ಮನರಂಜನೆ

ಮೈಸೂರಿನಲ್ಲಿ ದರ್ಶನ್ ಬಂಧನ ಹೇಗಾಯಿತು? ಇಲ್ಲಿದೆ ವಿವರ

ಮೈಸೂರು: ದರ್ಶನ್‌ ಆಪ್ತೆ ಪವಿತ್ರಾಗೌಡ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗಾ ಮೂಲಕ ರೇಣುಕಾಸ್ವಾಮಿ ಅವರನ್ನು ಕೊಲೆ ಮಾಡಿದ ಅರೋಪದ ಮೇಲೆ ನಟ ದರ್ಶನ್‌ ಅವರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ.

ಬಳಿಕ ಮೈಸೂರಿನಿಂದ ಬೆಂಗಳೂರಿಗೆ ಶಿಫ್ಟ್‌ ಮಾಡಲಾಗಿದ್ದು, ದರ್ಶನ್‌ ಜತೆ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ 10 ಜನರನ್ನು ಪೊಲೀಸರು ಈಗಾಗಲೇ ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಬಂಧನ ಸಂಬಂಧ ಮೈಸೂರಿನಲ್ಲಿ ಪೊಲೀಸರು ಕಾರ್ಯಚರಣೆ ನಡೆಸಿದ ಬಗೆಗಿನ ಸಂಪೂರ್ಣ ವಿವರ ಇಲ್ಲಿದೆ ನೋಡಿ.

ದರ್ಶನ್‌ ನಟನೆಯ ಡೆವಿಲ್‌ ಚಿತ್ರದ ಶೂಟಿಂಗ್‌ ಮೈಸೂರಿನ ಲಲಿತ್‌ ಮಹಲ್‌ ಹೋಟೆಲ್‌ನಲ್ಲಿ ಚಿತ್ರೀಕರಣ ನಡೆಯುತ್ತಿದೆ. ಈ ಸಂಬಂಧ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ.

ಈ ಚಿತ್ರಕ್ಕಾಗಿ ಅವರಿಗೆ ರ್ಯಾಡಿಸನ್‌ ಹೋಟೆಲ್‌ನಲ್ಲಿ ಜೂನ್‌.9 ರಿಂದ ರೂಂ ಬುಕ್‌ ಆಗಿತ್ತು. ಅದೇ ಹೋಟೆಲ್‌ನಲ್ಲಿ ತಂಗಿದ್ದರು. ಹೋಟೆಲ್‌ ಮುಂಭಾಗದಲ್ಲಿಯೇ KA 01 MY 7999 ನಂಬರಿನ ಕಾರು ಸಹಾ ಅಲ್ಲಿಯೇ ಉಳಿದಿತ್ತು.

ಈ ನಡುವೆ ಅವರು ಕವೆಂಪು ನಗರ ಗೋಲ್ಡ್‌ ಜಿಮ್‌ಗೆ ಹೋಗಿ ವರ್ಕೌಟ್‌ ಮುಗಿಸಿ ಮತ್ತೆ ಮರಳಿದ್ದಾರೆ. ಮತ್ತೆ ಅಲ್ಲಿಂದ ತಮ್ಮ ಸೇವಕರಿಂದ ಕಲ್ಲಂಗಡಿ ಜ್ಯೂಸ್‌ ತರಿಸಿಕೊಂಡು ಸೇವಿಸಿದ್ದಾರೆ. ಅದಾದ ಬಳಿಕ ಅಲ್ಲಿಂದ ಹೋಟೆಲ್‌ಗೆ ತೆರಳುವ ಮಾರ್ಗ ಮಧ್ಯೆದಲ್ಲಿ ಪೊಲೀಸರು ದರ್ಶನ್‌ನ್ನು ಬಂಧಿಸಿದ್ದಾರೆ.

ಬಂಧನದ ಬಳಿಕ ದರ್ಶನ್‌ ತಮ್ಮ ಕಾರಿನಲ್ಲಿ ಬರುವುದಾಗಿ ಹೇಳಿದ್ದರು. ಆದರೆ ಅದನ್ನು ನಿರಾಕರಿಸಿದ ಪೊಲೀಸರು ಆತನನ್ನು ಪೊಲೀಸ್‌ ವಾಹನದಲ್ಲಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

52 mins ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

54 mins ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

57 mins ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

4 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

4 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

4 hours ago