ಮನರಂಜನೆ

ಪವಿತ್ರಾ ಗೌಡಗೆ 1.5 ಕೋಟಿ ರೂ. ಮೌಲ್ಯದ ಮನೆ ಕೊಡಿಸಿದ್ದರಂತೆ ದರ್ಶನ್

ರೇಣುಕಾಸ್ವಾಮಿ ಕೊಲೆ ಆರೋಪದಡಿ ಸದ್ಯ ಪರಪ್ಪನ ಅಗ್ರಹಾರದಲ್ಲಿರುವ ಪವಿತ್ರಾ ಗೌಡ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದು, ಇದರಲ್ಲಿ ಪವಿತ್ರಾ ಅವರ ತಪ್ಪೊಪ್ಪಿಗೆ ದಾಖಲಾಗಿದೆ. ಇದರಲ್ಲಿ ದರ್ಶನ್‍ ತಮಗೆ ಕೆಲವು ವರ್ಷಗಳ ಹಿಂದೆ 1.5 ಕೋಟಿ ರೂ. ಮೌಲ್ಯದ ಮನೆ ಕೊಡಿಸಿದ್ದಾಗಿ ಪವಿತ್ರಾ ಗೌಡ ಹೇಳಿಕೊಂಡಿದ್ದಾರೆ.

ತಮ್ಮ ಮತ್ತು ದರ್ಶನ್ ನಡುವಿನ ಸಂಬಂಧದ ಕುರಿತು ಮಾತನಾಡಿರುವ ಅವರು, ’10 ವರ್ಷಗಳ ಹಿಂದೆ ‘ಬುಲ್‍ಬುಲ್‍’ ಚಿತ್ರದ ಆಡಿಷನ್‍ಗೆ ಹೋದಾಗ ದರ್ಶನ್‍ ಅವರ ಪರಿಚಯವಾಯಿತು. ಕ್ರಮೇಣ ನಮ್ಮಲ್ಲಿ ಆತ್ಮೀಯತೆ ಮೂಡಿತು. 2018ರಲ್ಲಿ ಅವರು ನನಗೆ 1.5 ಕೋಟಿ ರೂ. ಮೌಲ್ಯದ ಮನೆ ಕೊಡಿಸಿದರು. ಈ ಮನೆ ಖರೀದಿಸುವುದಕ್ಕೆ ಸೌಂದರ್ಯ ಜಗದೀಶ್‍ ಸಾಲ ಕೊಟ್ಟಿದ್ದರು. ಅಂದಿನಿಂದ ಒಟ್ಟಿಗೆ ಸಂಸಾರ ಮಾಡುತ್ತಿದ್ದೇವೆ. ನನ್ನ 13 ವರ್ಷದ ಮಗಳು ಸಹ ನನ್ನ ಜೊತೆಗಿದ್ದಳು’ ಎಂದು ಹೇಳಿಕೊಂಡಿದ್ದಾರೆ.

ಪತ್ನಿ ವಿಜಯಲಕ್ಷ್ಮೀ ಜೊತೆಗೆ ದರ್ಶನ್‍ ಅವರು ದುಬೈಗೆ ಹೋಗಿದ್ದಕ್ಕೆ ಅವರೊಂದಿಗೆ ಜಗಳವಾಡಿದ್ದೆ ಎಂದಿರುವ ಪವಿತ್ರಾ, ‘ಕಳೆದ ಮೇ ತಿಂಗಳಲ್ಲಿ ದರ್ಶನ್‍ ನನಗೆ ತಿಳಿಸದೇ ವಿಜಯಲಕ್ಷ್ಮೀ ಅವರ ಜೊತೆಗೆ ದುಬೈಗೆ ಹೋಗಿದ್ದರು. ಅಲ್ಲಿ ತಮ್ಮ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿದ್ದರು. ಈ ಬಗ್ಗೆ ದರ್ಶನ್‍ ಜೊತೆಗೆ ಜಗಳವಾಡಿಕೊಂಡು ಮಾತುಬಿಟ್ಟಿದ್ದೆ’ ಎಂದು ಹೇಳಿದ್ದಾರೆ.

