ದಯಾಳ್ ಪದ್ಮನಾಭನ್ ಇದುವರೆಗೂ ತಮ್ಮ ಸಂಸ್ಥೆ ಡಿ ಪಿಕ್ಚರ್ಸ್ನಿಂದ ನಿರ್ಮಿಸಿದ ಚಿತ್ರಗಳನ್ನು ತಾವೇ ನಿರ್ದೇಶನ ಮಾಡಿದ್ದಾರೆ. ಆದರೆ, ಇದೇ ಮೊದಲ ಬಾರಿಗೆ ಅವರ ನಿರ್ಮಾಣದ ಚಿತ್ರವೊಂದನ್ನು ಬೇರೆಯವರು ನಿರ್ದೇಶನ ಮಾಡಿದ್ದಾರೆ. ಅದೇ ‘ಕಪಟಿ’.
ಡಿ ಪಿಕ್ಚರ್ಸ್ ಸಂಸ್ಥೆಯ 12ನೇ ಚಿತ್ರ ‘ಕಪಟಿ’ ಆಗಿದ್ದು, ಈ ಚಿತ್ರವನ್ನು ರವಿ ಮತ್ತು ಚೇತನ್ ಜೊತೆಯಾಗಿ ನಿರ್ದೇಶನ ಮಾಡಿದ್ದಾರೆ. ಸುಕೃತಾ ವಾಗ್ಲೆ, ದೇವ್ ದೇವಯ್ಯ, ಸಾತ್ವಿಕ್ ಕೃಷ್ಣನ್ ಮುಂತಾದವರು ನಟಿಸಿದ್ದಾರೆ. ಚಿತ್ರವು ಆಗಸ್ಟ್ 23ರಂದು ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಇತ್ತೀಚೆಗೆ ಚಿತ್ರದ ಟೀಸರ್ ಬಿಡುಗಡೆಯಾಗಿದೆ.
‘ಕಪಟಿ’ ಚಿತ್ರದ ಕುರಿತು ಮಾತನಾಡುವ ದಯಾಳ್, ‘ರವಿ ಮತ್ತು ಚೇತನ್ ನನ್ನ ಹತ್ತಿರ ಬಂದಿದ್ದು ಮಾರ್ಗದರ್ಶನಕ್ಕಾಗಿ. ಅವರು ಅಷ್ಟರಲ್ಲಾಗಲೇ ಆರು ದಿನಗಳ ಕಾಲ ಚಿತ್ರೀಕರಣ ಮಾಡಿಕೊಂಡಿದ್ದರು. ಅವರು ತೋರಿಸಿದ ದೃಶ್ಯಗಳು ನನಗೆ ಇಷ್ಟವಾಯಿತು. ‘ಗುಳ್ಟೂ’ ನಂತರ ನಮ್ಮಲ್ಲಿ ಡಾರ್ಕ್ ನೆಟ್ ಕುರಿತು ಚಿತ್ರ ಬಂದಿರಲಿಲ್ಲ. ಹಾಗಾಗಿ, ಈ ಚಿತ್ರವನ್ನು ನಾನೇ ಏಕೆ ನಿರ್ಮಿಸಬಾರದು ಅಂತಂದುಕೊಂಡು, ಅವರನ್ನು ಕೇಳಿದೆ. ಅವರು ಒಪ್ಪಿದರು. ಚಿತ್ರ ಚೆನ್ನಾಗಿ ಮಾಡಿದ್ದಾರೆ. ಇತ್ತೀಚೆಗೆ ನಮ್ಮ ಚಿತ್ರತಂಡದವರೆಲ್ಲಾ ಚಿತ್ರ ನೋಡಿದ್ದೇವೆ. ಖುಷಿಯಾಗಿದೆ’ ಎಂದರು.
ರವಿ-ಚೇತನ್ ಈ ಹಿಂದೆ ‘ಕೋಮ’ ಎಂಬ ಚಿತ್ರ ಮಾಡಿದ್ದರು. ‘ಸುಮಾರು ಏಳು ವರ್ಷಗಳ (ಕೋಮ ಚಿತ್ರದ) ನಂತರ ನಾವಿಬ್ಬರು ಮತ್ತೆ ನಿರ್ದೇಶಿಸಿರುವ ಚಿತ್ರವಿದು. ಕನ್ನಡದಲ್ಲಿ ತೀರ ವಿರಳ ಎನ್ನಬಹುದಾದ ಕಥೆ ಈ ಚಿತ್ರದಲ್ಲಿದೆ. ಈ ಕಥೆಯನ್ನು ದಯಾಳ್ ಅವರ ಬಳಿ ಹೇಳಿದ ತಕ್ಷಣ ಒಪ್ಪಿ ನಿರ್ಮಾಣಕ್ಕೆ ಮುಂದಾದರು. ಒಂದು ಗಹನವಾದ ವಿಷಯವನ್ನು ಜನರಿಗೆ ಮನರಂಜನಾತ್ಮಕವಾಗಿ ಹೇಳುವ ಪ್ರಯತ್ನ ಮಾಡಿದ್ದೇವೆ. ಇದೊಂದು ಥ್ರಿಲ್ಲರ್ ಚಿತ್ರ. ಇದು ಎಲ್ಲರಿಗೂ ಅನ್ವಯವಾಗುವ ವಿಷಯ. ಏಕೆಂದರೆ, ಇವತ್ತು ಎಲ್ಲರ ಮಾಹಿತಿಯನ್ನು ಬಹಳ ಸುಲಭವಾಗಿ ಹ್ಯಾಕ್ ಮಾಡಲಾಗುತ್ತಿದೆ. ಈ ಕುರಿತು ಜಾಗೃತಿ ಮೂಡಿಸಬೇಕು. ಈ ನಿಟ್ಟಿನಲ್ಲಿ ಈ ಚಿತ್ರ ಮಾಡಿದ್ದೇವೆ’ ಎಂದರು.
ಸುಕೃತಾ ವಾಗ್ಲೆ ಚಿತ್ರರಂಗದಿಂದ ದೂರವಾಗಿ ಉಡುಪಿಯಲ್ಲಿ ಎಲ್.ಎಲ್.ಬಿ ಮಾಡುತ್ತಿದ್ದರಂತೆ. ‘ಈ ಸಂದರ್ಭದಲ್ಲಿ ನಿರ್ದೇಶಕರು ಫೋನ್ ಮಾಡಿದರು. ಈ ಚಿತ್ರದ ಕಥೆ ಕೇಳಿ ಮೆಚ್ಚಿಕೊಂಡು ಬಹು ದಿನಗಳ ನಂತರ ಮತ್ತೆ ನಟಿಸಿದ್ದೇನೆ. ಈ ಚಿತ್ರದಲ್ಲಿ ನನ್ನ ಪಾತ್ರ ವಿಭಿನ್ನವಾಗಿದೆ. ಇದೊಂದು ಕ್ರೈಮ್ ಚಿತ್ರ. ಕೆಲವೇ ಪಾತ್ರಗಳ ಸುತ್ತ ಸುತ್ತುತ್ತದೆ’ ಎಂದರು.
‘ಕಪಟಿ’ ಚಿತ್ರಕ್ಕೆ ಜೋಹನ್ ಶೆವನೇಶ್ ಸಂಗೀತ ಸಂಯೋಜಿಸಿದರೆ, ಸತೀಶ್ ರಾಜೇಂದ್ರನ್ ಛಾಯಾಗ್ರಹಣ ಮಾಡಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…
ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…
ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…
ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…