ಮೈಸೂರು: ದರ್ಶನ್ ಆಪ್ತೆ ಪವಿತ್ರಾಗೌಡ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗಾ ಮೂಲಕ ರೇಣುಕಾಸ್ವಾಮಿ ಅವರನ್ನು ಕೊಲೆ ಮಾಡಿದ ಅರೋಪದ ಮೇಲೆ ನಟ ದರ್ಶನ್ ಅವರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ.
ಬಳಿಕ ಮೈಸೂರಿನಿಂದ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದ್ದು, ದರ್ಶನ್ ಜತೆ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ 10 ಜನರನ್ನು ಪೊಲೀಸರು ಈಗಾಗಲೇ ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನ ಸಂಬಂಧ ಮೈಸೂರಿನಲ್ಲಿ ಪೊಲೀಸರು ಕಾರ್ಯಚರಣೆ ನಡೆಸಿದ ಬಗೆಗಿನ ಸಂಪೂರ್ಣ ವಿವರ ಇಲ್ಲಿದೆ ನೋಡಿ.
ದರ್ಶನ್ ನಟನೆಯ ಡೆವಿಲ್ ಚಿತ್ರದ ಶೂಟಿಂಗ್ ಮೈಸೂರಿನ ಲಲಿತ್ ಮಹಲ್ ಹೋಟೆಲ್ನಲ್ಲಿ ಚಿತ್ರೀಕರಣ ನಡೆಯುತ್ತಿದೆ. ಈ ಸಂಬಂಧ ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ವಾಸ್ತವ್ಯ ಹೂಡಿದ್ದಾರೆ.
ಈ ಚಿತ್ರಕ್ಕಾಗಿ ಅವರಿಗೆ ರ್ಯಾಡಿಸನ್ ಹೋಟೆಲ್ನಲ್ಲಿ ಜೂನ್.9 ರಿಂದ ರೂಂ ಬುಕ್ ಆಗಿತ್ತು. ಅದೇ ಹೋಟೆಲ್ನಲ್ಲಿ ತಂಗಿದ್ದರು. ಹೋಟೆಲ್ ಮುಂಭಾಗದಲ್ಲಿಯೇ KA 01 MY 7999 ನಂಬರಿನ ಕಾರು ಸಹಾ ಅಲ್ಲಿಯೇ ಉಳಿದಿತ್ತು.
ಈ ನಡುವೆ ಅವರು ಕವೆಂಪು ನಗರ ಗೋಲ್ಡ್ ಜಿಮ್ಗೆ ಹೋಗಿ ವರ್ಕೌಟ್ ಮುಗಿಸಿ ಮತ್ತೆ ಮರಳಿದ್ದಾರೆ. ಮತ್ತೆ ಅಲ್ಲಿಂದ ತಮ್ಮ ಸೇವಕರಿಂದ ಕಲ್ಲಂಗಡಿ ಜ್ಯೂಸ್ ತರಿಸಿಕೊಂಡು ಸೇವಿಸಿದ್ದಾರೆ. ಅದಾದ ಬಳಿಕ ಅಲ್ಲಿಂದ ಹೋಟೆಲ್ಗೆ ತೆರಳುವ ಮಾರ್ಗ ಮಧ್ಯೆದಲ್ಲಿ ಪೊಲೀಸರು ದರ್ಶನ್ನ್ನು ಬಂಧಿಸಿದ್ದಾರೆ.
ಬಂಧನದ ಬಳಿಕ ದರ್ಶನ್ ತಮ್ಮ ಕಾರಿನಲ್ಲಿ ಬರುವುದಾಗಿ ಹೇಳಿದ್ದರು. ಆದರೆ ಅದನ್ನು ನಿರಾಕರಿಸಿದ ಪೊಲೀಸರು ಆತನನ್ನು ಪೊಲೀಸ್ ವಾಹನದಲ್ಲಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…