ಬೆಂಗಳೂರು: ತಮ್ಮ 48ನೇ ಹುಟ್ಟು ಹಬ್ಬದ ಪ್ರಯುಕ್ತ ಚಾಲೆಂಜಿಗ್ ಸ್ಟಾರ್ ದರ್ಶನ್ ಅವರು ನೆಚ್ಚಿನ ಅಭಿಮಾನಿಗಳಿಗೆ ಪತ್ರ ಬರೆದು ಶುಭ ಕೋರಿದ್ದಾರೆ.
ನಾನು ಹುಟ್ಟುಹಬ್ಬ ಆಚರಿಸುತ್ತಿಲ್ಲ ಎಂದು ವಿಡಿಯೋ ಮಾಡಿ ತಿಳಿಸಿದ್ದರೂ ಅಭಿಮಾನಿಗಳ ಸಂಭ್ರಮ ಕಡಿಮೆಯಾಗಿಲ್ಲ. ಈ ಕಾರಣಕ್ಕೆ ತನ್ನ ಪ್ರೀತಿಯ ಅಭಿಮಾನಿಗಳನ್ನು ಸೆಲೆಬ್ರಿಟಿಸ್ ಎಂದು ಕರೆದು ಪತ್ರ ಬರೆದಿದ್ದಾರೆ.
ಪ್ರತದಲ್ಲಿ ಏನಿದೆ?
ನಿಮ್ಮ ಬಗ್ಗೆ ಎಷ್ಟು ಹೇಳಿದರೂ ಕಡಿಮೆ ಎಂದು ಭಾಸವಾಗುತ್ತದೆ. ಕಷ್ಟದಲ್ಲಿದ್ದಾಗ ಸದಾ ಬೆಂಬಲದಲ್ಲಿ ನಿಲ್ಲುವಂತ ಈ ನಿಷ್ಕಲ್ಮಶ ಹೃದಯಗಳಿಗೆ ನಾನು ಸದಾ ಚಿರಋಣಿ. ನಿಮ್ಮ ಪ್ರೀತಿ-ಪ್ರೋತ್ಸಾಹ ಮತ್ತು ಬೆಂಬಲವೇ ನನ್ನ ಜೀವನದ ನಿಜವಾದ ಆಸ್ತಿ.
ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿಸುವ ನಿಮ್ಮ ಪ್ರೀತಿಯ ಆಶೀರ್ವಾದಕ್ಕೆ ನಾನು ಮನದಾಳದಿಂದ ಕೃತಜ್ಞನಾಗಿದ್ದೇನೆ. ನೀವು ಹಲವೆಡೆ ಮಾಡುತ್ತಿರುವ ದಾನ-ಧರ್ಮ ಕಾರ್ಯಗಳು ಸಹಸ್ರಾರು ಹೃದಯಗಳನ್ನು ಸ್ಪರ್ಶಿಸುವಂತಹದ್ದು. ನಿಮ್ಮ ಈ ಕೆಲಸಗಳು ಅನೇಕರಿಗೆ ದಾರಿದೀಪವಾಗಲಿ.
ನಿಮ್ಮ ಮನದಾಳದ ಪ್ರೀತಿಯ ಹಾರೈಕೆಗಳು ನನ್ನ ಮುಂದಿನ ಹೆಜ್ಜೆಗೆ ದಾರಿ ತೋರುವ ಬೆಳಕು ಎಂದರೆ ಅತಿಶಯೋಕ್ತಿಯಲ್ಲ. ಆದಷ್ಟು ಬೇಗ ನಿಮ್ಮನ್ನು ಕಾಣುವ ಹಂಬಲ, ಕಾತುರ ನನ್ನಲಿಯೂ ಇದೆ. ನಿಮ್ಮನ್ನು ಪಡೆದಿರುವ ನಾನೇ ಧನ್ಯ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…