ಮನರಂಜನೆ

ವೆಬ್ ಸೀರಿಸ್‍ನಲ್ಲಿ ದೀಕ್ಷಿತ್ ಶೆಟ್ಟಿ; ಜಿಯೋ ಹಾಟ್‍ಸ್ಟಾರ್‍ನಲ್ಲಿ ‘ಟಚ್ ಮಿ ನಾಟ್‍’

‘ದಿಯಾ’ ಚಿತ್ರದ ನಂತರ ದೀಕ್ಷಿತ್‍ ಶೆಟ್ಟಿ ಬೇರೆ ಭಾಷೆಗಳತ್ತ ಪ್ರಯಾಣ ಬೆಳೆಸಿರುವುದು ಗೊತ್ತೇ ಇದೆ. ಈಗಾಗಲೇ ಅವರು ಕೆಲವು ತೆಲುಗು ಚಿತ್ರಗಳು ಮತ್ತು ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ. ಈಗ ಮೊದಲ ಬಾರಿಗೆ ಅವರು ವೆಬ್‍ ಸರಣಿಯಲ್ಲಿ ಅಭಿನಯಿಸಿದ್ದು, ಈ ವೆಬ್‍ ಸರಣಿಯು ಇತ್ತೀಚೆಗೆ ಬಿಡುಗಡೆಯಾಗಿದೆ.

ಅಂದ ಹಾಗೆ, ದೀಕ್ಷಿತ್‍ ನಟಿಸಿರುವ ವೆಬ್‍ ಸರಣಿಯ ಹೆಸರು ‘ಟಚ್‍ ಮಿ ನಾಟ್‍’ ಇದೀಗ ಜಿಯೋ ಹಾಟ್‍ಸ್ಟಾರ್‍ ಓಟಿಟಿಯಲ್ಲಿ ಸ್ಟ್ರೀಮ್‍ ಆಗುತ್ತಿದೆ. ಇದು ತೆಲುಗು ವೆಬ್‍ ಸರಣಿಯಾಗಿದ್ದು, ಬೇರೆ ಭಾಷೆಗಳಲ್ಲೂ ಲಭ್ಯವಿದೆ.

ಇದೊಂದು ಕ್ರೈಮ್‍ ಥ್ರಿಲ್ಲರ್‍ ವೆಬ್‍ ಸರಣಿಯಾಗಿದ್ದು, ರಿಷಿ ಎಂಬ ಅಲೌಕಿಕ ಸಾಮರ್ಥ್ಯ ಹೊಂದಿರುವ ಯುವಕನ ಸುತ್ತ ಸುತ್ತತ್ತದೆ. ಸಂಕೀರ್ಣ ಪ್ರಕರಣಗಳನ್ನು ನಿಭಾಯಿಸುವ ತಂಡದ ಭಾಗವಾಗಿರುವ ಆತ, ತನಗೆ ಅರಿವಿಲ್ಲದಂತೆಯೇ ನಿಗೂಢ ಕೊಲೆಗಾರನ ಗುರಿಯಾಗುತ್ತಾನೆ. ಅದರಿಂದ ಆತ ಹೇಗೆ ಹೊರಬರುತ್ತಾನೆ ಎನ್ನುವುದು ಈ ವೆಬ್‍ ಸರಣಿಯ ಕಥೆ.

2020ರಲ್ಲಿ ಬಿಡಗಡೆಯಾದ ‘ದಿಯಾ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಬಂದ ದೀಕ್ಷಿತ್‍ ಶೆಟ್ಟಿ, ಮರುವರ್ಷವೇ ತೆಲುಗಿನಲ್ಲಿ ‘ಮುಗ್ಗುರು ಮೊನಗಾಳ್ಳು’ ಮತ್ತು ‘ದಿ ರೋಸ್‍ ವಿಲ್ಲಾ’ ಚಿತ್ರಗಳಲ್ಲಿ ನಟಿಸಿದರು. ನಾನಿ ಅಭಿನಯದ ‘ದಸರಾ’ ಅವರಿಗೆ ಹೆಸರು ತಂದುಕೊಟ್ಟ ಚಿತ್ರ. ಈ ಮಧ್ಯೆ, ಕಳೆದ ವರ್ಷ ಕನ್ನಡದಲ್ಲಿ ಬಿಡುಗಡೆಯಾದ ‘ಬ್ಲಿಂಕ್‍’ ಚಿತ್ರವು ಯಶಸ್ವಿಯಾಯಿತು. ಕನ್ನಡದಲ್ಲಿ ‘ಬ್ಯಾಂಕ್‍ ಆಫ್‍ ಭಾಗ್ಯಲಕ್ಷ್ಮೀ’, ‘ಶೀಘ್ರ ಮೇವ ಕಲ್ಯಾಣ ಪ್ರಾಪ್ತಿರಸ್ತು’, ಶ್ರೀನಿಧಿ ಬೆಂಗಳೂರು ನಿರ್ದೇಶನದ ಹೊಸ ಚಿತ್ರದಲ್ಲಿ ನಟಿಸಿರುವ ದೀಕ್ಷಿತ್‍, ತೆಲುಗಿನಲ್ಲಿ ‘ದಿ ಗರ್ಲ್‍ಫ್ರೆಂಡ್‍’ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಜೊತೆಗೂ ನಟಿಸುತ್ತಿದ್ದಾರೆ. ಈ ಮಧ್ಯೆ, ‘ಟಚ್‍ ಮಿ ನಾಟ್‍’ ವೆಬ್‍ ಸರಣಿ ಬಿಡುಗಡೆಯಾಗಿದೆ.

