ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಅಭಿಮಾನಿಗಳನ್ನು ಸೆಲೆಬ್ರಿಟೀಸ್ ಎನ್ನುತ್ತಾರೆ. ಈಗ ಜೈಲಿನಲ್ಲಿ ಇದ್ದರೂ ಕೂಡ ದರ್ಶನ್ ತಮ್ಮ ಫ್ಯಾನ್ಸ್ ಬಗ್ಗೆ ವಿಚಾರಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಈಗ ಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಸೆಲೆಬ್ರಿಟಿಯಾಗಿ ಐಷಾರಾಮಿ ಜೀವನ ಸಾಗಿಸುತ್ತಿದ್ದ ಅವರು, ಈಗ ಜೈಲಿನಲ್ಲಿ ಕಂಬಿ ಎಣಿಸುವಂತಾಗಿದೆ. ದರ್ಶನ್ ಜೈಲು ಸೇರುತ್ತಿದ್ದಂತೆ ಅವರ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದರು. ಕೆಲವರು ಅತಿರೇಕದ ವರ್ತನೆಗಳನ್ನು ತೋರಿಸಿದ್ದು ಕೂಡ ಉಂಟು. ಈಗ ದರ್ಶನ್ ಅವರು ಜೈಲಿನಿಂದಲೇ ಅಭಿಮಾನಿಗಳ ಬಗ್ಗೆ ವಿಚಾರಿಸಿದ್ದಾರೆ. ಈ ಬಗ್ಗೆ ವಕೀಲ ನಾರಾಯಣಸ್ವಾಮಿ ಅವರು ಹೇಳಿಕೆ ನೀಡಿದ್ದಾರೆ.
ಇಂದು ಪರಪ್ಪನ ಅಗ್ರಹಾರದಲ್ಲಿ ವಕೀಲ ನಾರಾಯಣಸ್ವಾಮಿ ಅವರು ದರ್ಶನ್ ಹಾಗೂ ಪವಿತ್ರಾಗೌಡ ಅವರನ್ನು ಭೇಟಿ ಆಗಿದ್ದಾರೆ. ಆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಾರಾಯಣಸ್ವಾಮಿ ಅವರು, ಜಾಮೀನು ಪ್ರಕ್ರಿಯೆಗಳ ಬಗ್ಗೆ ಮಾತುಕತೆ ನಡೆಸಿದ್ದೇನೆ. ಮುಂದಿನ ಕಾನೂನು ಹೋರಾಟದ ಸಾಧ್ಯತೆಗಳ ಬಗ್ಗೆಯೂ ಚರ್ಚೆ ಮಾಡಿದ್ದೇನೆ ಎಂದರು.
ಈ ಮಾತುಕತೆ ಸಲುವಾಗಿ ವಕೀಲರು ದರ್ಶನ್ ಅವರನ್ನು ಭೇಟಿಯಾದಾಗ ಅಭಿಮಾನಿಗಳ ವಿಷಯ ಕೂಡ ಪ್ರಸ್ತಾಪ ಆಗಿದೆ. ಜೈಲಿನಲ್ಲಿ ಇರುವ ದರ್ಶನ್ ಅವರು ಅಭಿಮಾನಿಗಳ ಬಗ್ಗೆ ವಿಚಾರಿಸುವುದನ್ನು ಮರೆತಿಲ್ಲ. ಅಭಿಮಾನಿಗಳು ಯಾವುದೇ ದುಡುಕಿನ ನಿರ್ಧಾರ ತೆಗೆದುಕೊಳ್ಳಬಾರದು ಎಂದು ದರ್ಶನ್ ಮನವಿ ಮಾಡಿದ್ದಾರೆ ಎಂದು ವಕೀಲರು ತಿಳಿಸಿದ್ದಾರೆ.
ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್ಬೋಟ್ಗಳಿಂದ…
ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್, ತನ್ನ ನಿರ್ಧಾರವನ್ನು…
ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…
ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…