ಈ ಹಿಂದೆ ‘ಧೂದ್ ಸಾಗರ್’, ‘ಡ್ರೀಮ್ ಗರ್ಲ್’ ಮುಂತಾದ ಕೆಲವು ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದ ದೀಪಿಕಾ ದಾಸ್, ಆ ನಂತರ ಕಿರುತೆರೆಯತ್ತ ಹೊರಟಿದ್ದರು. ‘ಬಿಗ್ ಬಾಸ್’ ಕಾರ್ಯಕ್ರಮದ ಎರಡು ಸೀಸನ್ಗಳಲ್ಲಿ ಭಾಗವಹಿಸಿದ ನಂತರ ಅವರು ಮತ್ತೆ ಸಿನಿಮಾಗಳತ್ತ ಮುಖ ಮಾಡಿರಲಿಲ್ಲ. ಇದೀಗ ಅವರು ಸದ್ದಿಲ್ಲದೆ ‘ಪಾರು ಪಾರ್ವತಿ’ ಎಂಬ ಚಿತ್ರದಲ್ಲಿಲ ನಟಿಸಿದ್ದಾರೆ.
1836 ಪಿಕ್ಚರ್ಸ ಲಾಂಛನದಲ್ಲಿ ಪಿ.ಬಿ. ಪ್ರೇಮನಾಥ್ ನಿರ್ಮಿಸಿರುವ, ರೋಹಿತ್ ಕೀರ್ತಿ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸಿರುವ ‘ಪಾರು ಪಾರ್ವತಿ’ ಚಿತ್ರದ ಶೀರ್ಷಿಕೆ ಅನಾವರಣ ಮತ್ತು ನಿರ್ಮಾಣ ಸಂಸ್ಥೆಯ ಉದ್ಘಾಟನೆ ಇತ್ತೀಚೆಗೆ ನಡೆಯಿತು. ಈ ಚಿತ್ರದಲ್ಲಿ ದೀಪಿಕಾ ದಾಸ್ ಜೊತೆಗೆ ಪೂನಂ ಸರ್ ನಾಯಕ್ ಹಾಗೂ ಫವಾಜ್ ಅಶ್ರಫ್ ಅವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಇದೊಂದು ಪ್ರಯಾಣದ ಕಥೆಯಂತೆ. ಈ ಹಿಂದೆ ಪಿ. .ವಾಸು, ಅರವಿಂದ್ ಶಾಸ್ತ್ರಿ, ಸುನಿ ಮುಂತಾದ ನಿರ್ದೇಶಕರ ಸಿನಿಮಾಗಳಿಗೆ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿರುವ ರೋಹಿತ್ ಕೀರ್ತಿ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ಈ ಚಿತ್ರದ ಕುರಿತು ಮಾತನಾಡಿದ ಅವರು, ‘ನನಗೆ ಇದು ಮೊದಲ ನಿರ್ದೇಶನದ ಚಿತ್ರ. ಇದೊಂದು ಅಡ್ವೆಂಚರ್ಸ್ ಮತ್ತು ಪ್ರವಾಸ ಕಥನ. ಬೆಂಗಳೂರು, ಗೋವಾ, ಮಹಾರಾಷ್ಟ್ರ, ರಾಜಸ್ಥಾನ ಹಾಗೂ ಉತ್ತರ ಕಾಂಡದಲ್ಲಿ ಚಿತ್ರೀಕರಣ ನಡೆದಿದೆ. ಮೂರು ಮುಖ್ಯ ಪಾತ್ರಗಳ ಸುತ್ತ ಸಿನಿಮಾ ಕಥೆ ಸಾಗುತ್ತದೆ. ಪಾಯಲ್ ಎಂಬ ಪಾತ್ರದಲ್ಲಿ ದೀಪಿಕಾ ದಾಸ್ ಕಾಣಿಸಿಕೊಂಡಿದ್ದಾರೆ. ನಿಜಜೀವನದಲ್ಲೂ ಅಡ್ವೆಂಚರ್ಸ್ ಹಾಗೂ ಜರ್ನಿಯಲ್ಲಿ ಆಸಕ್ತಿಯಿರುವ ದೀಪಿಕಾ ದಾಸ್ ಅವರಿಗೆ ಇದು ಹೇಳಿ ಮಾಡಿಸಿದ ಪಾತ್ರ. ಈವರೆಗೂ ನೀವು ನೋಡಿರದ ದೀಪಿಕಾ ದಾಸ್ ಅವರನ್ನು ಈ ಚಿತ್ರದಲ್ಲಿ ನೋಡಬಹುದು. ಇನ್ನೆರಡು ಪ್ರಮುಖ ಪಾತ್ರಗಳ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ. ಚಿತ್ರದ ಚಿತ್ರೀಕರಣ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದೆ’ ಎಂದರು.
