ಮನರಂಜನೆ

ಕಿಚ್ಚ ಸುದೀಪ್‌ ಯುದ್ಧದ ಮಾತಿಗೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಟಾಂಗ್‌

ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್ ಡಿಸೆಂಬರ್.‌25ರಂದು ಬಿಡುಗಡೆಯಾಗಲಿದೆ. ಹುಬ್ಬಳ್ಳಿಯಲ್ಲಿ ನಡೆದ ಚಿತ್ರದ ಪ್ರೀ ರಿಲೀಸ್‌ ಇವೆಂಟ್‌ ಕಾರ್ಯಕ್ರಮದಲ್ಲಿ ಸುದೀಪ್‌ ಯುದ್ಧ ಬಗ್ಗೆ ಪ್ರಸ್ತಾಪಿಸಿದ್ದಾರೆ. ನಮ್ಮ ಅಭಿಮಾನಿಗಳು ನೀವು ಸುಮ್ಮನೆ ಇರಬೇಡಿ. ಈ ಕಾರ್ಯಕ್ರಮವನ್ನು ಹುಬ್ಬಳ್ಳಿಯಲ್ಲಿ ಯಾಕೆ ಮಾಡುತ್ತಿದ್ದೇವೆ ಎಂದರೆ ಇಲ್ಲಿಂದ ಮಾತನಾಡಿದರೆ ಕೆಲವೊಬ್ಬರಿಗೆ ತಟ್ಟುತ್ತದೆ. ಅದಕ್ಕೆ ಇಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿದ್ದೇವೆ ಎಂದಿದ್ದಾರೆ.‌

ಇದನ್ನು ಓದಿ: ಬೆಳಗಾವಿ ಅಧಿವೇಶನದಲ್ಲೂ ನಟ ದರ್ಶನ್‌ ಬಗ್ಗೆ ಚರ್ಚೆ : ಏನದು?

ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಮಾತನಾಡಿದ ಸುದೀಪ್‌ ಅವರು, ಯುದ್ಧಕ್ಕೆ ಸಿದ್ಧವಾಗಿದ್ದೇವೆ ಎಂದು ಗುಡುಗಿದ್ದಾರೆ.

ಈ ಬಗ್ಗೆ ಮಾತನಾಡಿರುವ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಅವರು, ದರ್ಶನ್‌ ಜೈಲಿನಲ್ಲಿದ್ದಾಗ ಕೆಲವರು ಅವರ ಬಗ್ಗೆ, ಅವರ ಅಭಿಮಾನಿಗಳ ಬಗ್ಗೆ ಹೊರಗಡೆ ಹಾಗೂ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಾರೆ. ಟಿವಿ ಸಂದರ್ಶನದಲ್ಲಿ, ಸ್ಟೇಜ್‌ ಮೇಲೆ ಮಾತಾಡ್ತಾರೆ. ಆದರೆ ದರ್ಶನ್‌ ಇದ್ದಾಗ ಮಾತ್ರ ಅವರು ಗೊತ್ತೇ ಆಗದಂತೆ ಇರುತ್ತಾರೆ. ಬೆಂಗಳೂರಿನಲ್ಲಿ ಇದ್ದಾರಾ ಎಂದು ಗೊತ್ತೇ ಆಗದಂತೆ ಇರುತ್ತಾರೆ. ಟೀಕಿಸುವವರ ಬಗ್ಗೆ ದರ್ಶನ್‌ ತಲೆಕೆಡಿಸಿಕೊಳ್ಳುವುದಿಲ್ಲ. ಬೇಜಾರು ಮಾಡಿಕೊಳ್ಳುವುದಿಲ್ಲ. ದರ್ಶನ್‌ ಅಭಿಮಾನಿಗಳಾದ ನೀವು ಕೂಡ ತಲೆಕೆಡಿಸಿಕೊಳ್ಳಬೇಡಿ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

5 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

6 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

7 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

7 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

13 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

13 hours ago