ರೇಣುಕಾಸ್ವಾಮಿ ಕೊಲೆಯ ಬಗ್ಗೆ ಮಾತನಾಡಿರುವ ಅವರು, ‘ನನಗೆ ಅಶ್ಲೀಲ ಮೆಸೇಜ್‍ ಕಳಿಸುತ್ತಿದ್ದ ರೇಣುಕಾಸ್ವಾಮಿಯ ಕಪಾಳಕ್ಕೆ ಚಪ್ಪಲಿಯಿಂದ ಹೊಡೆದು, ಅವನನ್ನು ಬಿಡಬೇಡಿ ಸಾಯಿಸಿ ಎಂದು ಅಲ್ಲಿದ್ದವರಿಗೆ ಹೇಳಿದೆ. ಎಲ್ಲರೂ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದರು’ ಎಂದು ಪವಿತ್ರಾ ಗೌಡ ತಪ್ಪೊಪ್ಪಿಕೊಂಡಿದ್ದಾರೆ.

ಭೂಮಿಕಾ

Recent Posts

ಮಂಡ್ಯ| ಸಿದ್ಧಗಂಗಾಶ್ರೀಗಳ ಆದರ್ಶ ಅಜರಾಮರ: ಯು.ಸಿ.ಶಿವಕುಮಾರ್‌

ಮಂಡ್ಯ: ಕೋಟ್ಯಾಂತರ ಭಕ್ತರ ಮನೆ-ಮನಗಳಲ್ಲಿ ನೆಲೆಗೊಂಡಿರುವ ಡಾ.ಶಿವಕುಮಾರಸ್ವಾಮೀಜಿಯವರ ಆದರ್ಶ ಅಜರಾಮರ ಎಂದು ಮನ್‌ಮುಲ್‌ ಅಧ್ಯಕ್ಷ ಯು.ಸಿ.ಶಿವಕುಮಾರ್‌ ಹೇಳಿದರು. ಮಂಡ್ಯ ನಗರದ…

44 seconds ago

ರಾಜ್ಯ ಸರ್ಕಾರ ಪಾಪರ್‌ ಆಗಿದೆ: ವಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಪ್ರತಿ ಇಲಾಖೆಯಲ್ಲಿಯೂ ನಡೆಯುತ್ತಿದೆ. ಸರ್ಕಾರ ದಿವಾಳಿಯಾಗಿದ್ದು, ಲೂಟಿ ಮಾಡುವುದನ್ನೇ ಕಾಯಕವನ್ನಾಗಿ ಮಾಡಿಕೊಂಡಿದೆ ಎಂದು ವಿಪಕ್ಷ…

37 mins ago

ಚಾಮರಾಜನಗರ| ಫ್ಲೋರೈಡ್‌ ಮಿಶ್ರಿತ ನೀರು ಸೇವಿಸಿ ಕಿಡ್ನಿ ಕಳೆದುಕೊಂಡ 47 ಜನ

ಚಾಮರಾಜನಗರ: ಫ್ಲೋರೈಡ್‌ ಮಿಶ್ರಿತ ನೀರು ಕುಡಿದು 47 ಮಂದಿ ಕಿಡ್ನಿ ಕಳೆದುಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹನೂರು…

48 mins ago

ಹುಣಸೂರು: ಬಾರ್‌ ತೆರೆಯಲು ಅವಕಾಶ ನೀಡದಂತೆ ಗ್ರಾಮಸ್ಥರ ಆಗ್ರಹ

ಹುಣಸೂರು: ತಾಲ್ಲೂಕಿನ ಬೋಳನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸರಾಮನಹಳ್ಳಿ ಗ್ರಾಮದಲ್ಲಿ ಬಾರ್‌ ತೆರೆಯಲು ಅನುಮತಿ ನೀಡದಂತೆ ಒತ್ತಾಯಿಸಿ ಗ್ರಾಮಸ್ಥರು ಪಿಡಿಓಗೆ…

1 hour ago

ಪೆನ್ನಾರ್‌ ನದಿ ಜಲವಿವಾದ: ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಆದೇಶ

ನವದೆಹಲಿ: ಕರ್ನಾಟಕ ಹಾಗೂ ತಮಿಳುನಾಡು ನಡುವಿನ ದಕ್ಷಿಣ ಪಿನಾಕಿನಿ ಎಂದೇ ಹೆಸರುವಾಸಿಯಾಗಿರುವ ಪೆನ್ನಾರ್‌ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಪತ್ನಿ, ಪುತ್ರನಿಗೆ ಎಸ್‌ಐಟಿ ಬುಲಾವ್‌

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ತನಿಖೆ ಚುರುಕುಗೊಂಡಿದ್ದು, ವಿಶೇಷ ತನಿಖಾ ತಂಡವು ಪತ್ನಿ ಹಾಗೂ ಮಗನನ್ನು…

3 hours ago