ಮನರಂಜನೆ

‘ಕಪಟಿ’ಯೊಂದಿಗೆ ಬಂದ ದಯಾಳ್‍; ಆ. 23ಕ್ಕೆ ಚಿತ್ರ ಬಿಡುಗಡೆ

ದಯಾಳ್‍ ಪದ್ಮನಾಭನ್‍ ಇದುವರೆಗೂ ತಮ್ಮ ಸಂಸ್ಥೆ ಡಿ ಪಿಕ್ಚರ್ಸ್‍ನಿಂದ ನಿರ್ಮಿಸಿದ ಚಿತ್ರಗಳನ್ನು ತಾವೇ ನಿರ್ದೇಶನ ಮಾಡಿದ್ದಾರೆ. ಆದರೆ, ಇದೇ ಮೊದಲ ಬಾರಿಗೆ ಅವರ ನಿರ್ಮಾಣದ ಚಿತ್ರವೊಂದನ್ನು ಬೇರೆಯವರು ನಿರ್ದೇಶನ ಮಾಡಿದ್ದಾರೆ. ಅದೇ ‘ಕಪಟಿ’.

ಡಿ ಪಿಕ್ಚರ್ಸ್ ಸಂಸ್ಥೆಯ 12ನೇ ಚಿತ್ರ ‘ಕಪಟಿ’ ಆಗಿದ್ದು, ಈ ಚಿತ್ರವನ್ನು ರವಿ ಮತ್ತು ಚೇತನ್‍ ಜೊತೆಯಾಗಿ ನಿರ್ದೇಶನ ಮಾಡಿದ್ದಾರೆ. ಸುಕೃತಾ ವಾಗ್ಲೆ, ದೇವ್‍ ದೇವಯ್ಯ, ಸಾತ್ವಿಕ್‍ ಕೃಷ್ಣನ್ ಮುಂತಾದವರು ನಟಿಸಿದ್ದಾರೆ. ಚಿತ್ರವು ಆಗಸ್ಟ್ 23ರಂದು ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಇತ್ತೀಚೆಗೆ ಚಿತ್ರದ ಟೀಸರ್‍ ಬಿಡುಗಡೆಯಾಗಿದೆ.

‘ಕಪಟಿ’ ಚಿತ್ರದ ಕುರಿತು ಮಾತನಾಡುವ ದಯಾಳ್, ‘ರವಿ ಮತ್ತು ಚೇತನ್‍ ನನ್ನ ಹತ್ತಿರ ಬಂದಿದ್ದು ಮಾರ್ಗದರ್ಶನಕ್ಕಾಗಿ. ಅವರು ಅಷ್ಟರಲ್ಲಾಗಲೇ ಆರು ದಿನಗಳ ಕಾಲ ಚಿತ್ರೀಕರಣ ಮಾಡಿಕೊಂಡಿದ್ದರು. ಅವರು ತೋರಿಸಿದ ದೃಶ್ಯಗಳು ನನಗೆ ಇಷ್ಟವಾಯಿತು. ‘ಗುಳ್ಟೂ’ ನಂತರ ನಮ್ಮಲ್ಲಿ ಡಾರ್ಕ್‍ ನೆಟ್ ಕುರಿತು ಚಿತ್ರ ಬಂದಿರಲಿಲ್ಲ. ಹಾಗಾಗಿ, ಈ ಚಿತ್ರವನ್ನು ನಾನೇ ಏಕೆ ನಿರ್ಮಿಸಬಾರದು ಅಂತಂದುಕೊಂಡು, ಅವರನ್ನು ಕೇಳಿದೆ. ಅವರು ಒಪ್ಪಿದರು. ಚಿತ್ರ ಚೆನ್ನಾಗಿ ಮಾಡಿದ್ದಾರೆ. ಇತ್ತೀಚೆಗೆ ನಮ್ಮ ಚಿತ್ರತಂಡದವರೆಲ್ಲಾ ಚಿತ್ರ ನೋಡಿದ್ದೇವೆ. ಖುಷಿಯಾಗಿದೆ’ ಎಂದರು.

