ಮನರಂಜನೆ

ಸ್ಟಾರ್ ನಟಿಯ ಜೊತೆ ಧನುಷ್ ಕಲ್ಯಾಣ? ; ವೈರಲ್ ಆಗ್ತಿದೆ ಮದುವೆಯ ಗುಸುಗುಸು!

ಚೆನ್ನೈ : ಕಾಲಿವುಡ್‌ ನಟ ಧನುಷ್ ಸ್ಟಾರ್ ನಟಿಯನ್ನು ಕೈ ಹಿಡಿಯಲು ಸಿದ್ದರಾಗಿದ್ದಾರೆ. ಹೌದು ಹೀಗೊಂದು ಸುದ್ದಿ ಸಿನಿಮಾ ಇಂಡಸ್ಟ್ರಿಯಲ್ಲಿ ಗುಲ್‌ ಹಬ್ಬಿಸಿದೆ.

ಧನುಷ್ ನಟಿ ಮೃಣಾಲ್ ಠಾಕೂರ್ ಜೊತೆ ಎರಡನೇ ವಿವಾಹವಾಗಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗ್ತಿದೆ. ಇತ್ತೀಚೆಗೆ ಧನುಷ್ ಹಾಗೂ ಮೃಣಾಲ್ ಠಾಕೂರ್ ಹಲವಾರು ವೇದಿಕೆಯಲ್ಲಿ, ಪಾರ್ಟಿಗಳಲ್ಲಿ, ಹುಟ್ಟುಹಬ್ಬದ ಪಾರ್ಟಿಗಳಲ್ಲಿ ಕಾಣಿಸಿಕೊಂಡಿದ್ದರು. ಜೊತೆಗೆ ಧನುಷ್ ಹಾಕಿರುವ ಪೋಸ್ಟ್‌ಗಳಿಗೆ ಮೃಣಾಲ್ ಲೈಕ್ ಕೊಡೋದು ಕಮೆಂಟ್ಸ್ ಹಾಕೋದು ಮಾಡುತ್ತಿದ್ದರು. ಇವೆಲ್ಲ ಘಟನೆಗಳು ಅವ್ರಿಬ್ಬರ ಮಧ್ಯೆ ಗಾಸಿಪ್ ಸೃಷ್ಟಿಸಿತ್ತು. ಆದ್ರೆ ಇದೆಲ್ಲದಕ್ಕೂ ಈಗ ತೆರೆ ಎಳೆಯುವ ಸಮಯ ಬಂದಂತಿದೆ. ಅಂದಹಾಗೆ ಮೃಣಾಲ್ ಹಾಗೂ ಧನುಷ್ ಸನ್ ಆಫ್ ಸರ್ಧಾರ್-2 ಸಿನಿಮಾದ ಪ್ರೀಮಿಯರ್‌ನಲ್ಲಿ ಒಟ್ಟೊಟ್ಟಿಗೆ ಕಾಣಿಸಿಕೊಂಡ ಬಳಿಕವಂತೂ ಪ್ರೀತಿ, ಪ್ರೇಮದ ಗುಲ್ಲು ಜೋರಾಗಿತ್ತು. ಇದೀಗ ಇಬ್ಬರೂ ಮದುವೆ ಆಗುತ್ತಿದ್ದಾರೆ ಎನ್ನಲಾಗ್ತಿದೆ. ಅದ್ರಲ್ಲೂ ಫೆಬ್ರವರಿ 14ರಂದು ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.

ಅಂದಹಾಗೆ ಧನುಷ್‌ ಈ ಮೊದಲು ರಜನಿಕಾಂತ್‌ ಅವರ ಮಗಳು ಐಶ್ವರ್ಯ ಅವರನ್ನು ಮದುವೆಯಾಗಿ 20ವರ್ಷ ಸಂಸಾರ ನಡೆಸಿ 2024ರಲ್ಲಿ ಇಬ್ಬರು ವೈವಾಹಿಕ ಜೀವನಕ್ಕೆ ಗುಡ್‌ ಬೈ ಹೇಳಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

24 mins ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

39 mins ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

52 mins ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

55 mins ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

1 hour ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

1 hour ago