ಮನರಂಜನೆ

ಹುಟ್ಟುಹಬ್ಬ ಆಚರಿಸಿಕೊಂಡ ಕೃಷ್ಣಗೆ ಎರಡು ಗಿಫ್ಟ್; ಏನದು?

‘ಮದರಂಗಿ’ ಕೃಷ್ಣ ಅಲಿಯಾಸ್‍ ‘ಡಾರ್ಲಿಂಗ್’ ಕೃಷ್ಣ, ಗುರುವಾರ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಅವರ ಮುಂಬರುವ ಚಿತ್ರಗಳ ತಂಡಗಳಿಂದ ಎರಡು ಗಿಫ್ಟ್ ಸಿಕ್ಕಿದೆ.

ಪ್ರಮುಖವಾಗಿ, ‘ಬ್ರ್ಯಾಟ್‍’ ಚಿತ್ರತಂಡದವರು ಕೃಷ್ಣಗೆ ಒಂದು ಟೀಸರ್‍ ಉಡುಗೊರೆಯಾಗಿ ನೀಡಿದ್ದಾರೆ. ‘ಫಸ್ಟ್ ರ‍್ಯಾಂಕ್ ರಾಜು’ ನಿರ್ಮಿಸಿದ್ದ ಮಂಜುನಾಥ್ ಕಂದಕೂರ್ ನಿರ್ಮಿಸುತ್ತಿರುವ ಮತ್ತು ಶಶಾಂಕ್ ನಿರ್ದೇಶನದ ‘ಬ್ರ್ಯಾಟ್‍’ ಚಿತ್ರವು ಸೆಪ್ಟೆಂಬರ್‍ ತಿಂಗಳಲ್ಲಿ ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಟೀಸರ್‍ ಬಿಡುಗಡೆ ಮಾಡಲಾಗಿದೆ. ಈ ಟೀಸರ್‍ನಲ್ಲಿ ಕೃಷ್ಣ ಅವರ ಪಾತ್ರದ ಪರಿಚಯವನ್ನು ಮಾಡಿಕೊಡಲಾಗಿದೆ. ಈ ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡವು ನಾಯಕನಿಗೆ ಹುಟ್ಟುಹಬ್ಬದ ಶುಭಾಶಯ ಹೇಳಿದೆ. ಚಿತ್ರದಲ್ಲಿ ಕೃಷ್ಣ ಜೊತೆಗೆ ಅಚ್ಯುತ್‍ ಕುಮಾರ್, ಮನಿಶಾ ಕಂದಕೂರ್, ರಮೇಶ್ ಇಂದಿರಾ, ಡ್ರ್ಯಾಗನ್ ಮಂಜು ಮುಂತಾದವರು ನಟಿಸುತ್ತಿದ್ದು, ಅರ್ಜುನ್‍ ಜನ್ಯ ಸಂಗೀತ ಮತ್ತು ಅಭಿಲಾಶ್ ಕಲ್ಲತ್ತಿ ಛಾಯಾಗ್ರಹಣವಿದೆ‌.

ಇದಲ್ಲದೆ ‘ಫಾದರ್‍’ ಚಿತ್ರದ ಪೋಸ್ಟರ್‍ ಸಹ ಬಿಡುಗಡೆ ಆಗಿದೆ. ಆರ್‍. ಚಂದ್ರು ಒಡೆತನದ ಆರ್.ಸಿ. ಸ್ಟುಡಿಯೋಸ್ ನಿರ್ಮಾಣದ ‘ಫಾದರ್’ ಚಿತ್ರ ಇದೀಗ ಪ್ರೇಕ್ಷಕರ ಮುಂದೆ ಬರಲು ತಯಾರಿ ನಡೆಸುತ್ತಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಈ ಚಿತ್ರದ ಹೊಸ ಪೋಸ್ಟರ್‍ ಕೃಷ್ಣ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆ ಆಗಿದೆ. ಪ್ರಕಾಶ್‍ ರೈ ಮತ್ತು ಕೃಷ್ಣ ತಂದೆ-ಮಗನಾಗಿ ಅಭಿನಯಿಸಿರುವ ಈ ಚಿತ್ರದಲ್ಲಿ ಅಮೃತಾ ಅಯ್ಯಂಗಾರ್‍ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಮೈಸೂರು, ಧರ್ಮಸ್ಥಳ, ಮಂಗಳೂರು, ಬೆಂಗಳೂರು ಮುಂತಾದ ಕಡೆಗಳಲ್ಲಿ ಚಿತ್ರೀಕರಣಗೊಂಡಿರುವ ಈ ಸಿನಿಮಾಗೆ ವಾರಣಾಸಿಯಲ್ಲೂ ಚಿತ್ರೀಕರಣವಾಗಿದೆ. ರಾಜ್‍ ಮೋಹನ್‍ ನಿರ್ದೇಶನ ಮಾಡಿದ್ದಾರೆ. ಸುಜ್ಞಾನ್ ಛಾಯಾಗ್ರಹಣವಿದೆ. ಗೌರ ಹರಿ ಸಂಗೀತ ಚಿತ್ರಕ್ಕಿದೆ.

ಸದ್ಯ, ಕೃಷ್ಣ ಈ ಎರಡು ಚಿತ್ರಗಳಲ್ಲಿ ನಟಿಸಿದ್ದು, ಎರಡೂ ಚಿತ್ರಗಳು ಇದೇ ವರ್ಷ ಒಂದರಹಿಂದೊಂದು ಬಿಡುಗಡೆಯಾಗುತ್ತಿವೆ. ಈ ಪೈಕಿ, ‘ಫಾದರ್‍’ ಚಿತ್ರದ ಕೆಲಸಗಳು ಬಹುತೇಕ ಮುಗಿಯುತ್ತಾ ಬಂದಿದ್ದು, ಅದು ಮೊದಲು ಬಿಡುಗಡೆ ಆಗುವ ಸಾಧ್ಯತೆ ಇದೆ. ಅದರ ನಂತರ ಸೆಪ್ಟೆಂಬರ್‍ ತಿಂಗಳಲ್ಲಿ ‘ಬ್ರ್ಯಾಟ್‍’ ಚಿತ್ರ ಸಹ ಬಿಡುಗಡೆಯಾಗಲಿದೆ

ಆಂದೋಲನ ಡೆಸ್ಕ್

Recent Posts

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

1 hour ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

4 hours ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

6 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

6 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

6 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

7 hours ago