ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್ ಜೈಲು ಸಿಬ್ಬಂದಿಗಳಿಗೆ ಮತ್ತೊಂದು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.
ಬಳ್ಳಾರಿ ಜೈಲಿನಲ್ಲಿ ಬಾಡಿ ಮೇಂಟೆನ್ಸ್ ಬಗ್ಗೆ ಯೋಚನೆ ಮಾಡುತ್ತಿರುವ ಕಿಲ್ಲಿಂಗ್ ಸ್ಟಾರ್ ದರ್ಶನ್ ಬಾಡಿ ಮೇಂಟೆನ್ಸ್ ಪೌಡರ್ ಹಾಗೂ ವಿಟಮಿನ್ ಪೌಡರ್ಗೆ ಬೇಡಿಕೆ ಇಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ದರ್ಶನ್ ಇಟ್ಟಿರುವ ಬೇಡಿಕೆಯನ್ನು ಜೈಲಾಧಿಕಾರಿಗಳು ತಿರಸ್ಕಾರ ಮಾಡಿದ್ದಾರೆ ಎಂದು ತಿಳಿದು ಬಂದಿದ್ದು, ಜೈಲಿನಲ್ಲಿ ನೀವು ಕೇಳಿದ್ದನ್ನು ಕೊಡೋಕೆ ಅವಕಾಶ ಇಲ್ಲ. ನಿಯಮದ ಅನುಸಾರ ವಿಚಾರಣಾಧೀನ ಖೈದಿಗೆ ಯಾವ ಸೌಲಭ್ಯಗಳನ್ನು ಕೊಡಲು ಅವಕಾಶ ಇದೆಯೋ ಆ ಸೌಲಭ್ಯಗಳನ್ನು ಮಾತ್ರ ಕೊಡಲು ಸಾಧ್ಯ ಎಂದು ಹೇಳಿದ್ದಾರೆ.
ಇನ್ನು ದರ್ಶನ್ ಜೈಲಿನಲ್ಲಿ ಫಿಟ್ನೆಸ್ ಬಗ್ಗೆಯೇ ಚಿಂತೆ ಮಾಡುತ್ತಿದ್ದು, ದೇಹದಾಢ್ಯ ಸರಿಯಾಗಿ ಉಳಿಸಿಕೊಳ್ಳದಿದ್ದರೆ ನನಗೆ ಕಷ್ಟ ಆಗುತ್ತದೆ. ಈ ಹಿನ್ನೆಲೆಯಲ್ಲಿ ವಿಟಮಿನ್ ಪೌಡರ್ನ್ನು ಕುಟುಂಬಸ್ಥರ ಮೂಲಕ ತರಿಸಿಕೊಡಿ ಎಂದು ಮನವಿ ಮಾಡಿದ್ದು, ದರ್ಶನ್ ಮನವಿಯನ್ನು ಜೈಲಾಧಿಕಾರಿಗಳು ತಿರಸ್ಕಾರ ಮಾಡಿದ್ದಾರೆ ಎನ್ನಲಾಗಿದೆ.
ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…
ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…
ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…
ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…
ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…
ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…