ಮನರಂಜನೆ

ಒಂದೇ ದಿನ ದರ್ಶನ್‍ ಅಭಿನಯದ ಎರಡು ಚಿತ್ರಗಳ ಬಿಡುಗಡೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸದ್ಯ ಬಳ್ಳಾರಿ ಜೈಲಿನಲ್ಲಿದ್ದಾರೆ. ಈ ವರ್ಷ ದರ್ಶನ್‍ ಅಭಿನಯದ ಯಾವೊಂದು ಚಿತ್ರವು ಬಿಡುಗಡೆಯಾಗಿಲ್ಲ. ಸದ್ಯಕ್ಕೆ ಯಾವ ಹೊಸ ಚಿತ್ರ ಬಿಡುಗಡೆ ಆಗುವ ಹಾಗೆ ಕಾಣುತ್ತಿಲ್ಲ. ಈ ಮಧ್ಯೆ, ಒಂದೇ ದಿನ ದರ್ಶನ್‍ ಅಭಿನಯದ ಎರಡು ಚಿತ್ರಗಳು ಮರುಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ.

ಹೌದು, ದರ್ಶನ್‍ ಅವರ ಹೊಸ ಚಿತ್ರಗಳ ಗೈರು ಹಾಜರಿಯಲ್ಲಿ ಅವರ ಹಳೆಯ ಚಿತ್ರಗಳು ಬಿಡುಗಡೆಯಾಗುತ್ತಿವೆ. ಈಗಾಗಲೇ ‘ಶಾಸ್ತ್ರಿ’, ‘ಕರಿಯ’ ಮತ್ತು ‘ಪೊರ್ಕಿ’ ಚಿತ್ರಗಳು ಮರುಬಿಡುಗಡೆಯಾಗಿವೆ. ಈ ಪೈಕಿ ‘ಶಾಸ್ತ್ರಿ’ ಚಿತ್ರವು ಸ್ವಲ್ಪ ಸದ್ದು ಮಾಡಿದ್ದು ಬಿಟ್ಟರೆ, ಮಿಕ್ಕಂತೆ ಎರಡೂ ಚಿತ್ರಗಳು ಸದ್ದು ಮಾಡಲಿಲ್ಲ. ಹೀಗಿರುವಾಗಲೇ ದರ್ಶನ್‍ ಅಭಿನಯದ ಎರಡು ಚಿತ್ರಗಳು ಮರುಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ.

ನವೆಂಬರ್‍ 09ರಂದು ದರ್ಶನ್‍ ಅಭಿನಯದ ಎರಡು ಜನಪ್ರಿಯ ಚಿತ್ರಗಳಾದ ‘ನವಗ್ರಹ’ ಮತ್ತು ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಚಿತ್ರಗಳು ಬಿಡುಗಡೆಯಾಗುವುದಕ್ಕೆ ಸಜ್ಜಾಗಿವೆ. ಆ ವಾರ ಸದ್ಯ ಯಾವುದೇ ದೊಡ್ಡ ಚಿತ್ರ ಬಿಡುಗಡೆಯಾಗದಿರುವುದರಿಂದ ಈ ಎರಡೂ ಚಿತ್ರಗಳು ಒಂದೇ ದಿನ ತೆರೆಕಾಣಲಿದೆ.

ಅಂದಹಾಗೆ, ‘ನವಗ್ರಹ’ ಚಿತ್ರವು 2008ರ ನವೆಂಬರ್ 07ರಂದು ಬಿಡುಗಡೆಯಾಗಿತ್ತು. ಈಗ ಚಿತ್ರವು 09ರಂದು ಬಿಡುಗಡೆಯಾಗುತ್ತಿದೆ. ತೂಗುದೀಪ ಪ್ರೊಡಕ್ಷನ್ಸ್ ಬ್ಯಾನರ್‍ನಡಿ ಮೀನಾ ತೂಗುದೀಪ ಚಿತ್ರದಲ್ಲಿ ದರ್ಶನ್‍ ನಟಿಸಿದರೆ, ಅವರ ಸಹೋದರ ದಿನಕರ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದರು. ಕನ್ನಡ ಚಿತ್ರರಂಗದಲ್ಲಿ ವಿಲನ್‍ ಪಾತ್ರದಲ್ಲಿ ಗುರುತಿಸಿಕೊಂಡಿದ್ದ ಜನಪ್ರಿಯ ನಟರಾದ ಪ್ರಭಾಕರ್, ಸುಧೀರ್‍, ಕೀರ್ತಿರಾಜ್‍, ದಿನೇಶ್, ಸುಂದರಕೃಷ್ಣ ಅರಸ್‍ ಮತ್ತು ತೂಗುದೀಪ ಶ್ರೀನಿವಾಸ್‍ ಅವರ ಮಕ್ಕಳು ಈ ಚಿತ್ರದಲ್ಲಿ ನಟಿಸಿದ್ದರು.

ಇನ್ನು, 2012ರಲ್ಲಿ ಬಿಡುಗಡೆಯಾದ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಚಿತ್ರವೂ ಅದೇ ದಿನ ಬಿಡುಗಡೆಯಾಗುತ್ತಿದೆ. ಬ್ರಿಟಿಷರ ಆಳ್ವಿಕೆಯ ವಿರುದ್ಧ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರಾದ ಸಂಗೊಳ್ಳಿ ರಾಯಣ್ಣ ಅವರ ಜೀವನವನ್ನಾಧರಿಸಿದ ಈ ಚಿತ್ರವನ್ನು ಆನಂದ್ ಅಪ್ಪುಗೋಳ್‍ ನಿರ್ಮಿಸಿದರೆ, ನಾಗಣ್ಣ ನಿರ್ದೇಶನ ಮಾಡಿದ್ದರು. ಈ ಚಿತ್ರವು ಬಿಡುಗಡೆಯಾದ ಒಂದು ವರ್ಷ ಕಾಲ ಪ್ರದರ್ಶನ ಕಂಡಿತ್ತು.

ಈಗ ಎರಡೂ ಚಿತ್ರಗಳು ಒಂದೇ ದಿನ ಬಿಡುಗಡೆಯಾಗುತ್ತಿದೆ. ಈ ಎರಡರಲ್ಲಿ ಯಾವುದನ್ನು ಮೊದಲು ನೋಡಬೇಕು ಎಂಬ ಗೊಂದಲದಲ್ಲಿ ಅಭಿಮಾನಿಗಳು ಇದ್ದಾರೆ.

ಭೂಮಿಕಾ

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

6 hours ago