ಮನರಂಜನೆ

ದರ್ಶನ್‍ ಅಭಿಮಾನಿಗಳ ಟ್ರೋಲ್‍: ನಟಿ ರಮ್ಯಾಗೆ FIRE ಬೆಂಬಲ

ದರ್ಶನ್‍ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿರುವ ರಮ್ಯಾ ಪರವಾಗಿ ಪ್ರಥಮ್‍ ಹೊರತುಪಡಿಸಿದರೆ, ಮಿಕ್ಕಂತೆ ಯಾರೂ ಧ್ವನಿ ಎತ್ತಿರಲಿಲ್ಲ. ಇದೀಗ Film Industry for Rights and Equality (FIRE) ಸಂಸ್ಥೆಯು ಬೆಂಬಲಕ್ಕೆ ನಿಂತಿದ್ದು, ಮಹಿಳಾ ವಿರೋಧಿ ಟ್ರೋಲಿಂಗ್‍ ನಿಲ್ಲಿಸುವುದಕ್ಕೆ ಆಗ್ರಹಿಸುವುದರ ಜೊತೆಗೆ, ಈ ತರಹ ಟ್ರೋಲ್‍ ಮಾಡುತ್ತಿರುವವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗೃಹ ಸಚಿವ ಪರಮೇಶ್ವರ್‌ ಅವರನ್ನು ಆಗ್ರಹಿಸಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ದರ್ಶನ್ ಬಂಧನವಾಗಿ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಸುಪ್ರೀಂ ಕೋರ್ಟ್‍ನಲ್ಲಿ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ನಂಬಿಕೆ ಇದೆ ಎಂದು ರಮ್ಯಾ ಇತ್ತೀಚೆಗೆ ಸೋಷಿಯಲ್‍ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಇದು ದರ್ಶನ್‍ ಅಭಿಮಾನಿಗಳನ್ನು ಕೆರಳಿಸಿದ್ದು, ರಮ್ಯಾಗೆ ಸೋಷಿಯಲ್‍ ಮೀಡಿಯಾ ಮೂಲಕ ಅವಹೇಳನಕಾರಿ ಸಂದೇಶಗಳನ್ನು ಕಳಿಸಿದ್ದಾರೆ. ತಮಗೆ ಅಶ್ಲೀಲ ಮೆಸೇಜ್ ಕಳುಹಿಸುತ್ತಿರುವ ದರ್ಶನ್ ಫ್ಯಾನ್ಸ್ ಹೆಸರಿನ ಸೋಷಿಯಲ್ ಮೀಡಿಯಾ ಅಕೌಂಟ್‌ಗಳ ಸ್ಕ್ರೀನ್‌ಶಾಟ್ ತೆಗೆದು, ಅಪ್ಲೋಡ್ ಮಾಡುತ್ತಿದ್ದಾರೆ.

ಈ ತರಹ ಸಮಸ್ಯೆ ಬರೀ ತಾವೋಬ್ಬರೇ ಅಲ್ಲ, ಹಲವು ನಟ-ನಟಿಯರು ಎದುರಿಸುತ್ತಿದ್ದಾರೆ ಎಂದು ರಮ್ಯಾ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು. ಕೆಟ್ಟ ಕೆಟ್ಟ ಪದ ಬಳಕೆ ಮಾಡುತ್ತಿರುವ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲ, ರೇಣುಕಾಸ್ವಾಮಿ ಹಾಗೂ ದರ್ಶನ್‍ ಅಭಿಮಾನಿಗಳಿಗೂ ಯಾವುದೇ ವ್ಯತ್ಯಾಸವಿಲ್ಲವೆಂದಿದ್ದರು. ಇಂತಹ ಸ್ತ್ರೀದ್ವೇಷಿ ಮನೋಭಾವದವರಿಂದಲೇ ಹೆಣ‍್ಣುಮಕ್ಕಳು ಅತ್ಯಾಚಾರಕ್ಕೆ ಒಳಗಾಗುತ್ತಿದ್ದಾರೆ ಎಂದು ಕಿಡಿಕಾರಿದ್ದರು. ಈ ಸಂಬಂಧ ರಮ್ಯಾ, ನಟ ದರ್ಶನ್‍ ಅಭಿಮಾನಿಗಳ ವಿರುದ್ಧ ಕಾನೂನು ಹೋರಾಟ ಮಾಡುವುದಾಗಿ ತಿಳಿಸಿದ್ದರು. ಅದಕ್ಕೆ ಪೂರಕವಾಗಿ ರಾಜ್ಯ ಮಹಿಳಾ ಆಯೋಗಕ್ಕೆ, ಬೆಂಗಳೂರು ಪೊಲೀಸ್‍ ಕಮಿಷನರ್‍ ಅವರಿಗೆ ದರ್ಶನ್‍ ಅಭಿಮಾನಿಗಳ ವಿರುದ್ಧ ದೂರು ದಾಖಲಿಸಿದ್ದರು.

ರಮ್ಯಾ ಹೀಗೆ ಒಂಟಿ ಹೋರಾಟ ನಡೆಸುತ್ತಿರುವಾಗ, ಚಿತ್ರರಂಗದಿಂದ ಅವರ ಪರವಾಗಿ ಯಾರೂ ಧ್ವನಿ ಎತ್ತಿರಲಿಲ್ಲ. ಇದೀಗ Film Industry for Rights and Equality (FIRE) ಸಂಸ್ಥೆಯು ಬೆಂಬಲಕ್ಕೆ ನಿಂತಿದ್ದು ರಮ್ಯಾ ಅವರ ವಿರುದ್ಧ ಸೋಷಿಯಲ್‍ ಮೀಡಿಯಾದಲ್ಲಿ ನಡೆಯುತ್ತಿರುವ ಟ್ರೋಲಿಂಗ್‍ ವಿರುದ್ಧ ಖಂಡಿಸುವುದರ ಜೊತೆಗೆ, ಅವರ ಬೆಂಬಲಕ್ಕೆ ನಿಂತಿದೆ.

ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯಗಳು ಸಹಜವಾಗಿದ್ದು, ಅವರಗಳ ನಡುವೆ ಸಂವಾದ ನಡೆಯಬೇಕು. ಆದರೆ, ಆ ಸಂವಾದ ಸಭ್ಯತೆಯೊಂದಿಗೆ ಮತ್ತು ಗೌರವಪೂರ್ಣವಾಗಿ ನಡೆಯಬೇಕು. ರಮ್ಯಾ ಅವರ ವಿರುದ್ಧ ನಡೆಯುತ್ತಿರುವ ದ್ವೇಷಪೂರಿತ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಅಪಮಾನವಾಗಿದ್ದು, ತಕ್ಷಣವೇ ಕರ್ನಾಟಕ ಗೃಹ ಇಲಾಕೆ ಮತ್ತು ಸೈಬರ್‍ ಕ್ರೈಮ್‍ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು FIRE ಸಂಸ್ಥೆ ಒತ್ತಾಯಿಸಿದೆ.

ಆಂದೋಲನ ಡೆಸ್ಕ್

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

9 hours ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

9 hours ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

11 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

12 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

12 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

13 hours ago