ಮನರಂಜನೆ

ಮತ್ತೆ ಮುಂದಕ್ಕೆ ಹೋಯ್ತಾ ಪ್ರಜ್ವಲ್‍ ಅಭಿನಯದ ‘ಮಾಫಿಯಾ’?

ಪ್ರಜ್ವಲ್‍ ದೇವರಾಜ್‍ ಅಭಿನಯದ ‘ಮಾಫಿಯಾ’ ಚಿತ್ರದ ಕೆಲಸಗಳು ಕಳೆದ ವರ್ಷವೇ ಮುಗಿದಿತ್ತು. ನಾಲ್ಕೈದು ಕೋಟಿ ಹಾಕಿ ಮಾಡಿದ ಚಿತ್ರಕ್ಕೆ ಒಂದು ರೂಪಾಯಿ ಸಹ ಬರದಿದ್ದರೆ ಹೇಗೆ, ಒಂದಿಷ್ಟು ವ್ಯಾಪಾರವಾದ ಮೇಲೆ ಚಿತ್ರ ಬಿಡುಗಡೆ ಮಾಡೋಣ ಎಂದು ಸುಮ್ಮನಿದ್ದರು. ಆದರೆ, ಬ್ಯುಸಿನೆಸ್‍ ಆಗದ ಕಾರಣ, ಚಿತ್ರತಂಡದವರು ಚಿತ್ರದ ಬಿಡುಗಡೆಯನ್ನು ಘೋಷಿಸಿರಲಿಲ್ಲ. ಕೊನೆಗೆ ಚಿತ್ರವನ್ನು ಜುಲೈ 26ಕ್ಕೆ ಬಿಡುಗಡೆ ಮಾಡುತ್ತಿರುವುದಾಗಿ ಘೋಷಿಸಿದ್ದರು. ಆದರೆ, ಈ ವಾರವೂ ಚಿತ್ರ ಬಿಡುಗಡೆ ಆಗುವಂತೆ ಕಾಣುತ್ತಿಲ್ಲ.

ಹೌದು, ಜುಲಥ 26ರಂದು ‘ಮಾಫಿಯಾ’ ಬಿಡುಗಡೆ ಎಂದು ಚಿತ್ರತಂಡ ಘೋಷಿಸಿತ್ತು. ಆದರೆ, ಚಿತ್ರ ಬಿಡುಗಡೆಗೆ ಇನ್ನು ನಾಲ್ಕೇ ದಿನಗಳಿದ್ದರೂ, ಚಿತ್ರದ ಪ್ರಚಾರವೂ ಆಗುತ್ತಿಲ್ಲ, ಚಿತ್ರದ ಬಿಡುಗಡೆಯನ್ನು ಮುಂದೂಡಿದ ಸುದ್ದಿಯೂ ಇಲ್ಲ. ಹಾಗಾದರೆ, ‘ಮಾಫಿಯಾ’ ಈ ವಾರ ಬಿಡುಗಡೆಯಾಗುತ್ತದೋ ಇಲ್ಲವೋ ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ.

ಮೂಲಗಳ ಪ್ರಕಾರ, ಚಿತ್ರದ ಬಿಡುಗಡೆ ಈ ವಾರವೂ ಇಲ್ಲ. ಬಹುಶಃ ಬಿಡುಗಡೆಯ ದಿನಾಂಕವನ್ನು ಘೋಷಿಸಿದರೆ, ಒಂದಿಷ್ಟು ವ್ಯಾಪಾರ ಆಗಬಹುದು ಎಂದು ಚಿತ್ರತಂಡದವರು ನಿರೀಕ್ಷಿಸಿ, ಚಿತ್ರದ ಬಿಡುಗಡೆಯ ದಿನಾಂಕವನ್ನು ಘೋಷಿಸಿದರಂತೆ. ಆದರೆ, ಇದುವರೆಗೂ ಚಿತ್ರದ ಯಾವುದೇ ಹಕ್ಕುಗಳು ಮಾರಾಟವಾಗದ ಕಾರಣ, ಇನ್ನೊಂದಿಷ್ಟು ದಿನ ಕಾದು ನೋಡುವ ತಂತ್ರಕ್ಕೆ ಚಿತ್ರತಂಡದವರು ಬಂದಿದ್ದಾರೆ ಎನ್ನಲಾಗಿದೆ. ‘ಮಾಫಿಯಾ’ ಸೇರಿದರೆ ಈ ವಾರ ಒಟ್ಟು ಆರು ಚಿತ್ರಗಳು ಬಿಡುಗಡೆ ಆಗಬೇಕಿತ್ತು. ಆದರೆ, ಈಗ ಐದೇ ಚಿತ್ರಗಳು ಬಿಡುಗಡೆ ಆಗುತ್ತಿದೆ.

‘ರೆಡ್‍ ಮಾರ್ಕೆಟ್‍’ ಎಂದು ಹೆಚ್ಚು ಸುದ್ದಿಯಾಗದಿರುವ ಮಾಫಿಯಾ ಕುರಿತಾದ ಚಿತ್ರ ಇದಾಗಿದ್ದು, ಆ ಮಾಫಿಯಾ ವಿರುದ್ಧ ತಡೆತಟ್ಟುವ ಒಬ್ಬ ನಿಷ್ಠಾವಂತ ಪೊಲೀಸ್ ಅಧಿಕಾರಿಯಾಗಿ ಪ್ರಜ್ವಲ್‍ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ಬೆಂಗಳೂರು, ಮೈಸೂರು ಹಾಗೂ ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆದಿದೆ.

ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಲೋಹಿತ್ ಹೆಚ್ ನಿರ್ದೇಶಿಸಿರುವ ‘ಮಾಫಿಯಾ’ ಚಿತ್ರದಲ್ಲಿ ಪ್ರಜ್ವಲ್‍ಗೆ ನಾಯಕಿಯಾಗಿ ಅದಿತಿ ಪ್ರಭುದೇವ ನಟಿಸಿದ್ದು, ಮಿಕ್ಕಂತೆ ದೇವರಾಜ್‍, ಸಾಧು ಕೋಕಿಲ, ಶೈನ್‍ ಶೆಟ್ಟಿ, ವಾಸುಕಿ ವೈಭವ್‍, ವಿಜಯ್‍ ಚೆಂಡೂರ್‍ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಎಸ್. ಪಾಂಡಿಕುಮಾರ್ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಭೂಮಿಕಾ

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

8 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

8 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

8 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

8 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

9 hours ago