ಮಂಡ್ಯ: ಮಂಡ್ಯ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ಸ್ಯಾಂಟಲ್ವುಡ್ ಡಿಬಾಸ್ ದರ್ಶನ್ ಭರ್ಜರಿ ಮತ ಶಿಕಾರಿ ನಡೆಸುತ್ತಿದ್ದಾರೆ. ತಮಗೆ ಎಡಗೈಗೆ ಪೆಟ್ಟಾಗಿದ್ದರು ಅದನ್ನೆಲ್ಲವನ್ನು ಬದಿಗೊತ್ತಿ ಅಭ್ಯರ್ಥಿ ಪರ ಭರ್ಜರಿಯಾಗಿ ಪ್ರಚಾರ ಮಾಡುತ್ತಿದ್ದಾರೆ.
ಎಡಗೈ ನೋವಿನಿಂದಾಗಿ ಚಿಕ್ಕ ಸರ್ಜರಿಗೆ ಒಳಗಾಗಿರುವ ಡಿಬಾಸ್ ವಿರಾಮದ ಸಮಯದಲ್ಲಿ ಚುನಾವಣಾ ಪ್ರಚಾರಕ್ಕೆ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಇಂದು(ಏ.೨೨) ಮಂಡ್ಯದ ಹಲವು ಗ್ರಾಮಗಳಿಗೆ ಭೇಟಿ ನೀಡಿರುವ ನಟ ದರ್ಶನ್, ಕೈ ಅಭ್ಯರ್ಥಿಗೆ ಮತ ನೀಡುವಂತೆ ಮನವಿ ಮಾಡಿದ್ದಾರೆ. ಮಂಡ್ಯ ಕಣದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಟಾರ್ ಚಂದ್ರು ನಿಂತಿದ್ದಾರೆ. ತಮ್ಮೆಲ್ಲರ ಅಮೂಲ್ಯ ಮತಗಳನ್ನು ಇವರಿಗೆ ನೀಡಿ, ನಿಮ್ಮ ಸೇವೆ ಮಾಡಲು ಅನುಮತಿ ನೀಡಬೇಕೆಂದು ನಿಮ್ಮಲ್ಲಿ ಕೈ ಮುಗಿದು ಕೇಳಿಕೊಳ್ಳುತ್ತೇನೆ ಎಂದು ಮತದಾರ ಪ್ರಭುಗಳ ಬಳಿ ಮತಯಾಚಿಸಿದ್ದಾರೆ ಡಿ ಬಾಸ್.
ಇನ್ನು ಜಿಲ್ಲೆಯಾದ್ಯಂತ ದರ್ಶನ್ ಮತ ಶಿಕಾರಿಗೆ ಮುಂದಾಗಿದ್ದು, ಹೋದ ಕಡೆಯಲ್ಲಾ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ. ಎಲ್ಲರೂ ನಟನನ್ನು ಆತ್ಮೀಯತೆಯಿಂದ ಸ್ವಾಗತಿಸುತ್ತಿದ್ದಾರೆ.
ಕಳೆದ ಬಾರಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರವಾಗಿ ಇದೇ ಕ್ಷೇತ್ರದಲ್ಲಿ ಮತಯಾಚಿಸಿದ್ದ ದರ್ಶನ್ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಮತ ಕೇಳುತ್ತಿದ್ದಾರೆ.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…