ಮನರಂಜನೆ

ಒಂದೇ ದಿನ ದರ್ಶನ್‍ ಅಭಿನಯದ ಎರಡು ಚಿತ್ರಗಳ ಬಿಡುಗಡೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸದ್ಯ ಬಳ್ಳಾರಿ ಜೈಲಿನಲ್ಲಿದ್ದಾರೆ. ಈ ವರ್ಷ ದರ್ಶನ್‍ ಅಭಿನಯದ ಯಾವೊಂದು ಚಿತ್ರವು ಬಿಡುಗಡೆಯಾಗಿಲ್ಲ. ಸದ್ಯಕ್ಕೆ ಯಾವ ಹೊಸ ಚಿತ್ರ ಬಿಡುಗಡೆ ಆಗುವ ಹಾಗೆ ಕಾಣುತ್ತಿಲ್ಲ. ಈ ಮಧ್ಯೆ, ಒಂದೇ ದಿನ ದರ್ಶನ್‍ ಅಭಿನಯದ ಎರಡು ಚಿತ್ರಗಳು ಮರುಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ.

ಹೌದು, ದರ್ಶನ್‍ ಅವರ ಹೊಸ ಚಿತ್ರಗಳ ಗೈರು ಹಾಜರಿಯಲ್ಲಿ ಅವರ ಹಳೆಯ ಚಿತ್ರಗಳು ಬಿಡುಗಡೆಯಾಗುತ್ತಿವೆ. ಈಗಾಗಲೇ ‘ಶಾಸ್ತ್ರಿ’, ‘ಕರಿಯ’ ಮತ್ತು ‘ಪೊರ್ಕಿ’ ಚಿತ್ರಗಳು ಮರುಬಿಡುಗಡೆಯಾಗಿವೆ. ಈ ಪೈಕಿ ‘ಶಾಸ್ತ್ರಿ’ ಚಿತ್ರವು ಸ್ವಲ್ಪ ಸದ್ದು ಮಾಡಿದ್ದು ಬಿಟ್ಟರೆ, ಮಿಕ್ಕಂತೆ ಎರಡೂ ಚಿತ್ರಗಳು ಸದ್ದು ಮಾಡಲಿಲ್ಲ. ಹೀಗಿರುವಾಗಲೇ ದರ್ಶನ್‍ ಅಭಿನಯದ ಎರಡು ಚಿತ್ರಗಳು ಮರುಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ.

ನವೆಂಬರ್‍ 09ರಂದು ದರ್ಶನ್‍ ಅಭಿನಯದ ಎರಡು ಜನಪ್ರಿಯ ಚಿತ್ರಗಳಾದ ‘ನವಗ್ರಹ’ ಮತ್ತು ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಚಿತ್ರಗಳು ಬಿಡುಗಡೆಯಾಗುವುದಕ್ಕೆ ಸಜ್ಜಾಗಿವೆ. ಆ ವಾರ ಸದ್ಯ ಯಾವುದೇ ದೊಡ್ಡ ಚಿತ್ರ ಬಿಡುಗಡೆಯಾಗದಿರುವುದರಿಂದ ಈ ಎರಡೂ ಚಿತ್ರಗಳು ಒಂದೇ ದಿನ ತೆರೆಕಾಣಲಿದೆ.

ಅಂದಹಾಗೆ, ‘ನವಗ್ರಹ’ ಚಿತ್ರವು 2008ರ ನವೆಂಬರ್ 07ರಂದು ಬಿಡುಗಡೆಯಾಗಿತ್ತು. ಈಗ ಚಿತ್ರವು 09ರಂದು ಬಿಡುಗಡೆಯಾಗುತ್ತಿದೆ. ತೂಗುದೀಪ ಪ್ರೊಡಕ್ಷನ್ಸ್ ಬ್ಯಾನರ್‍ನಡಿ ಮೀನಾ ತೂಗುದೀಪ ಚಿತ್ರದಲ್ಲಿ ದರ್ಶನ್‍ ನಟಿಸಿದರೆ, ಅವರ ಸಹೋದರ ದಿನಕರ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದರು. ಕನ್ನಡ ಚಿತ್ರರಂಗದಲ್ಲಿ ವಿಲನ್‍ ಪಾತ್ರದಲ್ಲಿ ಗುರುತಿಸಿಕೊಂಡಿದ್ದ ಜನಪ್ರಿಯ ನಟರಾದ ಪ್ರಭಾಕರ್, ಸುಧೀರ್‍, ಕೀರ್ತಿರಾಜ್‍, ದಿನೇಶ್, ಸುಂದರಕೃಷ್ಣ ಅರಸ್‍ ಮತ್ತು ತೂಗುದೀಪ ಶ್ರೀನಿವಾಸ್‍ ಅವರ ಮಕ್ಕಳು ಈ ಚಿತ್ರದಲ್ಲಿ ನಟಿಸಿದ್ದರು.

