಿ ನಟಿಸಿದ್ದು, ಎರಡೂ ಚಿತ್ರಗಳು ಇದೇ ವರ್ಷ ಒಂದರಹಿಂದೊಂದು ಬಿಡುಗಡೆಯಾಗುತ್ತಿವೆ. ಈ ಪೈಕಿ, ‘ಫಾದರ್‍’ ಚಿತ್ರದ ಕೆಲಸಗಳು ಬಹುತೇಕ ಮುಗಿಯುತ್ತಾ ಬಂದಿದ್ದು, ಅದು ಮೊದಲು ಬಿಡುಗಡೆ ಆಗುವ ಸಾಧ್ಯತೆ ಇದೆ. ಅದರ ನಂತರ ಸೆಪ್ಟೆಂಬರ್‍ ತಿಂಗಳಲ್ಲಿ ‘ಬ್ರ್ಯಾಟ್‍’ ಚಿತ್ರ ಸಹ ಬಿಡುಗಡೆಯಾಗಲಿದೆ

ಆಂದೋಲನ ಡೆಸ್ಕ್

Recent Posts

ಮತ್ತೆ ಮುಷ್ಕರಕ್ಕೆ ಸಜ್ಜಾಗುತ್ತಿರುವ ಸಾರಿಗೆ ನೌಕರರು

ಬೆಂಗಳೂರು: ರಾಜ್ಯಾದ್ಯಂತ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮತ್ತೊಮ್ಮೆ ಗಂಭೀರ ಸಂಕಷ್ಟದ ಅಂಚಿಗೆ ತಲುಪಿದೆ. ನಾಲ್ಕು ನಿಗಮಗಳ ಸಾರಿಗೆ ನೌಕರರು ಮತ್ತೆ…

5 mins ago

ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಮೈಸೂರು: ಮಳವಳ್ಳಿಯಲ್ಲಿ ನಡೆಯಲಿರುವ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ಮೈಸೂರಿಗೆ ಆಗಮಿಸಿದರು. ಮೈಸೂರಿನ…

27 mins ago

ಮೈಸೂರು: ಬೀದಿ ನಾಯಿಗಳನ್ನು ದತ್ತು ಪಡೆದ ವಿದೇಶಿ ಪ್ರಜೆಗಳು

ಮೈಸೂರು: ಮೈಸೂರು ಮಹಾನಗರ ಪಾಲಿಕೆ ಹಾಗೂ ಪಶು ಸಂಗೋಪನಾ ಇಲಾಖೆ ವತಿಯಿಂದ ಇಂದು ಬೀದಿ ನಾಯಿಗಳನ್ನು ದತ್ತು ನೀಡುವ ಕಾರ್ಯಕ್ರಮವನ್ನು…

45 mins ago

ಈ ಸರ್ಕಾರ ಬಂದ ಮೇಲೆ ರಾಜ್ಯದಲ್ಲಿ ಒಟ್ಟು 2,800 ರೈತರ ಆತ್ಮಹತ್ಯೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮೈಸೂರು: ರಾಜ್ಯ ಸರ್ಕಾರದ ದುರಾಡಳಿತದಿಂದ ರಾಜ್ಯದಲ್ಲಿ 2800 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.…

50 mins ago

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್

ಮೈಸೂರು: ಆರ್‌ಸಿಬಿ ಅಭಿಮಾನಿಗಳಿಗೆ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್‌ ಪ್ರಸಾದ್‌ ಗುಡ್‌ನ್ಯೂಸ್‌ ನೀಡಿದ್ದು, ಈ ಬಾರಿಯ ಐಪಿಎಲ್‌ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲಿ…

55 mins ago

ಮಗಳಿಗಾಗಿ ಕಿರುತೆರೆ ಪತ್ನಿಯನ್ನೇ ಕಿಡ್ನ್ಯಾಪ್‌ ಮಾಡಿದ ಸ್ಯಾಂಡಲ್‌ವುಡ್‌ ನಿರ್ಮಾಪಕ

ಬೆಂಗಳೂರು: ಮಗಳಿಗಾಗಿ ಪತ್ನಿ ಹಾಗೂ ನಟಿ ಚೈತ್ರಾರಾಮ್‌ ಅವರನ್ನು ನಿರ್ಮಾಪಕ ಹರ್ಷವರ್ಧನ್‌ ಕಿಡ್ನ್ಯಾಪ್‌ ಮಾಡಿದ ಘಟನೆ ನಡೆದಿದ್ದು, ಪ್ರಕರಣ ಸುಖಾಂತ್ಯವಾಗಿದೆ.…

1 hour ago