ಮನರಂಜನೆ

ಪವಿತ್ರಾ ಗೌಡಗೆ 1.5 ಕೋಟಿ ರೂ. ಮೌಲ್ಯದ ಮನೆ ಕೊಡಿಸಿದ್ದರಂತೆ ದರ್ಶನ್

ರೇಣುಕಾಸ್ವಾಮಿ ಕೊಲೆ ಆರೋಪದಡಿ ಸದ್ಯ ಪರಪ್ಪನ ಅಗ್ರಹಾರದಲ್ಲಿರುವ ಪವಿತ್ರಾ ಗೌಡ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದು, ಇದರಲ್ಲಿ ಪವಿತ್ರಾ ಅವರ ತಪ್ಪೊಪ್ಪಿಗೆ ದಾಖಲಾಗಿದೆ. ಇದರಲ್ಲಿ ದರ್ಶನ್‍ ತಮಗೆ ಕೆಲವು ವರ್ಷಗಳ ಹಿಂದೆ 1.5 ಕೋಟಿ ರೂ. ಮೌಲ್ಯದ ಮನೆ ಕೊಡಿಸಿದ್ದಾಗಿ ಪವಿತ್ರಾ ಗೌಡ ಹೇಳಿಕೊಂಡಿದ್ದಾರೆ.

ತಮ್ಮ ಮತ್ತು ದರ್ಶನ್ ನಡುವಿನ ಸಂಬಂಧದ ಕುರಿತು ಮಾತನಾಡಿರುವ ಅವರು, ’10 ವರ್ಷಗಳ ಹಿಂದೆ ‘ಬುಲ್‍ಬುಲ್‍’ ಚಿತ್ರದ ಆಡಿಷನ್‍ಗೆ ಹೋದಾಗ ದರ್ಶನ್‍ ಅವರ ಪರಿಚಯವಾಯಿತು. ಕ್ರಮೇಣ ನಮ್ಮಲ್ಲಿ ಆತ್ಮೀಯತೆ ಮೂಡಿತು. 2018ರಲ್ಲಿ ಅವರು ನನಗೆ 1.5 ಕೋಟಿ ರೂ. ಮೌಲ್ಯದ ಮನೆ ಕೊಡಿಸಿದರು. ಈ ಮನೆ ಖರೀದಿಸುವುದಕ್ಕೆ ಸೌಂದರ್ಯ ಜಗದೀಶ್‍ ಸಾಲ ಕೊಟ್ಟಿದ್ದರು. ಅಂದಿನಿಂದ ಒಟ್ಟಿಗೆ ಸಂಸಾರ ಮಾಡುತ್ತಿದ್ದೇವೆ. ನನ್ನ 13 ವರ್ಷದ ಮಗಳು ಸಹ ನನ್ನ ಜೊತೆಗಿದ್ದಳು’ ಎಂದು ಹೇಳಿಕೊಂಡಿದ್ದಾರೆ.

ಪತ್ನಿ ವಿಜಯಲಕ್ಷ್ಮೀ ಜೊತೆಗೆ ದರ್ಶನ್‍ ಅವರು ದುಬೈಗೆ ಹೋಗಿದ್ದಕ್ಕೆ ಅವರೊಂದಿಗೆ ಜಗಳವಾಡಿದ್ದೆ ಎಂದಿರುವ ಪವಿತ್ರಾ, ‘ಕಳೆದ ಮೇ ತಿಂಗಳಲ್ಲಿ ದರ್ಶನ್‍ ನನಗೆ ತಿಳಿಸದೇ ವಿಜಯಲಕ್ಷ್ಮೀ ಅವರ ಜೊತೆಗೆ ದುಬೈಗೆ ಹೋಗಿದ್ದರು. ಅಲ್ಲಿ ತಮ್ಮ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿದ್ದರು. ಈ ಬಗ್ಗೆ ದರ್ಶನ್‍ ಜೊತೆಗೆ ಜಗಳವಾಡಿಕೊಂಡು ಮಾತುಬಿಟ್ಟಿದ್ದೆ’ ಎಂದು ಹೇಳಿದ್ದಾರೆ.

ರೇಣುಕಾಸ್ವಾಮಿ ಕೊಲೆಯ ಬಗ್ಗೆ ಮಾತನಾಡಿರುವ ಅವರು, ‘ನನಗೆ ಅಶ್ಲೀಲ ಮೆಸೇಜ್‍ ಕಳಿಸುತ್ತಿದ್ದ ರೇಣುಕಾಸ್ವಾಮಿಯ ಕಪಾಳಕ್ಕೆ ಚಪ್ಪಲಿಯಿಂದ ಹೊಡೆದು, ಅವನನ್ನು ಬಿಡಬೇಡಿ ಸಾಯಿಸಿ ಎಂದು ಅಲ್ಲಿದ್ದವರಿಗೆ ಹೇಳಿದೆ. ಎಲ್ಲರೂ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದರು’ ಎಂದು ಪವಿತ್ರಾ ಗೌಡ ತಪ್ಪೊಪ್ಪಿಕೊಂಡಿದ್ದಾರೆ.

ಭೂಮಿಕಾ

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

1 hour ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

7 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

13 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

13 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

13 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

13 hours ago