ಮನರಂಜನೆ

ದರ್ಶನ್‌ ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ : ಡಾಲಿ ಧನಂಜಯ್‌

ಬೆಂಗಳೂರು : ಒಂದು ವೇಳೆ ದರ್ಶನ್‌ ತಪ್ಪು ಮಾಡಿದ್ದರೆ ಅವರಿಗೆ ಶಿಕ್ಷೆಯಾಗಿ ಎಂದು ನಟ ಭಯಂಕರ ಡಾಲಿ ಧನಂಜಯ್‌ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಬಾರಿಗೆ ಮಲ್ಲಿಕಾರ್ಜುನಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಭಾಗಿಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕಾನೂನಿಗಿಂತ ಯಾರು ದೊಡ್ಡವರಲ್ಲ. ಒಂದು ವೇಳೆ ದರ್ಶನ್‌ ಅವರು ತಪ್ಪ ಮಾಡಿದ್ದರೆ ಅವರಿಗೆ ಶಿಕ್ಷೆಯಾಗಲಿ ಎಂದು ಹೇಳಿದ್ದಾರೆ.

ಒಂದು ದುರಂತ ನಡೆದಿದೆ. ಕೊಲೆಯಾದ ಜೀವಕ್ಕೆ ನ್ಯಾಯ ಸಿಗಲೇ ಬೇಕು. ಮತ್ತೊಂದು ಕಡೆ ನಾವು ಪ್ರೀತಿ ಅಭಿಮಾನದಿಂದ ನೋಡಿದವರ ಹೆಸರು ಇದರಲ್ಲಿ ತಳಕು ಹಾಕಿಕೊಂಡಾಗ ಬೇಜಾರು ಆಗುತ್ತದೆ. ಆದರೇ ಕಾನೂನಿಗಿಂತ ಯಾರು ದೊಡ್ಡವರಲ್ಲ ಎಂದರು.

ಅಷ್ಟೇ ಅಲ್ಲದೇ ನಾವು ಯಾರು ಆ ಘಟನೆಯನ್ನು ಕಂಡಿಲ್ಲ. ಘಟನೆಯನ್ನು ಯಾರು ವಹಿಸಿಕೊಳ್ಳು ಸಾಧ್ಯವಿಲ್ಲ. ಅಲ್ಲಿ ನಡೆದ ಘಟನೆ ಬಗ್ಗೆ ನ್ಯಾಯಾಲಯ ಮತ್ತು ನ್ಯಾಯಾಧೀಶರಿಗೆ ಗೊತ್ತಿರುತ್ತದೆ. ಎಲ್ಲವನ್ನು ಪರಿಗಣಿಸಿ ಅವರು ನಿರ್ಧಾರ ಕೈಗೊಳ್ಳುತ್ತಾರೆ.

ಒಂದು ವೇಳೆ ತಪ್ಪು ಮಾಡಿಲ್ಲ ಎಂದಾದರೆ ಹೊರಗೆ ಬಂದು ನಮ್ಮನ್ನೆಲ್ಲ ಮತ್ತೆ ರಂಜಿಸಲಿ. ಜೀವನ ಸಧಾ ಮತ್ತೊಂದು ಅವಕಾಶ ನೀಡುತ್ತದೆ ಎಂದು ಹೇಳಿದರು.

ಭೂಮಿಕಾ

Recent Posts

ಪಿರಿಯಾಪಟ್ಟಣ | ನಿಲ್ಲದ ಸರ್ವರ್‌ ಸಮಸ್ಯೆ ; ಪಡಿತರ ಪಡೆಯಲು ಪರದಾಟ

ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…

10 mins ago

ಗೌರವಯುತವಾಗಿ ನಡೆದುಕೊಂಡ ಸಿದ್ದರಾಮಯ್ಯ : ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…

2 hours ago

ನಾಳೆ ಸಿಎಲ್‌ಪಿ ಸಭೆ ಕರೆದಿದ್ದೇವೆ, ಸಿದ್ದರಾಮಯ್ಯ ಜತೆ ಚರ್ಚಿಸಿದ್ದೇನೆ : ಡಿ.ಕೆ.ಶಿವಕುಮಾರ್‌

ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…

2 hours ago

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ…

8 hours ago

ರಾಜ್ಯ ಸಚಿವ ಸಂಪುಟ ವಿಸರ್ಜನೆ: ಸಚಿವರ ಸರ್ಕಾರಿ ವಾಹನಗಳು ವಾಪಸ್‌

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…

8 hours ago

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…

9 hours ago