ಮನರಂಜನೆ

‘ಕಪಟಿ’ಯೊಂದಿಗೆ ಬಂದ ದಯಾಳ್‍; ಆ. 23ಕ್ಕೆ ಚಿತ್ರ ಬಿಡುಗಡೆ

ದಯಾಳ್‍ ಪದ್ಮನಾಭನ್‍ ಇದುವರೆಗೂ ತಮ್ಮ ಸಂಸ್ಥೆ ಡಿ ಪಿಕ್ಚರ್ಸ್‍ನಿಂದ ನಿರ್ಮಿಸಿದ ಚಿತ್ರಗಳನ್ನು ತಾವೇ ನಿರ್ದೇಶನ ಮಾಡಿದ್ದಾರೆ. ಆದರೆ, ಇದೇ ಮೊದಲ ಬಾರಿಗೆ ಅವರ ನಿರ್ಮಾಣದ ಚಿತ್ರವೊಂದನ್ನು ಬೇರೆಯವರು ನಿರ್ದೇಶನ ಮಾಡಿದ್ದಾರೆ. ಅದೇ ‘ಕಪಟಿ’.

ಡಿ ಪಿಕ್ಚರ್ಸ್ ಸಂಸ್ಥೆಯ 12ನೇ ಚಿತ್ರ ‘ಕಪಟಿ’ ಆಗಿದ್ದು, ಈ ಚಿತ್ರವನ್ನು ರವಿ ಮತ್ತು ಚೇತನ್‍ ಜೊತೆಯಾಗಿ ನಿರ್ದೇಶನ ಮಾಡಿದ್ದಾರೆ. ಸುಕೃತಾ ವಾಗ್ಲೆ, ದೇವ್‍ ದೇವಯ್ಯ, ಸಾತ್ವಿಕ್‍ ಕೃಷ್ಣನ್ ಮುಂತಾದವರು ನಟಿಸಿದ್ದಾರೆ. ಚಿತ್ರವು ಆಗಸ್ಟ್ 23ರಂದು ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಇತ್ತೀಚೆಗೆ ಚಿತ್ರದ ಟೀಸರ್‍ ಬಿಡುಗಡೆಯಾಗಿದೆ.

‘ಕಪಟಿ’ ಚಿತ್ರದ ಕುರಿತು ಮಾತನಾಡುವ ದಯಾಳ್, ‘ರವಿ ಮತ್ತು ಚೇತನ್‍ ನನ್ನ ಹತ್ತಿರ ಬಂದಿದ್ದು ಮಾರ್ಗದರ್ಶನಕ್ಕಾಗಿ. ಅವರು ಅಷ್ಟರಲ್ಲಾಗಲೇ ಆರು ದಿನಗಳ ಕಾಲ ಚಿತ್ರೀಕರಣ ಮಾಡಿಕೊಂಡಿದ್ದರು. ಅವರು ತೋರಿಸಿದ ದೃಶ್ಯಗಳು ನನಗೆ ಇಷ್ಟವಾಯಿತು. ‘ಗುಳ್ಟೂ’ ನಂತರ ನಮ್ಮಲ್ಲಿ ಡಾರ್ಕ್‍ ನೆಟ್ ಕುರಿತು ಚಿತ್ರ ಬಂದಿರಲಿಲ್ಲ. ಹಾಗಾಗಿ, ಈ ಚಿತ್ರವನ್ನು ನಾನೇ ಏಕೆ ನಿರ್ಮಿಸಬಾರದು ಅಂತಂದುಕೊಂಡು, ಅವರನ್ನು ಕೇಳಿದೆ. ಅವರು ಒಪ್ಪಿದರು. ಚಿತ್ರ ಚೆನ್ನಾಗಿ ಮಾಡಿದ್ದಾರೆ. ಇತ್ತೀಚೆಗೆ ನಮ್ಮ ಚಿತ್ರತಂಡದವರೆಲ್ಲಾ ಚಿತ್ರ ನೋಡಿದ್ದೇವೆ. ಖುಷಿಯಾಗಿದೆ’ ಎಂದರು.

