ಮನರಂಜನೆ

ಧನ್ಯಾ ಅಭಿನಯದ ಮತ್ತೊಂದು ಚಿತ್ರ ಸೆ. 13ಕ್ಕೆ ಬಿಡುಗಡೆ

ಡಾ. ರಾಜಕುಮಾರ್‍ ಅವರ ಮೊಮ್ಮಗಳು ಮತ್ತು ರಾಮ್‍ಕುಮಾರ್‍ ಮಗಳಾದ ಧನ್ಯಾ ರಾಮ್‍ಕುಮಾರ್‍ ಅಭಿನಯದ ಮೂರು ಚಿತ್ರಗಳು ಈ ವರ್ಷ ಬಿಡುಗಡೆಯಾಗಿವೆ. ಮೊದಲು ‘ಹೈಡ್‍ ಆ್ಯಂಡ್‍ ಸೀಕ್‍’ ಎಂಬ ಚಿತ್ರ ಬಂತು. ನಂತರ ‘ದಿ ಜಡ್ಜ್ಮೆಂಟ್‍’ ಚಿತ್ರ ಬಿಡುಗಡೆಯಾಯಿತು. ಕಳೆದ ವಾರ ‘ಪೌಡರ್‍’ ಚಿತ್ರ ಹೊರಬಂತು. ಈ ಮೂರೂ ಚಿತ್ರಗಳು ಅಷ್ಟೇನೂ ಸದ್ದು ಮಾಡಲಿಲ್ಲ. ಈಗ ಧನ್ಯಾ ಅಭಿನಯದ ಇನ್ನೊಂದು ಚಿತ್ರದ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಚಿತ್ರ ಸೆ. 13ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ.

ಅಂದಹಾಗೆ, ಈ ಚಿತ್ರದ ಹೆಸರು ‘ಕಾಲಾಪತ್ಥರ್’. ‘ದುನಿಯಾ’ ಸೂರಿ ನಿರ್ದೇಶನದ ‘ಕೆಂಡಸಂಪಿಗೆ’ ಚಿತ್ರದ ನಾಯಕನಾಗಿ ಅಭಿನಯಿಸಿದ್ದ ವಿಕ್ಕಿ ವರುಣ್‍, ನಾಯಕನಾಗಿ ನಟಿಸಿದ ಚಿತ್ರವಿದು. ವಿಕ್ಕಿ ಈ ಚಿತ್ರಕ್ಕೆ ಬರೀ ನಾಯಕನಷ್ಟೇ ಅಲ್ಲ, ನಿರ್ದೇಶಕರೂ ಹೌದು. ಸೂರಿ ಗರಡಿಯಲ್ಲಿ ಪಳಗಿದ್ದ ವಿಕ್ಕಿ, ಸೂರಿ ನಿರ್ದೇಶನದ ಕೆಲವು ಚಿತ್ರಗಳಿಗೆ ಸಹಾಯಕರಾಗಿ ಕೆಲಸ ಮಾಡಿದ್ದರು. ಈಗ ಮೊದಲ ಬಾರಿಗೆ ‘ಕಾಲಾಪತ್ಥರ್‍’ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ.

ಈ ಚಿತ್ರದಲ್ಲಿ ಧನ್ಯ, ಗಂಗಾ ಎಂಬ ಶಾಲಾಶಿಕ್ಷಕಿಯ ಪಾತ್ರ ನಿರ್ವಹಿಸಿದ್ದಾರಂತೆ. ‘ನನ್ನ ಪಾತ್ರ ಹಾಗೂ ಚಿತ್ರ ಎರಡು ಚೆನ್ನಾಗಿದೆ. ನನಗೆ ಈಗಷ್ಟೇ ವಿಕ್ಕಿ ಅವರು ಚಿತ್ರದ ತುಣುಕು ತೋರಿಸಿದ್ರು. ಅದನ್ನು ನೋಡಿದ ಮೇಲೆ ನಾನಂತೂ ಚಿತ್ರ ನೋಡಲು ಕಾತುರದಿಂದ ಕಾಯುತ್ತಿದ್ದೇನೆ’ ಎಂದರು.

