ಮನರಂಜನೆ

ವೆಬ್ ಸೀರಿಸ್‍ನಲ್ಲಿ ದೀಕ್ಷಿತ್ ಶೆಟ್ಟಿ; ಜಿಯೋ ಹಾಟ್‍ಸ್ಟಾರ್‍ನಲ್ಲಿ ‘ಟಚ್ ಮಿ ನಾಟ್‍’

‘ದಿಯಾ’ ಚಿತ್ರದ ನಂತರ ದೀಕ್ಷಿತ್‍ ಶೆಟ್ಟಿ ಬೇರೆ ಭಾಷೆಗಳತ್ತ ಪ್ರಯಾಣ ಬೆಳೆಸಿರುವುದು ಗೊತ್ತೇ ಇದೆ. ಈಗಾಗಲೇ ಅವರು ಕೆಲವು ತೆಲುಗು ಚಿತ್ರಗಳು ಮತ್ತು ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ. ಈಗ ಮೊದಲ ಬಾರಿಗೆ ಅವರು ವೆಬ್‍ ಸರಣಿಯಲ್ಲಿ ಅಭಿನಯಿಸಿದ್ದು, ಈ ವೆಬ್‍ ಸರಣಿಯು ಇತ್ತೀಚೆಗೆ ಬಿಡುಗಡೆಯಾಗಿದೆ.

ಅಂದ ಹಾಗೆ, ದೀಕ್ಷಿತ್‍ ನಟಿಸಿರುವ ವೆಬ್‍ ಸರಣಿಯ ಹೆಸರು ‘ಟಚ್‍ ಮಿ ನಾಟ್‍’ ಇದೀಗ ಜಿಯೋ ಹಾಟ್‍ಸ್ಟಾರ್‍ ಓಟಿಟಿಯಲ್ಲಿ ಸ್ಟ್ರೀಮ್‍ ಆಗುತ್ತಿದೆ. ಇದು ತೆಲುಗು ವೆಬ್‍ ಸರಣಿಯಾಗಿದ್ದು, ಬೇರೆ ಭಾಷೆಗಳಲ್ಲೂ ಲಭ್ಯವಿದೆ.

ಇದೊಂದು ಕ್ರೈಮ್‍ ಥ್ರಿಲ್ಲರ್‍ ವೆಬ್‍ ಸರಣಿಯಾಗಿದ್ದು, ರಿಷಿ ಎಂಬ ಅಲೌಕಿಕ ಸಾಮರ್ಥ್ಯ ಹೊಂದಿರುವ ಯುವಕನ ಸುತ್ತ ಸುತ್ತತ್ತದೆ. ಸಂಕೀರ್ಣ ಪ್ರಕರಣಗಳನ್ನು ನಿಭಾಯಿಸುವ ತಂಡದ ಭಾಗವಾಗಿರುವ ಆತ, ತನಗೆ ಅರಿವಿಲ್ಲದಂತೆಯೇ ನಿಗೂಢ ಕೊಲೆಗಾರನ ಗುರಿಯಾಗುತ್ತಾನೆ. ಅದರಿಂದ ಆತ ಹೇಗೆ ಹೊರಬರುತ್ತಾನೆ ಎನ್ನುವುದು ಈ ವೆಬ್‍ ಸರಣಿಯ ಕಥೆ.

2020ರಲ್ಲಿ ಬಿಡಗಡೆಯಾದ ‘ದಿಯಾ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಬಂದ ದೀಕ್ಷಿತ್‍ ಶೆಟ್ಟಿ, ಮರುವರ್ಷವೇ ತೆಲುಗಿನಲ್ಲಿ ‘ಮುಗ್ಗುರು ಮೊನಗಾಳ್ಳು’ ಮತ್ತು ‘ದಿ ರೋಸ್‍ ವಿಲ್ಲಾ’ ಚಿತ್ರಗಳಲ್ಲಿ ನಟಿಸಿದರು. ನಾನಿ ಅಭಿನಯದ ‘ದಸರಾ’ ಅವರಿಗೆ ಹೆಸರು ತಂದುಕೊಟ್ಟ ಚಿತ್ರ. ಈ ಮಧ್ಯೆ, ಕಳೆದ ವರ್ಷ ಕನ್ನಡದಲ್ಲಿ ಬಿಡುಗಡೆಯಾದ ‘ಬ್ಲಿಂಕ್‍’ ಚಿತ್ರವು ಯಶಸ್ವಿಯಾಯಿತು. ಕನ್ನಡದಲ್ಲಿ ‘ಬ್ಯಾಂಕ್‍ ಆಫ್‍ ಭಾಗ್ಯಲಕ್ಷ್ಮೀ’, ‘ಶೀಘ್ರ ಮೇವ ಕಲ್ಯಾಣ ಪ್ರಾಪ್ತಿರಸ್ತು’, ಶ್ರೀನಿಧಿ ಬೆಂಗಳೂರು ನಿರ್ದೇಶನದ ಹೊಸ ಚಿತ್ರದಲ್ಲಿ ನಟಿಸಿರುವ ದೀಕ್ಷಿತ್‍, ತೆಲುಗಿನಲ್ಲಿ ‘ದಿ ಗರ್ಲ್‍ಫ್ರೆಂಡ್‍’ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಜೊತೆಗೂ ನಟಿಸುತ್ತಿದ್ದಾರೆ. ಈ ಮಧ್ಯೆ, ‘ಟಚ್‍ ಮಿ ನಾಟ್‍’ ವೆಬ್‍ ಸರಣಿ ಬಿಡುಗಡೆಯಾಗಿದೆ.

‘ಟಚ್‍ ಮಿ ನಾಟ್‍’ ವೆಬ್‍ ಸರಣಿಯು ಕೊರಿಯನ್‍ ವೆಬ್‍ ಸರಣಿಯೊಂದರ ರೀಮೇಕ್‍ ಆಗಿದ್ದು, ಇದರಲ್ಲಿ ದೀಕ್ಷಿತ್‍ ಜೊತೆಗೆ ಸಂಚಿತಾ ಪೂಣಾಚ್ಚ, ಕೋಮಾಲಿ ಪ್ರಸಾದ್‍, ಪ್ರಮೋದಿನಿ, ಬಬ್ಲೂ ಪೃಥ್ವಿರಾಜ್, ದೇವಿ ಪ್ರಸಾದ್‍ ಮುಂತಾದವರು ನಟಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

5 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

5 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

5 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

5 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

5 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

5 hours ago