ಬೆಂಗಳೂರು: ನಾಳೆ ನಟ ದರ್ಶನ್ ಅಭಿನಯದ ಡೆವಿಲ್ ಚಿತ್ರ ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಜೈಲಿನಿಂದಲೇ ಅಭಿಮಾನಿಗಳಿಗೆ ನಟ ದರ್ಶನ್ ಸಂದೇಶ ರವಾನಿಸಿದ್ದಾರೆ.
ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ದರ್ಶನ್ ಪರವಾಗಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡು ಅಭಿಮಾನಿಗಳಿಗೆ ಸಂದೇಶ ರವಾನಿಸಿದ್ದಾರೆ.
ಈ ಸಂದೇಶ ನನ್ನ ಹೃದಯದಿಂದ ನೇರವಾಗಿ ಬರುತ್ತದೆ. ಇದನ್ನು ಅವರು ನಿಮ್ಮೆಲ್ಲರಿಗೂ ತಲುಪಿಸುತ್ತಾರೆ. ನಿಮ್ಮ ಪ್ರೀತಿ, ಕಾಳಜಿ, ನಿಮ್ಮ ದಣಿವರಿಯದ ಬೆಂಬಲ. ರಾಜ್ಯಾದ್ಯಂತ ನಿಮ್ಮ ಅವಿರತ ಪ್ರಚಾರಗಳ ಬಗ್ಗೆ ಅವರು ಪ್ರತಿ ಬಾರಿಯೂ ನನಗೆ ತಿಳಿಸುತ್ತಿದ್ದಾರೆ. ದೂರದಿಂದಲೇ ನಾನು ಪ್ರತಿ ಕ್ಷಣವೂ ನನ್ನೊಂದಿಗೆ ನಿಮ್ಮ ಉಪಸ್ಥಿತಿಯನ್ನು ಅನುಭವಿಸುತ್ತೇನೆ. ನಾನು ನಿಮಗೆ ಇದನ್ನು ಹೇಳಲು ಬಯಸುತ್ತೇನೆ.
ದಯವಿಟ್ಟು ಜನರು ಏನು ಹೇಳುತ್ತಾರೋ ಅದರ ಬಗ್ಗೆ ಚಿಂತಿಸಬೇಡಿ. ಯಾವುದೇ ವದಂತಿ ಅಥವಾ ಯಾವುದೇ ನಕಾರಾತ್ಮಕೆಯು ನಿಮ್ಮ ಹೃದಯವನ್ನು ಅಲುಗಾಡಿಸಲು ಬಿಡಬೇಡಿ. ನೀವು ನನ್ನ ಶಕ್ತಿ, ನೀವು ನನ್ನ ಕುಟುಂಬ. ಇಂದು ಎಂದಿಗಿಂತಲೂ ಹೆಚ್ಚಾಗಿ, ನೀವು ನನ್ನ ಮೇಲೆ ಇಟ್ಟಿರುವ ನಂಬಿಕೆಯಿಂದಾಗಿ ನಾನು ನಿಂತಿದ್ದೇನೆ ಎಂದು ಸಂದೇಶ ರವಾನಿಸಿದ್ದಾರೆ.
ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…
ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್ ಕಣಿವೆಯಲ್ಲಿ…
ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್ ಆಸ್ಪತ್ರೆಗೆ ದಾಖಲಾಗಿದ್ದ ಶರದ್ ಪವಾರ್ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಶರದ್ ಪವಾರ್…
ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…
ಹಾಸನ: ಮೂವರು ಇಟಿಎಫ್ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…