‘ಟಚ್‍ ಮಿ ನಾಟ್‍’ ವೆಬ್‍ ಸರಣಿಯು ಕೊರಿಯನ್‍ ವೆಬ್‍ ಸರಣಿಯೊಂದರ ರೀಮೇಕ್‍ ಆಗಿದ್ದು, ಇದರಲ್ಲಿ ದೀಕ್ಷಿತ್‍ ಜೊತೆಗೆ ಸಂಚಿತಾ ಪೂಣಾಚ್ಚ, ಕೋಮಾಲಿ ಪ್ರಸಾದ್‍, ಪ್ರಮೋದಿನಿ, ಬಬ್ಲೂ ಪೃಥ್ವಿರಾಜ್, ದೇವಿ ಪ್ರಸಾದ್‍ ಮುಂತಾದವರು ನಟಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪಿರಿಯಾಪಟ್ಟಣ: ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ

ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆಯಾಗುತ್ತಿದ್ದು, ಪಿರಿಯಾಪಟ್ಟಣದಲ್ಲಿ ಸಿಡಿಲು ಬಡಿದು ತೆಂಗಿನ ಮರ ಧಗಧಗನೇ ಹೊತ್ತಿ ಉರಿದಿದೆ.…

37 mins ago

ಸರಗೂರು: ಚಿಕ್ಕದೇವಮ್ಮನ ಬೆಟ್ಟದಲ್ಲಿ ಯುಗಾದಿ ಜಾತ್ರೆಗೆ ಸಿದ್ಧತೆ

ಸರಗೂರು: ಕ್ಷೇತ್ರದ ಆದಿ ದೇವತೆ ಇಟ್ನಾ ಗ್ರಾಮದ ಶ್ರೀ ಚಿಕ್ಕದೇವಮ್ಮ ಬೆಟ್ಟದ ಯುಗಾದಿ ಹಬ್ಬದ ಜಾತ್ರಾ ಮಹೋತ್ಸವ ಮಾರ್ಚ್.19ರ ಯುಗಾದಿಯಂದು…

45 mins ago

ವಿಧಾನಸಭೆಯಲ್ಲಿ ಅಚ್ಚರಿಯ ಪ್ರಸಂಗ: ಸ್ಪೀಕರ್‌ ಯು.ಟಿ.ಖಾದರ್‌ ಸಭಾತ್ಯಾಗ

ಬೆಂಗಳೂರು: ವಿಧಾನಸಭೆಯಲ್ಲಿ ಅಪರೂಪದ ಅಚ್ಚರಿಯ ಪ್ರಸಂಗ ನಡೆದಿದ್ದು, ಸಚಿವರು ಹಾಗೂ ಅಧಿಕಾರಿಗಳ ವಿರುದ್ಧ ಗರಂ ಆದ ಸ್ಪೀಕರ್‌ ಯು.ಟಿ.ಖಾದರ್‌ ಅವರು…

49 mins ago

ಮೈಸೂರಿನ ಫುಟ್‌ಪಾತ್‌ನಲ್ಲಿ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್‌ ನಿರ್ಮಾಣ: ಪಾಲಿಕೆ ನಡೆಗೆ ಸಾರ್ವಜನಿಕರ ಆಕ್ರೋಶ

ಮೈಸೂರು: ನಿತ್ಯ ಸಾವಿರಾರು ಜನರು ಓಡಾಡುವ ಫುಟ್‌ಪಾತ್‌ನಲ್ಲಿ ಈಗ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್‌ ನಿರ್ಮಾಣ ಮಾಡಲು ಮುಂದಾಗುತ್ತಿದ್ದು, ಪಾಲಿಕೆ ನಡೆಗೆ…

1 hour ago

ಒಳಮೀಸಲಾತಿ ವಿಚಾರದಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯ ಆರೋಪ: ಜಿಲ್ಲಾ ಬಲಗೈ ಸಮುದಾಯದ ಒಕ್ಕೂಟ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಒಳಮೀಸಲಾತಿ ವಿಚಾರದಲ್ಲಿ ನಾಗಮೋಹನ್ ದಾಸ್ ನೀಡಿರುವ ವರದಿಯು ಅವೈಜ್ಞಾನಿಕವಾಗಿದ್ದು ಹಂಚಿಕೆ…

2 hours ago

ಮಹದೇಶ್ವರ ಬೆಟ್ಟ: ಪಾದಯಾತ್ರಿಕರಿಗೆ ಭಯ ಹುಟ್ಟಿಸಿದ ಕಾಡಾನೆಗಳ ಹಿಂಡು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಕಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

2 hours ago