ಬೆಂಗಳೂರು : ಒಂದು ವೇಳೆ ದರ್ಶನ್ ತಪ್ಪು ಮಾಡಿದ್ದರೆ ಅವರಿಗೆ ಶಿಕ್ಷೆಯಾಗಿ ಎಂದು ನಟ ಭಯಂಕರ ಡಾಲಿ ಧನಂಜಯ್ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಬಾರಿಗೆ ಮಲ್ಲಿಕಾರ್ಜುನಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಭಾಗಿಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕಾನೂನಿಗಿಂತ ಯಾರು ದೊಡ್ಡವರಲ್ಲ. ಒಂದು ವೇಳೆ ದರ್ಶನ್ ಅವರು ತಪ್ಪ ಮಾಡಿದ್ದರೆ ಅವರಿಗೆ ಶಿಕ್ಷೆಯಾಗಲಿ ಎಂದು ಹೇಳಿದ್ದಾರೆ.
ಒಂದು ದುರಂತ ನಡೆದಿದೆ. ಕೊಲೆಯಾದ ಜೀವಕ್ಕೆ ನ್ಯಾಯ ಸಿಗಲೇ ಬೇಕು. ಮತ್ತೊಂದು ಕಡೆ ನಾವು ಪ್ರೀತಿ ಅಭಿಮಾನದಿಂದ ನೋಡಿದವರ ಹೆಸರು ಇದರಲ್ಲಿ ತಳಕು ಹಾಕಿಕೊಂಡಾಗ ಬೇಜಾರು ಆಗುತ್ತದೆ. ಆದರೇ ಕಾನೂನಿಗಿಂತ ಯಾರು ದೊಡ್ಡವರಲ್ಲ ಎಂದರು.
ಅಷ್ಟೇ ಅಲ್ಲದೇ ನಾವು ಯಾರು ಆ ಘಟನೆಯನ್ನು ಕಂಡಿಲ್ಲ. ಘಟನೆಯನ್ನು ಯಾರು ವಹಿಸಿಕೊಳ್ಳು ಸಾಧ್ಯವಿಲ್ಲ. ಅಲ್ಲಿ ನಡೆದ ಘಟನೆ ಬಗ್ಗೆ ನ್ಯಾಯಾಲಯ ಮತ್ತು ನ್ಯಾಯಾಧೀಶರಿಗೆ ಗೊತ್ತಿರುತ್ತದೆ. ಎಲ್ಲವನ್ನು ಪರಿಗಣಿಸಿ ಅವರು ನಿರ್ಧಾರ ಕೈಗೊಳ್ಳುತ್ತಾರೆ.
ಒಂದು ವೇಳೆ ತಪ್ಪು ಮಾಡಿಲ್ಲ ಎಂದಾದರೆ ಹೊರಗೆ ಬಂದು ನಮ್ಮನ್ನೆಲ್ಲ ಮತ್ತೆ ರಂಜಿಸಲಿ. ಜೀವನ ಸಧಾ ಮತ್ತೊಂದು ಅವಕಾಶ ನೀಡುತ್ತದೆ ಎಂದು ಹೇಳಿದರು.
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…