ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡದ ಖ್ಯಾತ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ನಟ ಚಿಕ್ಕಣ್ಣ ಸೇರಿದಂತೆ ಇತರೆ ಸೆಲೆಬ್ರೆಟಿಸ್ಗೂ ಪೊಲೀಸರು ನೋಟಿಸ್ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು ನಟ ದರ್ಶನ್ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಶೆಡ್, ಸ್ಟೋನಿ ಬ್ರೂಕ್ ಹಾಗೂ ಕಾಮಾಕ್ಷಿ ಪಾಳ್ಯ ಸೇರಿದಂತೆ ಹಲವು ಕಡೆಗಳಲ್ಲಿ ಸ್ಥಳ ಮಹಜರು ನಡೆಸಿದ್ದಾರೆ.
ಕೊಲೆ ನಡೆದ ಮರುದಿನ ದರ್ಶನ್ ಅವರು ಮೈಸೂಗೆ ವಾಪಸಾಗಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಇತ್ತ ಶೂಟಿಂಗ್ ಜತೆ ಪ್ರಕರಣದಲ್ಲಿ ಉಳಿದವರು ಶರಣಾಗಲು ಹಿಂದೇಟು ಹಾಕಿದ ವೇಳೆ ಅವರ ಮನವೊಲಿಸಲು ಮೈಸೂರಿಗೆ ಕರೆಸಿರುವುದಾಗಿ ಪೊಲೀಸರಿಗೆ ಮಾಹಿತಿ ಸಿಕ್ಕಿದೆ.
ಈ ಹಿನ್ನೆಲೆ ನಟ ದರ್ಶನ್, ಪವನ್, ನಾಗರಾಜ್ ನಂದೀಶ್ ಅವರನ್ನು ಮೈಸೂರಿಗೆ ಕರೆತಂದು ಸ್ಥಳ ಮಹಜರು ನಡೆಸುವ ಸಾಧ್ಯತೆಯಿದೆ ಎನ್ನಲಾಗಿದೆ.
ದರ್ಶನ್ ಉಳಿದುಕೊಂಡಿದ್ದ ಖಾಸಗಿ ಹೋಟೆಲ್ ಸೇರಿದಂತೆ ಅವರು ಫಾರ್ಮ್ ಹೌಸ್ ಇತರೆ ಸ್ಥಳಗಳಲ್ಲಿ ಮಹಜರು ನಡೆಸುವ ಸಾಧ್ಯತೆಯಿದೆ.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…