ಮನರಂಜನೆ

ಒಂದೇ ದಿನ ದರ್ಶನ್‍ ಅಭಿನಯದ ಎರಡು ಚಿತ್ರಗಳ ಬಿಡುಗಡೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸದ್ಯ ಬಳ್ಳಾರಿ ಜೈಲಿನಲ್ಲಿದ್ದಾರೆ. ಈ ವರ್ಷ ದರ್ಶನ್‍ ಅಭಿನಯದ ಯಾವೊಂದು ಚಿತ್ರವು ಬಿಡುಗಡೆಯಾಗಿಲ್ಲ. ಸದ್ಯಕ್ಕೆ ಯಾವ ಹೊಸ ಚಿತ್ರ ಬಿಡುಗಡೆ ಆಗುವ ಹಾಗೆ ಕಾಣುತ್ತಿಲ್ಲ. ಈ ಮಧ್ಯೆ, ಒಂದೇ ದಿನ ದರ್ಶನ್‍ ಅಭಿನಯದ ಎರಡು ಚಿತ್ರಗಳು ಮರುಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ.

ಹೌದು, ದರ್ಶನ್‍ ಅವರ ಹೊಸ ಚಿತ್ರಗಳ ಗೈರು ಹಾಜರಿಯಲ್ಲಿ ಅವರ ಹಳೆಯ ಚಿತ್ರಗಳು ಬಿಡುಗಡೆಯಾಗುತ್ತಿವೆ. ಈಗಾಗಲೇ ‘ಶಾಸ್ತ್ರಿ’, ‘ಕರಿಯ’ ಮತ್ತು ‘ಪೊರ್ಕಿ’ ಚಿತ್ರಗಳು ಮರುಬಿಡುಗಡೆಯಾಗಿವೆ. ಈ ಪೈಕಿ ‘ಶಾಸ್ತ್ರಿ’ ಚಿತ್ರವು ಸ್ವಲ್ಪ ಸದ್ದು ಮಾಡಿದ್ದು ಬಿಟ್ಟರೆ, ಮಿಕ್ಕಂತೆ ಎರಡೂ ಚಿತ್ರಗಳು ಸದ್ದು ಮಾಡಲಿಲ್ಲ. ಹೀಗಿರುವಾಗಲೇ ದರ್ಶನ್‍ ಅಭಿನಯದ ಎರಡು ಚಿತ್ರಗಳು ಮರುಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ.

ನವೆಂಬರ್‍ 09ರಂದು ದರ್ಶನ್‍ ಅಭಿನಯದ ಎರಡು ಜನಪ್ರಿಯ ಚಿತ್ರಗಳಾದ ‘ನವಗ್ರಹ’ ಮತ್ತು ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಚಿತ್ರಗಳು ಬಿಡುಗಡೆಯಾಗುವುದಕ್ಕೆ ಸಜ್ಜಾಗಿವೆ. ಆ ವಾರ ಸದ್ಯ ಯಾವುದೇ ದೊಡ್ಡ ಚಿತ್ರ ಬಿಡುಗಡೆಯಾಗದಿರುವುದರಿಂದ ಈ ಎರಡೂ ಚಿತ್ರಗಳು ಒಂದೇ ದಿನ ತೆರೆಕಾಣಲಿದೆ.

ಅಂದಹಾಗೆ, ‘ನವಗ್ರಹ’ ಚಿತ್ರವು 2008ರ ನವೆಂಬರ್ 07ರಂದು ಬಿಡುಗಡೆಯಾಗಿತ್ತು. ಈಗ ಚಿತ್ರವು 09ರಂದು ಬಿಡುಗಡೆಯಾಗುತ್ತಿದೆ. ತೂಗುದೀಪ ಪ್ರೊಡಕ್ಷನ್ಸ್ ಬ್ಯಾನರ್‍ನಡಿ ಮೀನಾ ತೂಗುದೀಪ ಚಿತ್ರದಲ್ಲಿ ದರ್ಶನ್‍ ನಟಿಸಿದರೆ, ಅವರ ಸಹೋದರ ದಿನಕರ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದರು. ಕನ್ನಡ ಚಿತ್ರರಂಗದಲ್ಲಿ ವಿಲನ್‍ ಪಾತ್ರದಲ್ಲಿ ಗುರುತಿಸಿಕೊಂಡಿದ್ದ ಜನಪ್ರಿಯ ನಟರಾದ ಪ್ರಭಾಕರ್, ಸುಧೀರ್‍, ಕೀರ್ತಿರಾಜ್‍, ದಿನೇಶ್, ಸುಂದರಕೃಷ್ಣ ಅರಸ್‍ ಮತ್ತು ತೂಗುದೀಪ ಶ್ರೀನಿವಾಸ್‍ ಅವರ ಮಕ್ಕಳು ಈ ಚಿತ್ರದಲ್ಲಿ ನಟಿಸಿದ್ದರು.

ಇನ್ನು, 2012ರಲ್ಲಿ ಬಿಡುಗಡೆಯಾದ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಚಿತ್ರವೂ ಅದೇ ದಿನ ಬಿಡುಗಡೆಯಾಗುತ್ತಿದೆ. ಬ್ರಿಟಿಷರ ಆಳ್ವಿಕೆಯ ವಿರುದ್ಧ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರಾದ ಸಂಗೊಳ್ಳಿ ರಾಯಣ್ಣ ಅವರ ಜೀವನವನ್ನಾಧರಿಸಿದ ಈ ಚಿತ್ರವನ್ನು ಆನಂದ್ ಅಪ್ಪುಗೋಳ್‍ ನಿರ್ಮಿಸಿದರೆ, ನಾಗಣ್ಣ ನಿರ್ದೇಶನ ಮಾಡಿದ್ದರು. ಈ ಚಿತ್ರವು ಬಿಡುಗಡೆಯಾದ ಒಂದು ವರ್ಷ ಕಾಲ ಪ್ರದರ್ಶನ ಕಂಡಿತ್ತು.

ಈಗ ಎರಡೂ ಚಿತ್ರಗಳು ಒಂದೇ ದಿನ ಬಿಡುಗಡೆಯಾಗುತ್ತಿದೆ. ಈ ಎರಡರಲ್ಲಿ ಯಾವುದನ್ನು ಮೊದಲು ನೋಡಬೇಕು ಎಂಬ ಗೊಂದಲದಲ್ಲಿ ಅಭಿಮಾನಿಗಳು ಇದ್ದಾರೆ.

ಭೂಮಿಕಾ

Recent Posts

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

3 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

3 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

3 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

3 hours ago

ಇತಿಹಾಸದ ಪುಟಗಳಲ್ಲಿ ಜಿರಳೆಗಳು

ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…

3 hours ago