ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಡಿಸೆಂಬರ್.25ರಂದು ಬಿಡುಗಡೆಯಾಗಲಿದೆ. ಹುಬ್ಬಳ್ಳಿಯಲ್ಲಿ ನಡೆದ ಚಿತ್ರದ ಪ್ರೀ ರಿಲೀಸ್ ಇವೆಂಟ್ ಕಾರ್ಯಕ್ರಮದಲ್ಲಿ ಸುದೀಪ್ ಯುದ್ಧ ಬಗ್ಗೆ ಪ್ರಸ್ತಾಪಿಸಿದ್ದಾರೆ. ನಮ್ಮ ಅಭಿಮಾನಿಗಳು ನೀವು ಸುಮ್ಮನೆ ಇರಬೇಡಿ. ಈ ಕಾರ್ಯಕ್ರಮವನ್ನು ಹುಬ್ಬಳ್ಳಿಯಲ್ಲಿ ಯಾಕೆ ಮಾಡುತ್ತಿದ್ದೇವೆ ಎಂದರೆ ಇಲ್ಲಿಂದ ಮಾತನಾಡಿದರೆ ಕೆಲವೊಬ್ಬರಿಗೆ ತಟ್ಟುತ್ತದೆ. ಅದಕ್ಕೆ ಇಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿದ್ದೇವೆ ಎಂದಿದ್ದಾರೆ.
ಇದನ್ನು ಓದಿ: ಬೆಳಗಾವಿ ಅಧಿವೇಶನದಲ್ಲೂ ನಟ ದರ್ಶನ್ ಬಗ್ಗೆ ಚರ್ಚೆ : ಏನದು?
ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಮಾತನಾಡಿದ ಸುದೀಪ್ ಅವರು, ಯುದ್ಧಕ್ಕೆ ಸಿದ್ಧವಾಗಿದ್ದೇವೆ ಎಂದು ಗುಡುಗಿದ್ದಾರೆ.
ಈ ಬಗ್ಗೆ ಮಾತನಾಡಿರುವ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು, ದರ್ಶನ್ ಜೈಲಿನಲ್ಲಿದ್ದಾಗ ಕೆಲವರು ಅವರ ಬಗ್ಗೆ, ಅವರ ಅಭಿಮಾನಿಗಳ ಬಗ್ಗೆ ಹೊರಗಡೆ ಹಾಗೂ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಾರೆ. ಟಿವಿ ಸಂದರ್ಶನದಲ್ಲಿ, ಸ್ಟೇಜ್ ಮೇಲೆ ಮಾತಾಡ್ತಾರೆ. ಆದರೆ ದರ್ಶನ್ ಇದ್ದಾಗ ಮಾತ್ರ ಅವರು ಗೊತ್ತೇ ಆಗದಂತೆ ಇರುತ್ತಾರೆ. ಬೆಂಗಳೂರಿನಲ್ಲಿ ಇದ್ದಾರಾ ಎಂದು ಗೊತ್ತೇ ಆಗದಂತೆ ಇರುತ್ತಾರೆ. ಟೀಕಿಸುವವರ ಬಗ್ಗೆ ದರ್ಶನ್ ತಲೆಕೆಡಿಸಿಕೊಳ್ಳುವುದಿಲ್ಲ. ಬೇಜಾರು ಮಾಡಿಕೊಳ್ಳುವುದಿಲ್ಲ. ದರ್ಶನ್ ಅಭಿಮಾನಿಗಳಾದ ನೀವು ಕೂಡ ತಲೆಕೆಡಿಸಿಕೊಳ್ಳಬೇಡಿ ಎಂದು ಹೇಳಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…