ಮನರಂಜನೆ

‘ಕಪಟಿ’ಯೊಂದಿಗೆ ಬಂದ ದಯಾಳ್‍; ಆ. 23ಕ್ಕೆ ಚಿತ್ರ ಬಿಡುಗಡೆ

ದಯಾಳ್‍ ಪದ್ಮನಾಭನ್‍ ಇದುವರೆಗೂ ತಮ್ಮ ಸಂಸ್ಥೆ ಡಿ ಪಿಕ್ಚರ್ಸ್‍ನಿಂದ ನಿರ್ಮಿಸಿದ ಚಿತ್ರಗಳನ್ನು ತಾವೇ ನಿರ್ದೇಶನ ಮಾಡಿದ್ದಾರೆ. ಆದರೆ, ಇದೇ ಮೊದಲ ಬಾರಿಗೆ ಅವರ ನಿರ್ಮಾಣದ ಚಿತ್ರವೊಂದನ್ನು ಬೇರೆಯವರು ನಿರ್ದೇಶನ ಮಾಡಿದ್ದಾರೆ. ಅದೇ ‘ಕಪಟಿ’.

ಡಿ ಪಿಕ್ಚರ್ಸ್ ಸಂಸ್ಥೆಯ 12ನೇ ಚಿತ್ರ ‘ಕಪಟಿ’ ಆಗಿದ್ದು, ಈ ಚಿತ್ರವನ್ನು ರವಿ ಮತ್ತು ಚೇತನ್‍ ಜೊತೆಯಾಗಿ ನಿರ್ದೇಶನ ಮಾಡಿದ್ದಾರೆ. ಸುಕೃತಾ ವಾಗ್ಲೆ, ದೇವ್‍ ದೇವಯ್ಯ, ಸಾತ್ವಿಕ್‍ ಕೃಷ್ಣನ್ ಮುಂತಾದವರು ನಟಿಸಿದ್ದಾರೆ. ಚಿತ್ರವು ಆಗಸ್ಟ್ 23ರಂದು ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಇತ್ತೀಚೆಗೆ ಚಿತ್ರದ ಟೀಸರ್‍ ಬಿಡುಗಡೆಯಾಗಿದೆ.

‘ಕಪಟಿ’ ಚಿತ್ರದ ಕುರಿತು ಮಾತನಾಡುವ ದಯಾಳ್, ‘ರವಿ ಮತ್ತು ಚೇತನ್‍ ನನ್ನ ಹತ್ತಿರ ಬಂದಿದ್ದು ಮಾರ್ಗದರ್ಶನಕ್ಕಾಗಿ. ಅವರು ಅಷ್ಟರಲ್ಲಾಗಲೇ ಆರು ದಿನಗಳ ಕಾಲ ಚಿತ್ರೀಕರಣ ಮಾಡಿಕೊಂಡಿದ್ದರು. ಅವರು ತೋರಿಸಿದ ದೃಶ್ಯಗಳು ನನಗೆ ಇಷ್ಟವಾಯಿತು. ‘ಗುಳ್ಟೂ’ ನಂತರ ನಮ್ಮಲ್ಲಿ ಡಾರ್ಕ್‍ ನೆಟ್ ಕುರಿತು ಚಿತ್ರ ಬಂದಿರಲಿಲ್ಲ. ಹಾಗಾಗಿ, ಈ ಚಿತ್ರವನ್ನು ನಾನೇ ಏಕೆ ನಿರ್ಮಿಸಬಾರದು ಅಂತಂದುಕೊಂಡು, ಅವರನ್ನು ಕೇಳಿದೆ. ಅವರು ಒಪ್ಪಿದರು. ಚಿತ್ರ ಚೆನ್ನಾಗಿ ಮಾಡಿದ್ದಾರೆ. ಇತ್ತೀಚೆಗೆ ನಮ್ಮ ಚಿತ್ರತಂಡದವರೆಲ್ಲಾ ಚಿತ್ರ ನೋಡಿದ್ದೇವೆ. ಖುಷಿಯಾಗಿದೆ’ ಎಂದರು.

