ಚೆನ್ನೈ : ಕಾಲಿವುಡ್ ನಟ ಧನುಷ್ ಸ್ಟಾರ್ ನಟಿಯನ್ನು ಕೈ ಹಿಡಿಯಲು ಸಿದ್ದರಾಗಿದ್ದಾರೆ. ಹೌದು ಹೀಗೊಂದು ಸುದ್ದಿ ಸಿನಿಮಾ ಇಂಡಸ್ಟ್ರಿಯಲ್ಲಿ ಗುಲ್ ಹಬ್ಬಿಸಿದೆ.
ಧನುಷ್ ನಟಿ ಮೃಣಾಲ್ ಠಾಕೂರ್ ಜೊತೆ ಎರಡನೇ ವಿವಾಹವಾಗಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗ್ತಿದೆ. ಇತ್ತೀಚೆಗೆ ಧನುಷ್ ಹಾಗೂ ಮೃಣಾಲ್ ಠಾಕೂರ್ ಹಲವಾರು ವೇದಿಕೆಯಲ್ಲಿ, ಪಾರ್ಟಿಗಳಲ್ಲಿ, ಹುಟ್ಟುಹಬ್ಬದ ಪಾರ್ಟಿಗಳಲ್ಲಿ ಕಾಣಿಸಿಕೊಂಡಿದ್ದರು. ಜೊತೆಗೆ ಧನುಷ್ ಹಾಕಿರುವ ಪೋಸ್ಟ್ಗಳಿಗೆ ಮೃಣಾಲ್ ಲೈಕ್ ಕೊಡೋದು ಕಮೆಂಟ್ಸ್ ಹಾಕೋದು ಮಾಡುತ್ತಿದ್ದರು. ಇವೆಲ್ಲ ಘಟನೆಗಳು ಅವ್ರಿಬ್ಬರ ಮಧ್ಯೆ ಗಾಸಿಪ್ ಸೃಷ್ಟಿಸಿತ್ತು. ಆದ್ರೆ ಇದೆಲ್ಲದಕ್ಕೂ ಈಗ ತೆರೆ ಎಳೆಯುವ ಸಮಯ ಬಂದಂತಿದೆ. ಅಂದಹಾಗೆ ಮೃಣಾಲ್ ಹಾಗೂ ಧನುಷ್ ಸನ್ ಆಫ್ ಸರ್ಧಾರ್-2 ಸಿನಿಮಾದ ಪ್ರೀಮಿಯರ್ನಲ್ಲಿ ಒಟ್ಟೊಟ್ಟಿಗೆ ಕಾಣಿಸಿಕೊಂಡ ಬಳಿಕವಂತೂ ಪ್ರೀತಿ, ಪ್ರೇಮದ ಗುಲ್ಲು ಜೋರಾಗಿತ್ತು. ಇದೀಗ ಇಬ್ಬರೂ ಮದುವೆ ಆಗುತ್ತಿದ್ದಾರೆ ಎನ್ನಲಾಗ್ತಿದೆ. ಅದ್ರಲ್ಲೂ ಫೆಬ್ರವರಿ 14ರಂದು ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.
ಅಂದಹಾಗೆ ಧನುಷ್ ಈ ಮೊದಲು ರಜನಿಕಾಂತ್ ಅವರ ಮಗಳು ಐಶ್ವರ್ಯ ಅವರನ್ನು ಮದುವೆಯಾಗಿ 20ವರ್ಷ ಸಂಸಾರ ನಡೆಸಿ 2024ರಲ್ಲಿ ಇಬ್ಬರು ವೈವಾಹಿಕ ಜೀವನಕ್ಕೆ ಗುಡ್ ಬೈ ಹೇಳಿದ್ದರು.
ರಾಮನಗರ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಸಹೋದರಿ ಮಹಾದೇವಮ್ಮ ನಿಧನರಾಗಿದ್ದಾರೆ. ಕನಕಪುರ ತಾಲ್ಲೂಕಿನ…
ಹಾಸನ: ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಬಾಗಲಕೋಟೆ,…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಪಿಡಬ್ಲ್ಯೂಡಿ ಎಇಇ ಸತೀಶ್ ಮನೆ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರುತ್ತಿದ್ದು, ಮನುಷ್ಯರಂತೆ ಮೃಗಾಲಯದ ವನ್ಯಜೀವಿಗಳೂ ಕೂಡ ತತ್ತರಿಸಿವೆ. ಪ್ರಾಣಿ-ಪಕ್ಷಿಗಳಿಗೆ…
ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಯುದ್ಧದಿಂದಾಗಿ ಪ್ರಪಂಚದಾದ್ಯಂತ ತೈಲ ಮಾರುಕಟ್ಟೆಗಳು ಸಂಪೂರ್ಣವಾಗಿ ಅಲುಗಾಡುತ್ತಿವೆ. ಇದರ ಎಫೆಕ್ಟ್ ರಾಜ್ಯದ ಮೇಲೂ ತಟ್ಟಿದ್ದು, ಡ್ರೈಫ್ರೂಟ್ಸ್…
ನಂಜನಗೂಡು: ಸ್ವಚ್ಛತೆಯ ಮೂಲಕವೇ ಗ್ರಾಮದ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರಿಗೆ ಸರ್ಕಾರ ಅಗತ್ಯ ರಕ್ಷಣಾತ್ಮಕ ಸೌಲಭ್ಯಗಳನ್ನು ನೀಡುವುದರ ಜೊತೆ ಚರಂಡಿಗಳನ್ನು…