ರವಿ-ಚೇತನ್‍ ಈ ಹಿಂದೆ ‘ಕೋಮ’ ಎಂಬ ಚಿತ್ರ ಮಾಡಿದ್ದರು. ‘ಸುಮಾರು ಏಳು ವರ್ಷಗಳ (ಕೋಮ ಚಿತ್ರದ) ನಂತರ ನಾವಿಬ್ಬರು ಮತ್ತೆ ನಿರ್ದೇಶಿಸಿರುವ ಚಿತ್ರವಿದು. ಕನ್ನಡದಲ್ಲಿ ತೀರ ವಿರಳ ಎನ್ನಬಹುದಾದ ಕಥೆ ಈ ಚಿತ್ರದಲ್ಲಿದೆ. ಈ ಕಥೆಯನ್ನು ದಯಾಳ್ ಅವರ ಬಳಿ ಹೇಳಿದ ತಕ್ಷಣ ಒಪ್ಪಿ ನಿರ್ಮಾಣಕ್ಕೆ ಮುಂದಾದರು. ಒಂದು ಗಹನವಾದ ವಿಷಯವನ್ನು ಜನರಿಗೆ ಮನರಂಜನಾತ್ಮಕವಾಗಿ ಹೇಳುವ ಪ್ರಯತ್ನ ಮಾಡಿದ್ದೇವೆ. ಇದೊಂದು ಥ್ರಿಲ್ಲರ್‍ ಚಿತ್ರ. ಇದು ಎಲ್ಲರಿಗೂ ಅನ್ವಯವಾಗುವ ವಿಷಯ. ಏಕೆಂದರೆ, ಇವತ್ತು ಎಲ್ಲರ ಮಾಹಿತಿಯನ್ನು ಬಹಳ ಸುಲಭವಾಗಿ ಹ್ಯಾಕ್‍ ಮಾಡಲಾಗುತ್ತಿದೆ. ಈ ಕುರಿತು ಜಾಗೃತಿ ಮೂಡಿಸಬೇಕು. ಈ ನಿಟ್ಟಿನಲ್ಲಿ ಈ ಚಿತ್ರ ಮಾಡಿದ್ದೇವೆ’ ಎಂದರು.

ಸುಕೃತಾ ವಾಗ್ಲೆ ಚಿತ್ರರಂಗದಿಂದ ದೂರವಾಗಿ ಉಡುಪಿಯಲ್ಲಿ ಎಲ್‍.ಎಲ್‍.ಬಿ ಮಾಡುತ್ತಿದ್ದರಂತೆ. ‘ಈ ಸಂದರ್ಭದಲ್ಲಿ ನಿರ್ದೇಶಕರು ಫೋನ್‍ ಮಾಡಿದರು. ಈ ಚಿತ್ರದ ಕಥೆ ಕೇಳಿ ಮೆಚ್ಚಿಕೊಂಡು ಬಹು ದಿನಗಳ ನಂತರ ಮತ್ತೆ ನಟಿಸಿದ್ದೇನೆ. ಈ ಚಿತ್ರದಲ್ಲಿ ನನ್ನ ಪಾತ್ರ ವಿಭಿನ್ನವಾಗಿದೆ. ಇದೊಂದು ಕ್ರೈಮ್‍ ಚಿತ್ರ. ಕೆಲವೇ ಪಾತ್ರಗಳ ಸುತ್ತ ಸುತ್ತುತ್ತದೆ’ ಎಂದರು.

‘ಕಪಟಿ’ ಚಿತ್ರಕ್ಕೆ ಜೋಹನ್‍ ಶೆವನೇಶ್‍ ಸಂಗೀತ ಸಂಯೋಜಿಸಿದರೆ, ಸತೀಶ್‍ ರಾಜೇಂದ್ರನ್‍ ಛಾಯಾಗ್ರಹಣ ಮಾಡಿದ್ದಾರೆ.