ರವಿ-ಚೇತನ್‍ ಈ ಹಿಂದೆ ‘ಕೋಮ’ ಎಂಬ ಚಿತ್ರ ಮಾಡಿದ್ದರು. ‘ಸುಮಾರು ಏಳು ವರ್ಷಗಳ (ಕೋಮ ಚಿತ್ರದ) ನಂತರ ನಾವಿಬ್ಬರು ಮತ್ತೆ ನಿರ್ದೇಶಿಸಿರುವ ಚಿತ್ರವಿದು. ಕನ್ನಡದಲ್ಲಿ ತೀರ ವಿರಳ ಎನ್ನಬಹುದಾದ ಕಥೆ ಈ ಚಿತ್ರದಲ್ಲಿದೆ. ಈ ಕಥೆಯನ್ನು ದಯಾಳ್ ಅವರ ಬಳಿ ಹೇಳಿದ ತಕ್ಷಣ ಒಪ್ಪಿ ನಿರ್ಮಾಣಕ್ಕೆ ಮುಂದಾದರು. ಒಂದು ಗಹನವಾದ ವಿಷಯವನ್ನು ಜನರಿಗೆ ಮನರಂಜನಾತ್ಮಕವಾಗಿ ಹೇಳುವ ಪ್ರಯತ್ನ ಮಾಡಿದ್ದೇವೆ. ಇದೊಂದು ಥ್ರಿಲ್ಲರ್‍ ಚಿತ್ರ. ಇದು ಎಲ್ಲರಿಗೂ ಅನ್ವಯವಾಗುವ ವಿಷಯ. ಏಕೆಂದರೆ, ಇವತ್ತು ಎಲ್ಲರ ಮಾಹಿತಿಯನ್ನು ಬಹಳ ಸುಲಭವಾಗಿ ಹ್ಯಾಕ್‍ ಮಾಡಲಾಗುತ್ತಿದೆ. ಈ ಕುರಿತು ಜಾಗೃತಿ ಮೂಡಿಸಬೇಕು. ಈ ನಿಟ್ಟಿನಲ್ಲಿ ಈ ಚಿತ್ರ ಮಾಡಿದ್ದೇವೆ’ ಎಂದರು.

ಸುಕೃತಾ ವಾಗ್ಲೆ ಚಿತ್ರರಂಗದಿಂದ ದೂರವಾಗಿ ಉಡುಪಿಯಲ್ಲಿ ಎಲ್‍.ಎಲ್‍.ಬಿ ಮಾಡುತ್ತಿದ್ದರಂತೆ. ‘ಈ ಸಂದರ್ಭದಲ್ಲಿ ನಿರ್ದೇಶಕರು ಫೋನ್‍ ಮಾಡಿದರು. ಈ ಚಿತ್ರದ ಕಥೆ ಕೇಳಿ ಮೆಚ್ಚಿಕೊಂಡು ಬಹು ದಿನಗಳ ನಂತರ ಮತ್ತೆ ನಟಿಸಿದ್ದೇನೆ. ಈ ಚಿತ್ರದಲ್ಲಿ ನನ್ನ ಪಾತ್ರ ವಿಭಿನ್ನವಾಗಿದೆ. ಇದೊಂದು ಕ್ರೈಮ್‍ ಚಿತ್ರ. ಕೆಲವೇ ಪಾತ್ರಗಳ ಸುತ್ತ ಸುತ್ತುತ್ತದೆ’ ಎಂದರು.

‘ಕಪಟಿ’ ಚಿತ್ರಕ್ಕೆ ಜೋಹನ್‍ ಶೆವನೇಶ್‍ ಸಂಗೀತ ಸಂಯೋಜಿಸಿದರೆ, ಸತೀಶ್‍ ರಾಜೇಂದ್ರನ್‍ ಛಾಯಾಗ್ರಹಣ ಮಾಡಿದ್ದಾರೆ.

ಭೂಮಿಕಾ

Recent Posts

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

15 mins ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

55 mins ago

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ…

1 hour ago

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…

1 hour ago

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…

1 hour ago

ಇನ್ನೆರಡು ತಿಂಗಳಲ್ಲಿ ದರ್ಶನ್‌ ಹೊರಬರುತ್ತಾರೆ: ನಟ ರವಿಚಂದ್ರನ್‌ ವಿಶ್ವಾಸ

ಬೆಂಗಳೂರು: ನಿಮಗೆಲ್ಲಾ ಡಿಬಾಸ್‌, ಆ ಡಿಬಾಸ್‌ ನನಗೆ ಮಗ ನೆನಪಿಟ್ಟುಕೊಳ್ಳಿ. ಇನ್ನೆರಡು ತಿಂಗಳಲ್ಲಿ ದರ್ಶನ್‌ ಹೊರಬರುತ್ತಾರೆ ಎಂದು ನಟ ರವಿಚಂದ್ರನ್‌…

1 hour ago