ಮನರಂಜನೆ

ಪವಿತ್ರಾ ಗೌಡಗೆ 1.5 ಕೋಟಿ ರೂ. ಮೌಲ್ಯದ ಮನೆ ಕೊಡಿಸಿದ್ದರಂತೆ ದರ್ಶನ್

ರೇಣುಕಾಸ್ವಾಮಿ ಕೊಲೆ ಆರೋಪದಡಿ ಸದ್ಯ ಪರಪ್ಪನ ಅಗ್ರಹಾರದಲ್ಲಿರುವ ಪವಿತ್ರಾ ಗೌಡ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದು, ಇದರಲ್ಲಿ ಪವಿತ್ರಾ ಅವರ ತಪ್ಪೊಪ್ಪಿಗೆ ದಾಖಲಾಗಿದೆ. ಇದರಲ್ಲಿ ದರ್ಶನ್‍ ತಮಗೆ ಕೆಲವು ವರ್ಷಗಳ ಹಿಂದೆ 1.5 ಕೋಟಿ ರೂ. ಮೌಲ್ಯದ ಮನೆ ಕೊಡಿಸಿದ್ದಾಗಿ ಪವಿತ್ರಾ ಗೌಡ ಹೇಳಿಕೊಂಡಿದ್ದಾರೆ.

ತಮ್ಮ ಮತ್ತು ದರ್ಶನ್ ನಡುವಿನ ಸಂಬಂಧದ ಕುರಿತು ಮಾತನಾಡಿರುವ ಅವರು, ’10 ವರ್ಷಗಳ ಹಿಂದೆ ‘ಬುಲ್‍ಬುಲ್‍’ ಚಿತ್ರದ ಆಡಿಷನ್‍ಗೆ ಹೋದಾಗ ದರ್ಶನ್‍ ಅವರ ಪರಿಚಯವಾಯಿತು. ಕ್ರಮೇಣ ನಮ್ಮಲ್ಲಿ ಆತ್ಮೀಯತೆ ಮೂಡಿತು. 2018ರಲ್ಲಿ ಅವರು ನನಗೆ 1.5 ಕೋಟಿ ರೂ. ಮೌಲ್ಯದ ಮನೆ ಕೊಡಿಸಿದರು. ಈ ಮನೆ ಖರೀದಿಸುವುದಕ್ಕೆ ಸೌಂದರ್ಯ ಜಗದೀಶ್‍ ಸಾಲ ಕೊಟ್ಟಿದ್ದರು. ಅಂದಿನಿಂದ ಒಟ್ಟಿಗೆ ಸಂಸಾರ ಮಾಡುತ್ತಿದ್ದೇವೆ. ನನ್ನ 13 ವರ್ಷದ ಮಗಳು ಸಹ ನನ್ನ ಜೊತೆಗಿದ್ದಳು’ ಎಂದು ಹೇಳಿಕೊಂಡಿದ್ದಾರೆ.

ಪತ್ನಿ ವಿಜಯಲಕ್ಷ್ಮೀ ಜೊತೆಗೆ ದರ್ಶನ್‍ ಅವರು ದುಬೈಗೆ ಹೋಗಿದ್ದಕ್ಕೆ ಅವರೊಂದಿಗೆ ಜಗಳವಾಡಿದ್ದೆ ಎಂದಿರುವ ಪವಿತ್ರಾ, ‘ಕಳೆದ ಮೇ ತಿಂಗಳಲ್ಲಿ ದರ್ಶನ್‍ ನನಗೆ ತಿಳಿಸದೇ ವಿಜಯಲಕ್ಷ್ಮೀ ಅವರ ಜೊತೆಗೆ ದುಬೈಗೆ ಹೋಗಿದ್ದರು. ಅಲ್ಲಿ ತಮ್ಮ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿದ್ದರು. ಈ ಬಗ್ಗೆ ದರ್ಶನ್‍ ಜೊತೆಗೆ ಜಗಳವಾಡಿಕೊಂಡು ಮಾತುಬಿಟ್ಟಿದ್ದೆ’ ಎಂದು ಹೇಳಿದ್ದಾರೆ.

ರೇಣುಕಾಸ್ವಾಮಿ ಕೊಲೆಯ ಬಗ್ಗೆ ಮಾತನಾಡಿರುವ ಅವರು, ‘ನನಗೆ ಅಶ್ಲೀಲ ಮೆಸೇಜ್‍ ಕಳಿಸುತ್ತಿದ್ದ ರೇಣುಕಾಸ್ವಾಮಿಯ ಕಪಾಳಕ್ಕೆ ಚಪ್ಪಲಿಯಿಂದ ಹೊಡೆದು, ಅವನನ್ನು ಬಿಡಬೇಡಿ ಸಾಯಿಸಿ ಎಂದು ಅಲ್ಲಿದ್ದವರಿಗೆ ಹೇಳಿದೆ. ಎಲ್ಲರೂ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದರು’ ಎಂದು ಪವಿತ್ರಾ ಗೌಡ ತಪ್ಪೊಪ್ಪಿಕೊಂಡಿದ್ದಾರೆ.

ಭೂಮಿಕಾ

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

10 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

10 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

11 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

11 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

11 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

12 hours ago