ವಿಕ್ಕಿ ಅಭಿನಯದ ‘ಕೆಂಡಸಂಪಿಗೆ’ ಚಿತ್ರವು ಒಂಬತ್ತು ವರ್ಷಗಳ ಹಿಂದೆ ಸೆಪ್ಟೆಂಬರ್‍ ತಿಂಗಳಲ್ಲಿ ಬಿಡುಗಡೆ ಆಗಿತ್ತಂತೆ. ಈಗ ‘ಕಾಲಾಪತ್ಥರ್‍’ ಚಿತ್ರ ಸಹ ಸೆಪ್ಟೆಂಬರ್‍ ತಿಂಗಳಲ್ಲಿ ಬಿಡುಗಡೆಯಾಗುತ್ತಿದೆ. ಈ ಚಿತ್ರದ ಕುರಿತು ಮಾತನಾಡುವ ವಿಕ್ಕಿ. ‘’‘ಕಾಲಾಪತ್ಥರ್’, ಕಪ್ಪುಕಲ್ಲಿಗೆ ಸಂಬಂಧಿಸಿದ ಕಥೆ. ’ರಾಮ ರಾಮಾ ರೇ’ ಖ್ಯಾತಿಯ ಸತ್ಯಪ್ರಕಾಶ್ ಕಥೆ ಬರೆದಿದ್ದಾರೆ. ವಿಜಾಪುರದ ಬಳಿ ಹೆಚ್ಚು ಚಿತ್ರೀಕರಣವಾಗಿದೆ. ಆಲಮಟ್ಟಿಯ ಹಿನ್ನೀರಿನ ಜೈನಾಪುರ ಎಂಬ ಸ್ಥಳದಲ್ಲಿ ಚಿತ್ರೀಕರಣ ನಡೆದಿದ್ದು, ನಮ್ಮ ಚಿತ್ರದ ಚಿತ್ರೀಕರಣವಾಗಿ ಕೆಲವೇ ತಿಂಗಳಲ್ಲೇ ಈ ಹಳ್ಳಿ ನೀರಿನಲ್ಲಿ ಮುಳುಗಡೆಯಾಗಿದೆ. ನಮ್ಮ ಚಿತ್ರವನ್ನು ‘ಮಾರ್ಟಿನ್’ ಚಿತ್ರದ ನಿರ್ಮಾಪಕರಾದ ಉದಯ್ ಕೆ ಮೆಹ್ತಾ ಅವರು ವಿತರಣೆ ಮಾಡುತ್ತಿದ್ದಾರೆ’ ಎಂದರು.

‘ಕಾಲಾಪತ್ಥರ್’ ಚಿತ್ರವನ್ನು ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ಜೊತೆಯಾಗಿ ನಿರ್ಮಿಸಿದ್ದು, ಚಿತ್ರಕ್ಕೆ ಅನೂಪ್‍ ಸೀಳಿನ್‍ ಸಂಗೀತ ಸಂಯೋಜಿಸಿದ್ದಾರೆ.

ಭೂಮಿಕಾ

Recent Posts

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ಮುಟ್ಟಿದ ನನ್ನೂರಿನ ಮನಸುಗಳು…

• ಎಸ್.ಗಂಗಾಧರಯ್ಯ ಗಾಂಧಿ ಎಂಬುದೊಂದು ತಾಯ್ತನದ ಭಾವ, ಅದು ಅಂದು ಇಂದು ಮುಂದೆ ಯಾವತ್ತೂ ಎದೆಯ ಕತ್ತಲಿಗೆ ಹಚ್ಚಿದ ತುಂಬಿಹೋಗದ…

22 mins ago

ಗಾಂಧಿ ಅಭಿಯಾನ ಅರಿವಿನ ಯಾನ : ಇಲ್ಲಿದೆ ಗಾಂಧಿ ಆತ್ಮಕತೆಯ ಆಯ್ದ ತುಣುಕು

ನನ್ನ ನಡೆತೆಯನ್ನು ಬಹು ಎಚ್ಚರಿಕೆಯಿಂದ ಕಾಯ್ದುಕೊಂಡಿದ್ದೆ ನನ್ನ ಮದುವೆಯಾದ ಕಾಲಕ್ಕೆ ನಾನು ಪ್ರೌಢಶಾಲೆಯಲ್ಲಿ ಓದುತ್ತಿದ್ದೆ. ನಾನು ಉಪಾಧ್ಯಾಯರ ಪ್ರೀತಿಯನ್ನು ಯಾವಾಗಲೂ…

50 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.16 ಶನಿವಾರ  

4 hours ago

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

21 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

22 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

22 hours ago