ನನಗೆ ಮೊದಲಿನಿಂದಲೂ ಪ್ರವಾಸ ಹಾಗೂ ಅಡ್ವೆಂಚರ್ಸ್ ನಲ್ಲಿ ಆಸಕ್ತಿ ಎಂದ ದೀಪಿಕಾ ದಾಸ್, ‘ಈ ಚಿತ್ರದಲ್ಲಿ ನಾನು ಏಕಾಂಗಿ ಸಂಚಾರಿ. ಪಾಯಲ್ ನನ್ನ ಪಾತ್ರದ ಹೆಸರು. ಪ್ರಯಾಣದಲ್ಲೇ ಚಿತ್ರದ ಹೆಚ್ಚು ಕಥೆ ನಡೆಯುತ್ತದೆ. ಈ ಚಿತ್ರಕ್ಕಾಗಿ ನಾನು ಒಂದು ತಿಂಗಳಲ್ಲಿ ಹತ್ತು ಕೆಜಿ ತೂಕ ಇಳಿಸಿಕೊಂಡಿದ್ದೇನೆ ಹಾಗೂ ಉದ್ದವಾದ ಕೂದಲನ್ನು ಗಿಡ್ಡ ಮಾಡಿಕೊಂಡಿದ್ದೇನೆ. ನನ್ನ ಪಾತ್ರ ಕೇಳಿದ್ದನ್ನು ಮಾಡಿದ್ದೇನೆ. ಈ ಚಿತ್ರದಲ್ಲಿ ನಮ್ಮಷ್ಟೇ ಮುಖ್ಯ ಪಾತ್ರ ವಹಿಸಿರುವುದು ಚಿತ್ರದಲ್ಲಿ ನಾವು ಸಂಚಾರಿಸಿರುವ ಕಾರು’ ಎಂದರು.
ನಿರ್ಮಾಪಕ ಪ್ರೇಮನಾಥ್ ಮೂಲತಃ ಐಟಿ ಉದ್ಯೋಗಿಯಂತೆ ಸಿನಿಮಾ ನಿರ್ಮಾಣ ಮಾಡುವ ಆಸೆ ಇದ್ದುದರಿಂದ ಈ ಚಿತ್ರದ ನಿರ್ಮಾಣಕ್ಕೆ ಕೈಹಾಕಿದ್ದಾರೆ. ‘ ನಿರ್ದೇಶಕರು ಒಳ್ಳೆಯ ಕಥೆ ಮಾಡಿದ್ದಾರೆ. ನಾನು ಕೆಲಸದ ಮೇಲೆ ಅನೇಕ ಊರುಗಳಲ್ಲಿ ವಾಸವಾಗಿದ್ದೆ. ಇದು ಕೂಡ ಒಂದು ಪ್ರವಾಸದ ಕಥೆಯಾಗಿರುವುದರಿಂದ ಇಷ್ಟವಾಯಿತು. ಇನ್ನು, ನಮ್ಮ 1836 ಪಿಕ್ಚರ್ಸ್ ನಿರ್ಮಾಣ ಸಂಸ್ಥೆಯ ಉದ್ಘಾಟನೆಯಾಗಿದೆ. 1836 ಕೂಡಿದಾಗ 9 ಬರುತ್ತದೆ. ಅದು ನನ್ನ ಲಕ್ಕಿ ನಂಬರ್’ ಎಂದರು.
‘ಪಾರು ಪಾರ್ವತಿ’ ಚಿತ್ರಕ್ಕೆ ಅಬಿನ್ ರಾಜೇಶ್ ಛಾಯಾಗ್ರಹಣ, ಾರ್ ಹರಿ ಸಂಗೀತವಿದೆ.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…