ಭೂಮಿಕಾ

Recent Posts

ಓದುಗರ ಪತ್ರ: ಜನಪ್ರತಿನಿಧಿಗಳಿಂದಲೇ ಕಾನೂನು ಉಲ್ಲಂಘನೆ

ರಾಜಕಾರಣಿಗಳು ಪ್ರತಿನಿತ್ಯ ತಮ್ಮ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವ, ವೈಯಕ್ತಿಕ ಪ್ರಚಾರ ಸಂಬಂಧ ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್, ಪೋಸ್ಟರ್, ಬ್ಯಾನರ್‌ಗಳನ್ನು ಅಳವಡಿಸಿ…

1 hour ago

ಓದುಗರ ಪತ್ರ: ಗಗನಕ್ಕೇರುತ್ತಿರುವ ಚಿನ್ನ, ಬೆಳ್ಳಿ ಬೆಲೆ

ಕಳೆದ ೨೫ ವರ್ಷಗಳಲ್ಲಿ ಷೇರುಪೇಟೆ ಸೇರಿದಂತೆ ಉಳಿದೆಲ್ಲ ಸ್ಥಿರಾಸ್ತಿಗಳ ಮೇಲಿನ ಹೂಡಿಕೆಗಿಂತ ಚಿನ್ನ ಮತ್ತು ಬೆಳ್ಳಿಯ ಮೇಲಿನ ಹೂಡಿಕೆ ಅತಿ…

1 hour ago

ಓದುಗರ ಪತ್ರ: ಕೆ.ಆರ್.ಆಸ್ಪತ್ರೆ ಆವರಣದಲ್ಲಿ ಕೋತಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಕೆ.ಆರ್. ಆಸ್ಪತ್ರೆಯ ಕಲ್ಲು ಬಿಲ್ಡಿಂಗ್ ಬಳಿ ಕೋತಿಗಳ ಹಾವಳಿ ಮಿತಿ ಮೀರಿದ್ದು, ರೋಗಿಗಳ ಸಂಬಂಧಿಕರು ತರುವ ಊಟ, ತಿಂಡಿ…

1 hour ago

ಓದುಗರ ಪತ್ರ: ಶ್ರೀಕಂಠೇಶ್ವರ ದೇಗುಲದಲ್ಲಿ ಹಿರಿಯ ನಾಗರಿಕರಿಗೆ ಪ್ರತ್ಯೇಕ ಸಾಲು ಇರಲಿ

ದಕ್ಷಿಣಕಾಶಿ ಎಂದೇ ಪ್ರಖ್ಯಾತವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ದೇಶ ವಿದೇಶಗಳಿಂದ ಭಕ್ತಾದಿಗಳು ಆಗಮಿಸುತ್ತಾರೆ. ಸರ್ಕಾರಿ ರಜಾ ದಿನಗಳಲ್ಲಿ ಭಕ್ತರ ಸಂಖ್ಯೆ…

1 hour ago

ರಾಜಾಸೀಟ್‌ನಲ್ಲಿ ಸ್ಥಾಪನೆಯಾಗಲಿದೆ ಫುಡ್‌ ಕೋರ್ಟ್‌

ನವೀನ್ ಡಿಸೋಜ ಖಾಸಗಿ ಸಹಭಾಗಿತ್ವದಲ್ಲಿ ಆರಂಭಕ್ಕೆ ಸಚಿವ ಸಂಪುಟದಲ್ಲಿ ಒಪ್ಪಿಗೆ; ಟ್ರಾಫಿಕ್ ಕಿರಿಕಿರಿಗೂ ಕಡಿವಾಣ ಮಡಿಕೇರಿ: ನಗರದ ರಾಜಾಸೀಟ್ ಆವರಣದಲ್ಲಿ…

1 hour ago

ಜಲಾಶಯಗಳ ಹಿನ್ನೀರಿನಲ್ಲಿ ರಿವರ್ ಟರ್ನ್ ಪಕ್ಷಿಗಳ ಕಲರವ

ಮಂಜು ಕೋಟೆ ಕೋಟೆ: ಹಿಮಾಲಯ, ಇನ್ನಿತರ ಪ್ರದೇಶಗಳಿಂದ ವಲಸೆ ಬಂದಿರುವ ಹಕ್ಕಿಗಳು; ಪರಿಸರ ಪ್ರಿಯರಲ್ಲಿ ಸಂತ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿರುವ ಜಲಾಶಯಗಳ…

1 hour ago