ಬೆಂಗಳೂರು: ಕೊಲೆ ಆರೋಪ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ಬಂಧಿಸಿದ ಬೆನ್ನಲ್ಲೇ ಇದೀಗ ಅವರ ಆಪ್ತೆಯಾದ ಪವಿತ್ರಾಗೌಡ ಅವರನ್ನು ಆರ್ಆರ್ ನಗರ ಪೊಲೀಸರು ಬಂಧಿಸಿದ್ದಾರೆ.
ಆರ್ಆರ್ ನಗರ ಪೊಲೀಸ್ ಇನ್ಸ್ಪೆಕ್ಟರ್ ಮಾರ್ಕಂಡಯ್ಯ ಅವರ ನೇತೃತ್ವದಲ್ಲಿ ಪವಿತ್ರಾಗೌಡರನ್ನು ಬಂಧಿಸಿ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ಇವರ ಜತೆ ಅವರ ಅಕ್ಕ ಕೂಡಾ ಪೊಲೀಸ್ ಠಾಣಾ ಮೆಟ್ಟಿಲೇರಿದ್ದಾರೆ.
ದರ್ಶನ್ ಆಪ್ತೆಯಾದ ಪವಿತ್ರಾಗೌಡ ವಿರುದ್ಧ ರೇಣುಕಾಸ್ವಾಮಿ ಅಶ್ಲೀಲ ಮೆಸೆಜ್ ಮಾಡಿದ್ದಾನೆ. ಹೀಗಾಗಿ ಸಿಟ್ಟಿಗೆದ್ದ ದರ್ಶನ್ ಒಳಗೊಂಡ ಹತ್ತು ಜನರು ಆತನನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆದೊಯ್ದು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
ಇತ್ತ ಕೊಲೆಯಾದ ರೇಣುಕಾಸ್ವಾಮಿ ಬಗ್ಗೆ ಅಚ್ಚರಿ ವಿಷಯ ಬೆಳಕಿಗೆ ಬಂದಿದ್ದು, ರೇಣುಕಾಸ್ವಾಮಿ ಓರ್ವ ದರ್ಶನ್ ಅಪ್ಪಟ ಅಭಿಮಾನಿಯಾಗಿದ್ದು, ದರ್ಶನ್-ವಿಜಯಲಕ್ಷ್ಮಿ ದಂಪತಿ ನಡುವೆ ಪವಿತ್ರಾ ಬಂದಿದ್ದಾಳೆ ಎಂದು ಭಾವಿಸಿ ಆತ ಮೆಸೆಜ್ ಮಾಡಿದ್ದ ಎನ್ನಲಾಗಿದೆ. ಇದರಿಂದ ರೊಚ್ಚಿಗೆದ್ದ ದರ್ಶನ್ ಹುಡುಗರು ಕೊಲೆ ಮಾಡಿದ್ದಾರೆ ಎಂದು ವರದಿಯಾಗಿದೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…