ರೇಣುಕಾಸ್ವಾಮಿ ಕೊಲೆ ಆರೋಪದಡಿ ಸದ್ಯ ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಇದರಲ್ಲಿ ದರ್ಶನ್ ಅವರ ತಪ್ಪೊಪ್ಪಿಗೆ ದಾಖಲಾಗಿದೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ್ದು ನಿಜ ಎಂದು ದರ್ಶನ್ ತಪ್ಪೊಪ್ಪಿಕೊಳ್ಳುವುದರ ಜೊತೆಗೆ ಸಾಕ್ಷ್ಯ ನಾಶ ಮಾಡುವುದಕ್ಕೆ 38 ಲಕ್ಷ ರೂ. ಸಾಲ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ.
ಈ ಸಂಬಂಧ ಹೇಳಿಕೆ ನೀಡಿರುವ ಅವರು, ‘ರೇಣುಕಾಸ್ವಾಮಿಗೆ ಹಲ್ಲೆ ಮಾಡಿದ್ದು ನಿಜ. ಅವನಿಗೆ ಕಾಲಿನಿಂದ ಒದ್ದು, ಕೈಯಿಂದ ಗುದ್ದಿದ್ದೆ. ನಾನು ಶೆಡ್ನಿಂದ ಹೋಗುವಾಗ ಆತ ಚೆನ್ನಾಗಿಯೇ ಇದ್ದ. ಅವನ ಸಾವಿನ ಬಗ್ಗೆ ರಾತ್ರಿ ಗೊತ್ತಾಯ್ತು. ನಾನು ಅಲ್ಲಿಂದ ಹೋದ ನಂತರ ಅವನಿಗೆ ಪವನ್, ಧನರಾಜ್ ಹಾಗೂ ನಂದೀಶ ಕರೆಂಟ್ ಶಾಕ್ ಕೊಟ್ಟಿದ್ದಲ್ಲದೆ ನೆಲಕ್ಕೆ ಕುಕ್ಕಿ ಹಲ್ಲೆ ಮಾಡಿದ ಸಂಗತಿ ಗೊತ್ತಾಯಿತು’ ಎಂದಿದ್ದಾರೆ.
ಹತ್ಯೆ ಪ್ರಕರಣದ ಸಾಕ್ಷ್ಯ ನಾಶ ಮಾಡಲು 38 ಲಕ್ಷ ರೂ. ಸಾಲ ಮಾಡಿರುವುದಾಗಿ ಹೇಳಿರುವ ದರ್ಶನ್, ‘ಕೊಲೆ ಪ್ರಕರಣದ ಸಾಕ್ಷ್ಯ ನಾಶ ಮಾಡಲು ದುಡ್ಡು ಬೇಕು ಎಂದು ನಾಗರಾಜ್ ಹಾಗೂ ಪ್ರದೂಷ್ ಕೇಳಿದ್ದರು. ನನಗೆ ಪರಿಚಯವಿರುವ ಮೋಹನ್ ಅವರಿಂದ 38 ಲಕ್ಷ ರೂ. ಸಾಲ ಪಡೆದಿದ್ದೆ. ಜೊತೆಗೆ ನನ್ನ ಬಳಿಯಿದ್ದ ಒಂದಿಷ್ಟು ಹಣವನ್ನು ಸೇರಿಸಿ, ಪ್ರದೂಷ್ಗೆ 30 ಲಕ್ಷ ಹಾಗೂ ವಿನಯ್ಗೆ 10 ಲಕ್ಷ ರೂ.ಗಳನ್ನು ಕೊಟ್ಟಿದ್ದೇನೆ’ ಎಂದು ದರ್ಶನ್ ಹೇಳಿದ್ದಾರೆ.
ಆ ನಂತರ ದರ್ಶನ್ ‘ದಿ ಡೆವಿಲ್’ ಚಿತ್ರದ ಚಿತ್ರೀಕರಣಕ್ಕೆಂದು ಮೈಸೂರಿಗೆ ಭಾನುವಾರ ಸಂಜೆ ಹೊರಟರಂತೆ. ಸೋಮವಾರ ಅಲ್ಲಿನ ಹೋಟೆಲ್ನಲ್ಲಿದ್ದಾಗ ಪ್ರದೂಷ್, ವಿನಯ್ ಹಾಗೂ ನಾಗರಾಜು ಪುನಃ ಬಂದು ಭೇಟಿಯಾದರಂತೆ. ಮಂಗಳವಾರ ಬೆಳಿಗ್ಗೆ ಪೊಲೀಸರು ಹೋಟೆಲ್ನಲ್ಲಿ ದರ್ಶನ್ರನ್ನು ಬಂಧಿಸಿದ್ದಾರೆ.
ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…
ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್ ಮುಂದೆ…
ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…
ಎಚ್.ಡಿ.ಕೋಟೆ: ಬಸ್ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ…
ಮಂಡ್ಯ: ವಿಸಿ ಫಾರ್ಮ್ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.…