ರವಿ-ಚೇತನ್‍ ಈ ಹಿಂದೆ ‘ಕೋಮ’ ಎಂಬ ಚಿತ್ರ ಮಾಡಿದ್ದರು. ‘ಸುಮಾರು ಏಳು ವರ್ಷಗಳ (ಕೋಮ ಚಿತ್ರದ) ನಂತರ ನಾವಿಬ್ಬರು ಮತ್ತೆ ನಿರ್ದೇಶಿಸಿರುವ ಚಿತ್ರವಿದು. ಕನ್ನಡದಲ್ಲಿ ತೀರ ವಿರಳ ಎನ್ನಬಹುದಾದ ಕಥೆ ಈ ಚಿತ್ರದಲ್ಲಿದೆ. ಈ ಕಥೆಯನ್ನು ದಯಾಳ್ ಅವರ ಬಳಿ ಹೇಳಿದ ತಕ್ಷಣ ಒಪ್ಪಿ ನಿರ್ಮಾಣಕ್ಕೆ ಮುಂದಾದರು. ಒಂದು ಗಹನವಾದ ವಿಷಯವನ್ನು ಜನರಿಗೆ ಮನರಂಜನಾತ್ಮಕವಾಗಿ ಹೇಳುವ ಪ್ರಯತ್ನ ಮಾಡಿದ್ದೇವೆ. ಇದೊಂದು ಥ್ರಿಲ್ಲರ್‍ ಚಿತ್ರ. ಇದು ಎಲ್ಲರಿಗೂ ಅನ್ವಯವಾಗುವ ವಿಷಯ. ಏಕೆಂದರೆ, ಇವತ್ತು ಎಲ್ಲರ ಮಾಹಿತಿಯನ್ನು ಬಹಳ ಸುಲಭವಾಗಿ ಹ್ಯಾಕ್‍ ಮಾಡಲಾಗುತ್ತಿದೆ. ಈ ಕುರಿತು ಜಾಗೃತಿ ಮೂಡಿಸಬೇಕು. ಈ ನಿಟ್ಟಿನಲ್ಲಿ ಈ ಚಿತ್ರ ಮಾಡಿದ್ದೇವೆ’ ಎಂದರು.

ಸುಕೃತಾ ವಾಗ್ಲೆ ಚಿತ್ರರಂಗದಿಂದ ದೂರವಾಗಿ ಉಡುಪಿಯಲ್ಲಿ ಎಲ್‍.ಎಲ್‍.ಬಿ ಮಾಡುತ್ತಿದ್ದರಂತೆ. ‘ಈ ಸಂದರ್ಭದಲ್ಲಿ ನಿರ್ದೇಶಕರು ಫೋನ್‍ ಮಾಡಿದರು. ಈ ಚಿತ್ರದ ಕಥೆ ಕೇಳಿ ಮೆಚ್ಚಿಕೊಂಡು ಬಹು ದಿನಗಳ ನಂತರ ಮತ್ತೆ ನಟಿಸಿದ್ದೇನೆ. ಈ ಚಿತ್ರದಲ್ಲಿ ನನ್ನ ಪಾತ್ರ ವಿಭಿನ್ನವಾಗಿದೆ. ಇದೊಂದು ಕ್ರೈಮ್‍ ಚಿತ್ರ. ಕೆಲವೇ ಪಾತ್ರಗಳ ಸುತ್ತ ಸುತ್ತುತ್ತದೆ’ ಎಂದರು.

‘ಕಪಟಿ’ ಚಿತ್ರಕ್ಕೆ ಜೋಹನ್‍ ಶೆವನೇಶ್‍ ಸಂಗೀತ ಸಂಯೋಜಿಸಿದರೆ, ಸತೀಶ್‍ ರಾಜೇಂದ್ರನ್‍ ಛಾಯಾಗ್ರಹಣ ಮಾಡಿದ್ದಾರೆ.

ಭೂಮಿಕಾ

Recent Posts

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

35 mins ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

3 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

3 hours ago

ಪೊಲಿಟಿಕಲ್‌ ಪ್ರೊಫೆಸರ್‌ ಇಲ್ಲದ 2 ವರ್ಷ

ಸ್ವಾಭಿಮಾನಕ್ಕೆ ಧಕ್ಕೆಯಾದರೆ ಬಂಡೇಳುವುದು ವಿ.ಶ್ರೀನಿವಾಸ ಪ್ರಸಾದ್‌ ಅವರ ಜಾಯಮಾನ ಸಿ.ಹರಕುಮಾರ್ ಸ್ವಾಭಿಮಾನದ ರಾಜಕಾರಣಕ್ಕೆ ಪರ್ಯಾಯವೆಂಬಂತಿದ್ದ ವಿ.ಶ್ರೀನಿವಾಸ ಪ್ರಸಾದ್ ರವರು ನಮ್ಮನ್ನಗಲಿ…

7 hours ago

ಆಂದೋಲನ ವಿಶೇಷ | ವಿಪಕ್ಷ ಮುಕ್ತ ಭಾರತ ; ಬಿಜೆಪಿ ಕನಸು?

ಐಟಿ, ಇಡಿ ಬಳಸಿಕೊಂಡು ಬೆದರಿಸುವ ತಂತ್ರ. ಬಿಜೆಪಿ ಸೇರ್ಪಡೆಯಾದ ನಂತರ ಎಲ್ಲ ಆರೋಪಿಗಳಿಂದ ಮುಕ್ತಿ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ…

7 hours ago

ಪ.ಬಂಗಾಳ ವಿಧಾನಸಭೆ ಚುನಾವಣೆ : 142 ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ಆರಂಭ

ಕೋಲ್ಕತ್ತ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಬುಧವಾರ(ಏ.29) ಬೆಳಿಗ್ಗೆ 7 ಗಂಟೆಗೆ…

8 hours ago