ಬೆಂಗಳೂರು : ಒಂದು ವೇಳೆ ದರ್ಶನ್ ತಪ್ಪು ಮಾಡಿದ್ದರೆ ಅವರಿಗೆ ಶಿಕ್ಷೆಯಾಗಿ ಎಂದು ನಟ ಭಯಂಕರ ಡಾಲಿ ಧನಂಜಯ್ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಬಾರಿಗೆ ಮಲ್ಲಿಕಾರ್ಜುನಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಭಾಗಿಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕಾನೂನಿಗಿಂತ ಯಾರು ದೊಡ್ಡವರಲ್ಲ. ಒಂದು ವೇಳೆ ದರ್ಶನ್ ಅವರು ತಪ್ಪ ಮಾಡಿದ್ದರೆ ಅವರಿಗೆ ಶಿಕ್ಷೆಯಾಗಲಿ ಎಂದು ಹೇಳಿದ್ದಾರೆ.
ಒಂದು ದುರಂತ ನಡೆದಿದೆ. ಕೊಲೆಯಾದ ಜೀವಕ್ಕೆ ನ್ಯಾಯ ಸಿಗಲೇ ಬೇಕು. ಮತ್ತೊಂದು ಕಡೆ ನಾವು ಪ್ರೀತಿ ಅಭಿಮಾನದಿಂದ ನೋಡಿದವರ ಹೆಸರು ಇದರಲ್ಲಿ ತಳಕು ಹಾಕಿಕೊಂಡಾಗ ಬೇಜಾರು ಆಗುತ್ತದೆ. ಆದರೇ ಕಾನೂನಿಗಿಂತ ಯಾರು ದೊಡ್ಡವರಲ್ಲ ಎಂದರು.
ಅಷ್ಟೇ ಅಲ್ಲದೇ ನಾವು ಯಾರು ಆ ಘಟನೆಯನ್ನು ಕಂಡಿಲ್ಲ. ಘಟನೆಯನ್ನು ಯಾರು ವಹಿಸಿಕೊಳ್ಳು ಸಾಧ್ಯವಿಲ್ಲ. ಅಲ್ಲಿ ನಡೆದ ಘಟನೆ ಬಗ್ಗೆ ನ್ಯಾಯಾಲಯ ಮತ್ತು ನ್ಯಾಯಾಧೀಶರಿಗೆ ಗೊತ್ತಿರುತ್ತದೆ. ಎಲ್ಲವನ್ನು ಪರಿಗಣಿಸಿ ಅವರು ನಿರ್ಧಾರ ಕೈಗೊಳ್ಳುತ್ತಾರೆ.
ಒಂದು ವೇಳೆ ತಪ್ಪು ಮಾಡಿಲ್ಲ ಎಂದಾದರೆ ಹೊರಗೆ ಬಂದು ನಮ್ಮನ್ನೆಲ್ಲ ಮತ್ತೆ ರಂಜಿಸಲಿ. ಜೀವನ ಸಧಾ ಮತ್ತೊಂದು ಅವಕಾಶ ನೀಡುತ್ತದೆ ಎಂದು ಹೇಳಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…