ಮನರಂಜನೆ

ಮೈಸೂರಿನಲ್ಲಿ ದರ್ಶನ್ ಬಂಧನ ಹೇಗಾಯಿತು? ಇಲ್ಲಿದೆ ವಿವರ

ಮೈಸೂರು: ದರ್ಶನ್‌ ಆಪ್ತೆ ಪವಿತ್ರಾಗೌಡ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗಾ ಮೂಲಕ ರೇಣುಕಾಸ್ವಾಮಿ ಅವರನ್ನು ಕೊಲೆ ಮಾಡಿದ ಅರೋಪದ ಮೇಲೆ ನಟ ದರ್ಶನ್‌ ಅವರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ.

ಬಳಿಕ ಮೈಸೂರಿನಿಂದ ಬೆಂಗಳೂರಿಗೆ ಶಿಫ್ಟ್‌ ಮಾಡಲಾಗಿದ್ದು, ದರ್ಶನ್‌ ಜತೆ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ 10 ಜನರನ್ನು ಪೊಲೀಸರು ಈಗಾಗಲೇ ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಬಂಧನ ಸಂಬಂಧ ಮೈಸೂರಿನಲ್ಲಿ ಪೊಲೀಸರು ಕಾರ್ಯಚರಣೆ ನಡೆಸಿದ ಬಗೆಗಿನ ಸಂಪೂರ್ಣ ವಿವರ ಇಲ್ಲಿದೆ ನೋಡಿ.

ದರ್ಶನ್‌ ನಟನೆಯ ಡೆವಿಲ್‌ ಚಿತ್ರದ ಶೂಟಿಂಗ್‌ ಮೈಸೂರಿನ ಲಲಿತ್‌ ಮಹಲ್‌ ಹೋಟೆಲ್‌ನಲ್ಲಿ ಚಿತ್ರೀಕರಣ ನಡೆಯುತ್ತಿದೆ. ಈ ಸಂಬಂಧ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ.

ಈ ಚಿತ್ರಕ್ಕಾಗಿ ಅವರಿಗೆ ರ್ಯಾಡಿಸನ್‌ ಹೋಟೆಲ್‌ನಲ್ಲಿ ಜೂನ್‌.9 ರಿಂದ ರೂಂ ಬುಕ್‌ ಆಗಿತ್ತು. ಅದೇ ಹೋಟೆಲ್‌ನಲ್ಲಿ ತಂಗಿದ್ದರು. ಹೋಟೆಲ್‌ ಮುಂಭಾಗದಲ್ಲಿಯೇ KA 01 MY 7999 ನಂಬರಿನ ಕಾರು ಸಹಾ ಅಲ್ಲಿಯೇ ಉಳಿದಿತ್ತು.

ಈ ನಡುವೆ ಅವರು ಕವೆಂಪು ನಗರ ಗೋಲ್ಡ್‌ ಜಿಮ್‌ಗೆ ಹೋಗಿ ವರ್ಕೌಟ್‌ ಮುಗಿಸಿ ಮತ್ತೆ ಮರಳಿದ್ದಾರೆ. ಮತ್ತೆ ಅಲ್ಲಿಂದ ತಮ್ಮ ಸೇವಕರಿಂದ ಕಲ್ಲಂಗಡಿ ಜ್ಯೂಸ್‌ ತರಿಸಿಕೊಂಡು ಸೇವಿಸಿದ್ದಾರೆ. ಅದಾದ ಬಳಿಕ ಅಲ್ಲಿಂದ ಹೋಟೆಲ್‌ಗೆ ತೆರಳುವ ಮಾರ್ಗ ಮಧ್ಯೆದಲ್ಲಿ ಪೊಲೀಸರು ದರ್ಶನ್‌ನ್ನು ಬಂಧಿಸಿದ್ದಾರೆ.

ಬಂಧನದ ಬಳಿಕ ದರ್ಶನ್‌ ತಮ್ಮ ಕಾರಿನಲ್ಲಿ ಬರುವುದಾಗಿ ಹೇಳಿದ್ದರು. ಆದರೆ ಅದನ್ನು ನಿರಾಕರಿಸಿದ ಪೊಲೀಸರು ಆತನನ್ನು ಪೊಲೀಸ್‌ ವಾಹನದಲ್ಲಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

2 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

2 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

2 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

2 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

2 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

2 hours ago