ಮನರಂಜನೆ

ಹುಟ್ಟುಹಬ್ಬ ಆಚರಿಸಿಕೊಂಡ ಕೃಷ್ಣಗೆ ಎರಡು ಗಿಫ್ಟ್; ಏನದು?

‘ಮದರಂಗಿ’ ಕೃಷ್ಣ ಅಲಿಯಾಸ್‍ ‘ಡಾರ್ಲಿಂಗ್’ ಕೃಷ್ಣ, ಗುರುವಾರ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಅವರ ಮುಂಬರುವ ಚಿತ್ರಗಳ ತಂಡಗಳಿಂದ ಎರಡು ಗಿಫ್ಟ್ ಸಿಕ್ಕಿದೆ.

ಪ್ರಮುಖವಾಗಿ, ‘ಬ್ರ್ಯಾಟ್‍’ ಚಿತ್ರತಂಡದವರು ಕೃಷ್ಣಗೆ ಒಂದು ಟೀಸರ್‍ ಉಡುಗೊರೆಯಾಗಿ ನೀಡಿದ್ದಾರೆ. ‘ಫಸ್ಟ್ ರ‍್ಯಾಂಕ್ ರಾಜು’ ನಿರ್ಮಿಸಿದ್ದ ಮಂಜುನಾಥ್ ಕಂದಕೂರ್ ನಿರ್ಮಿಸುತ್ತಿರುವ ಮತ್ತು ಶಶಾಂಕ್ ನಿರ್ದೇಶನದ ‘ಬ್ರ್ಯಾಟ್‍’ ಚಿತ್ರವು ಸೆಪ್ಟೆಂಬರ್‍ ತಿಂಗಳಲ್ಲಿ ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಟೀಸರ್‍ ಬಿಡುಗಡೆ ಮಾಡಲಾಗಿದೆ. ಈ ಟೀಸರ್‍ನಲ್ಲಿ ಕೃಷ್ಣ ಅವರ ಪಾತ್ರದ ಪರಿಚಯವನ್ನು ಮಾಡಿಕೊಡಲಾಗಿದೆ. ಈ ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡವು ನಾಯಕನಿಗೆ ಹುಟ್ಟುಹಬ್ಬದ ಶುಭಾಶಯ ಹೇಳಿದೆ. ಚಿತ್ರದಲ್ಲಿ ಕೃಷ್ಣ ಜೊತೆಗೆ ಅಚ್ಯುತ್‍ ಕುಮಾರ್, ಮನಿಶಾ ಕಂದಕೂರ್, ರಮೇಶ್ ಇಂದಿರಾ, ಡ್ರ್ಯಾಗನ್ ಮಂಜು ಮುಂತಾದವರು ನಟಿಸುತ್ತಿದ್ದು, ಅರ್ಜುನ್‍ ಜನ್ಯ ಸಂಗೀತ ಮತ್ತು ಅಭಿಲಾಶ್ ಕಲ್ಲತ್ತಿ ಛಾಯಾಗ್ರಹಣವಿದೆ‌.

ಇದಲ್ಲದೆ ‘ಫಾದರ್‍’ ಚಿತ್ರದ ಪೋಸ್ಟರ್‍ ಸಹ ಬಿಡುಗಡೆ ಆಗಿದೆ. ಆರ್‍. ಚಂದ್ರು ಒಡೆತನದ ಆರ್.ಸಿ. ಸ್ಟುಡಿಯೋಸ್ ನಿರ್ಮಾಣದ ‘ಫಾದರ್’ ಚಿತ್ರ ಇದೀಗ ಪ್ರೇಕ್ಷಕರ ಮುಂದೆ ಬರಲು ತಯಾರಿ ನಡೆಸುತ್ತಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಈ ಚಿತ್ರದ ಹೊಸ ಪೋಸ್ಟರ್‍ ಕೃಷ್ಣ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆ ಆಗಿದೆ. ಪ್ರಕಾಶ್‍ ರೈ ಮತ್ತು ಕೃಷ್ಣ ತಂದೆ-ಮಗನಾಗಿ ಅಭಿನಯಿಸಿರುವ ಈ ಚಿತ್ರದಲ್ಲಿ ಅಮೃತಾ ಅಯ್ಯಂಗಾರ್‍ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಮೈಸೂರು, ಧರ್ಮಸ್ಥಳ, ಮಂಗಳೂರು, ಬೆಂಗಳೂರು ಮುಂತಾದ ಕಡೆಗಳಲ್ಲಿ ಚಿತ್ರೀಕರಣಗೊಂಡಿರುವ ಈ ಸಿನಿಮಾಗೆ ವಾರಣಾಸಿಯಲ್ಲೂ ಚಿತ್ರೀಕರಣವಾಗಿದೆ. ರಾಜ್‍ ಮೋಹನ್‍ ನಿರ್ದೇಶನ ಮಾಡಿದ್ದಾರೆ. ಸುಜ್ಞಾನ್ ಛಾಯಾಗ್ರಹಣವಿದೆ. ಗೌರ ಹರಿ ಸಂಗೀತ ಚಿತ್ರಕ್ಕಿದೆ.

ಸದ್ಯ, ಕೃಷ್ಣ ಈ ಎರಡು ಚಿತ್ರಗಳಲ್ಲಿ ನಟಿಸಿದ್ದು, ಎರಡೂ ಚಿತ್ರಗಳು ಇದೇ ವರ್ಷ ಒಂದರಹಿಂದೊಂದು ಬಿಡುಗಡೆಯಾಗುತ್ತಿವೆ. ಈ ಪೈಕಿ, ‘ಫಾದರ್‍’ ಚಿತ್ರದ ಕೆಲಸಗಳು ಬಹುತೇಕ ಮುಗಿಯುತ್ತಾ ಬಂದಿದ್ದು, ಅದು ಮೊದಲು ಬಿಡುಗಡೆ ಆಗುವ ಸಾಧ್ಯತೆ ಇದೆ. ಅದರ ನಂತರ ಸೆಪ್ಟೆಂಬರ್‍ ತಿಂಗಳಲ್ಲಿ ‘ಬ್ರ್ಯಾಟ್‍’ ಚಿತ್ರ ಸಹ ಬಿಡುಗಡೆಯಾಗಲಿದೆ

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

5 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

5 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

6 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

8 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

12 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

12 hours ago