ಇನ್ನು, 2012ರಲ್ಲಿ ಬಿಡುಗಡೆಯಾದ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಚಿತ್ರವೂ ಅದೇ ದಿನ ಬಿಡುಗಡೆಯಾಗುತ್ತಿದೆ. ಬ್ರಿಟಿಷರ ಆಳ್ವಿಕೆಯ ವಿರುದ್ಧ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರಾದ ಸಂಗೊಳ್ಳಿ ರಾಯಣ್ಣ ಅವರ ಜೀವನವನ್ನಾಧರಿಸಿದ ಈ ಚಿತ್ರವನ್ನು ಆನಂದ್ ಅಪ್ಪುಗೋಳ್‍ ನಿರ್ಮಿಸಿದರೆ, ನಾಗಣ್ಣ ನಿರ್ದೇಶನ ಮಾಡಿದ್ದರು. ಈ ಚಿತ್ರವು ಬಿಡುಗಡೆಯಾದ ಒಂದು ವರ್ಷ ಕಾಲ ಪ್ರದರ್ಶನ ಕಂಡಿತ್ತು.

ಈಗ ಎರಡೂ ಚಿತ್ರಗಳು ಒಂದೇ ದಿನ ಬಿಡುಗಡೆಯಾಗುತ್ತಿದೆ. ಈ ಎರಡರಲ್ಲಿ ಯಾವುದನ್ನು ಮೊದಲು ನೋಡಬೇಕು ಎಂಬ ಗೊಂದಲದಲ್ಲಿ ಅಭಿಮಾನಿಗಳು ಇದ್ದಾರೆ.

ಭೂಮಿಕಾ

Recent Posts

ಮಾರ್ಚ್‌ನಲ್ಲಿ ಬಜೆಟ್‌ ಮಂಡನೆ : ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಗುರುವಾರದಿಂದ ಬಜೆಟ್ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ. ಮಾರ್ಚ್.6ರಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ…

8 mins ago

ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್‌ ಸೇದಿ ಫೋಟೋಶೂಟ್:‌ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಮೈಸೂರಿನ ಲಕ್ಷ್ಮೀಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ…

15 mins ago

ಮೆಟ್ರೋ ಪ್ರಯಾಣ ದರ ಏರಿಕೆ: ಸಚಿವ ದಿನೇಶ್‌ ಗುಂಡೂರಾವ್‌ ಸಮರ್ಥನೆ

ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿರುವುದನ್ನು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು,…

45 mins ago

ಹನೂರು ತಾಲ್ಲೂಕು ವ್ಯಾಪ್ತಿಯಲ್ಲಿ ಮುಂದುವರಿದ ಹಸುಗಳ ಮರಣ ಮೃದಂಗ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಹಸುಗಳ ಮರಣ ಮೃದಂಗ ಮುಂದುವರೆದಿದ್ದು ಸಂಬಂಧಪಟ್ಟ ಪಶುಸಂಗೋಪನಾ…

1 hour ago

ಚಾಮುಂಡಿಬೆಟ್ಟಕ್ಕೆ ನಟ ಕಿಚ್ಚ ಸುದೀಪ್‌ ಭೇಟಿ

ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ್‌ ಭೇಟಿ ನೀಡಿ ತಾಯಿಗೆ ವಿಶೇಷ ಪೂಜೆ…

2 hours ago

ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣ: ಎಚ್.ಡಿ.ರೇವಣ್ಣಗೆ ಹೈಕೋರ್ಟ್‌ ಬಿಗ್‌ ಶಾಕ್‌

ಬೆಂಗಳೂರು: ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಹೈಕೋರ್ಟ್‌ ಬಿಗ್‌ ಶಾಕ್‌ ಕೊಟ್ಟಿದೆ. ಪ್ರಕರಣ ರದ್ದು…

3 hours ago