devasasya kannada movie teaser (1)
ಈ ಹಿಂದೆ ಬಸ್, ಆಟೋ ಓಡಿಸುತ್ತಿದ್ದ ಹಲವರು ಕನ್ನಡ ಚಿತ್ರರಂಗದಲ್ಲಿ ಹೀರೋಗಳಾಗಿ ಮಿಂಚಿದ್ದಾರೆ. ಇದೀಗ ಟ್ರ್ಯಾಕ್ಟರ್ ಓಡಿಸಿಕೊಂಡಿದ್ದ ಯುವಕನೊಬ್ಬ ಸದ್ದಿಲ್ಲದೆ ಹೀರೋ ಆಗಿದ್ದಾರೆ. ಕನ್ನಡದಲ್ಲಿ ‘ದೇವಸಸ್ಯ’ ಎಂಬ ಚಿತ್ರ ಸದ್ದಿಲ್ಲದೆ ನಿರ್ಮಾಣವಾಗುತ್ತಿದ್ದು, ಈ ಚಿತ್ರದ ಮೂಲಕ ಸೆಲ್ವಿನ್ ದೇಸಾಯಿ ಹೀರೋ ಆಗುತ್ತಿದ್ದಾರೆ.
‘ದೇವಸಸ್ಯ’ ಒಂದು ಅಪರೂಪದ ಗಿಡದ ಸುತ್ತ ನಡೆಯುವ ಘಟನೆಗಳ ಗುಚ್ಛ. ಬಹುತೇಕ ಉತ್ತರ ಕನ್ನಡದವರೇ ಸೇರಿ ಮಾಡಿರುವ ಪ್ಯಾನ್ ಇಂಡಿಯಾ ಚಿತ್ರವಿದು. ಈ ಚಿತ್ರವನ್ನು ಅನಂತ ಫಿಲಂಸ್ ಅಡಿಯಲ್ಲಿ ಅನಂತಕುಮಾರ್ ಹೆಗಡೆ ನಿರ್ಮಿಸಿದರೆ, ಕಾರ್ತಿಕ್ ಭಟ್ ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಈ ನಟ-ನಿರ್ದೇಶಕ ನವೀನ್ ಕೃಷ್ಣ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ.
ನಿರ್ದೇಶಕ ಕಾರ್ತೀಕ್ ಭಟ್ ಮಾತನಾಡಿ, `ಕೆಲವು ಸಿನಿಮಾ ಮತ್ತು ಧಾರಾವಾಹಿಗಳಿಗೆ ಬರಹಗಾರನಾಗಿ ಕೆಲಸ ಮಾಡಿದ್ದೇನೆ. ಶಿರಸಿ ಸುತ್ತಮುತ್ತಲಿನ ಕಾಡು ಪ್ರದೇಶಗಳಲ್ಲಿ ವಾಸಿಸುವ ಸಿದ್ದಿ ಸಮುದಾಯದ ಕಥೆಯಿದು. ಇದು ಎರಡು ಊರುಗಳ ಮಧ್ಯೆ ನಡೆಯುವ ಕಥೆ. ಸಿದ್ದಿ ಹುಡುಗನ ಪಾತ್ರವನ್ನು ಸೆಲ್ವಿನ್ ದೇಸಾಯಿ ಮಾಡಿದ್ದಾರೆ. ಮತ್ತೊಂದು ಮುಖ್ಯ ಪಾತ್ರವನ್ನು ಅಹನ ಮಾಡಿದ್ದಾರೆ. 1995ರಲ್ಲಿ ನಡೆವ ಕಥೆಯಾಗಿದ್ದರಿಂದ ಅಂಥಾ ಲೊಕೇಶನ್ ಎಲ್ಲೂ ಸಿಗಲಿಲ್ಲ. ಅದೇ ಕಾರಣಕ್ಕೆ ಸೆಟ್ ಹಾಕಿಸಿ ಚಿತ್ರೀಕರಣ ಮಾಡಿದ್ದೇವೆ. ಈಗಾಗಲೇ 45 ದಿನಗಳ ಶೂಟಿಂಗ್ ನಡೆದಿದೆ’ ಎಂದರು.
ಸೆಲ್ವಿನ್ ಚಿತ್ರದಲ್ಲಿ ನಟಿಸಬೇಕು ಎಂಬ ಉದ್ದೇಶದಿಂದ ಬೆಂಗಳೂರಿಗೆ ಬಂದರಂತೆ. ‘ಆರಂಭದಲ್ಲಿ ಟ್ರ್ಯಾಕ್ಟರ್ ಓಡಿಸುತ್ತಿದ್ದೆ. ಆಗ ನಿರ್ದೇಶಕರು ಈ ಸಿನಿಮಾಗೆ ಕರೆದರು. ನಂತರ ಸಿನಿಮಾ ಬಗ್ಗೆ ಹಲವು ವಿಷಯಗಳನ್ನು ಕಲಿಯುತ್ತಾ ಹೋದೆ’ ಎಂದು ವಿವರಿಸಿದರು.
ನಾಯಕಿ ಬಿಂಬಿಕಾ ಮಾತನಾಡಿ, ‘ಚಿತ್ರದಲ್ಲಿ ನಾನು ಮಾತಂಗಿ ಎಂಬ ಸಿದ್ದಿ ಜನಾಂಗದ ಹುಡುಗಿಯಾಗಿ ನಟಿಸಿದ್ದೇನೆ. ‘ನಾರಾಯಣ ನಾರಾಯಣ’ ನಂತರ ಇದು ನನ್ನ 5ನೇ ಚಿತ್ರ’ ಎಂದರು.
ಈ ಚಿತ್ರಕ್ಕೆ ರಾಜು ಎನ್.ಎಂ ಅವರ ಛಾಯಾಗ್ರಹಣ, ಹರಿ ಅಜಯ್ ಅವರ ಸಂಗೀತವಿದೆ.
ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…
ಬೈರುತ್: ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…
ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ: ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…
ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…
ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…