ಮನರಂಜನೆ

ಪೃಥ್ವಿ ಅಂಬಾರ್‍ ಅಭಿನಯದ ‘ಚೌಕಿದಾರ್’ಗೆ ಧನ್ಯಾ ರಾಮ್‍ಕುಮಾರ್‍ ನಾಯಕಿ

ಡಾ. ರಾಜಕುಮಾರ್ ಮೊಮ್ಮಗಳು ಮತ್ತು ರಾಮ್‍ಕುಮಾರ್‍ ಅವರ ಮಗಳು ಧನ್ಯಾ ರಾಮ್‍ಕುಮಾರ್‍ ಅಭಿನಯದ ‘ನಿನ್ನ ಸನಿಹಕೆ’, ‘ಹೈಡ್‍ ಆ್ಯಂಡ್‍ ಸೀಕ್‍’ ಮತ್ತು ‘ದಿ ಜಡ್ಜ್ಮೆಂಟ್‍’ ಚಿತ್ರಗಳು ಇದುವರೆಗೂ ಬಿಡುಗಡೆಯಾಗಿವೆ. ಆದರೆ, ಯಾವೊಂದು ಚಿತ್ರವೂ ದೊಡ್ಡ ಯಶಸ್ಸು ಕಂಡಿಲ್ಲ. ಹೀಗೆ ಒಂದು ಗೆಲುವಿನ ಹುಡುಕಾಟದಲ್ಲಿರುವ ಧನ್ಯಾ ಇದೀಗ ಹೊಸ ಚಿತ್ರವೊಂದರಲ್ಲಿ ನಟಿಸುವುದಕ್ಕೆ ಸಜ್ಜಾಗುತ್ತಿದ್ದಾರೆ.

‘ರಥಾವರ’ ಖ್ಯಾತಿಯ ಚಂದ್ರಶೇಖರ್ ಬಂಡಿಯಪ್ಪ, ಪೃಥ್ವಿ ಅಂಬಾರ್‍ ಅಭಿನಯದಲ್ಲಿ ಒಂದು ಹೊಸ ಚಿತ್ರ ನಿರ್ಮಿಸುತ್ತಿರುವ ಸುದ್ದಿ ಈಗಾಗಲೇ ಹಳತಾಗಿದೆ. ಚಿತ್ರಕ್ಕೆ ‘ಚೌಕಿದಾರ್‍’ ಎಂಬ ಹೆಸರನ್ನು ಇಡಲಾಗಿದ್ದು, ಇದೀಗ ಈ ಚಿತ್ರಕ್ಕೆ ಧನ್ಯಾ ರಾಮ್‍ಕುಮಾರ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ಇದುವರೆಗೂ ಹಲವು ಚಿತ್ರಗಳಲ್ಲಿ ಲವರ್‌ ಬಾಯ್‌ ಆಗಿ ಕಾಣಿಸಿಕೊಂಡಿದ್ದ ಪೃಥ್ವಿ, ಈ ಚಿತ್ರದಲ್ಲಿ ಆ್ಯಕ್ಷನ್‍ ಹೀರೋ ಆಗಿದ್ದಾರೆ. ಇದೊಂದು ಫ್ಯಾಮಿಲಿ ಚಿತ್ರವಾಗಿದ್ದು, ಸಾಯಿಕುಮಾರ್ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಕಳೆದ ವಾರ ಬಂದಿತ್ತು. ಈಗ ಧನ್ಯಾ ರಾಮ್‍ಕುಮಾರ್‍ ಚಿತ್ರತಂಡದ ಭಾಗವಾಗಿರುವ ಸುದ್ದಿ ಬಂದಿದೆ. ಮುಂದಿನ ದಿನಗಳಲ್ಲಿ ಇನ್ನೂ ಯಾರ್ಯಾರು ನಟಿಸಬಹುದು ಎಂಬ ಕುತೂಹಲ ಎಲ್ಲರಲ್ಲೂ ಇದೆ.

ವಿದ್ಯಾ ಶೇಖರ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಡಾ.ಕಲ್ಲಹಳ್ಳಿ ಚಂದ್ರಶೇಖರ್, ‘ಚೌಕಿದಾರ್’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಸಚಿನ್‌ ಬಸ್ರೂರು ಈ ಚಿತ್ರಕ್ಕೆ ಸಂಗೀತ ನಿರ್ದೇಶನ ನೀಡುತ್ತಿದ್ದು, ವಿ. ನಾಗೇಂದ್ರ ಪ್ರಸಾದ್‌, ಪ್ರಮೋದ್‌ ಮರವಂತೆ ಹಾಡುಗಳಿಗೆ ಸಾಹಿತ್ಯ ಬರೆಯುತ್ತಿದ್ದಾರೆ.

‘ಚೌಕಿದಾರ್’ ಒಂದು ಪ್ಯಾನ್‍ ಇಂಡಿಯಾ ಚಿತ್ರವಾಗಿದದು, ಬಹುಭಾಷೆಯಲ್ಲಿ ಮೂಡಿಬರುತ್ತಿರುವ ಚಿತ್ರವಾಗಿದೆ. ಚಿತ್ರಕ್ಕೆ ಬೆಂಗಳೂರಿನ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಜುಲೈ 03ರಂದು ಮುಹೂರ್ತ ನಡೆಯಲಿದೆ. ಆ ದಿನ ಚಿತ್ರತಂಡದಲ್ಲಿ ಇನ್ನೂ ಯಾರೆಲ್ಲಾ ಇರಬಹುದು ಎಂಬ ವಿಷಯ ಸ್ಪಷ್ಟವಾಗಲಿದೆ.

ಈ ಮಧ್ಯೆ, ಧನ್ಯಾ ರಾಮ್‍ಕುಮಾರ್ ‘ಪೌಡರ್‍’ ಮತ್ತು ‘ಕಾಲಾ ಪತ್ಥರ್’ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದು, ಆ ಚಿತ್ರಗಳು ಬಿಡುಗಡೆಗೆ ಸಜ್ಜಾಗಿವೆ.

ಭೂಮಿಕಾ

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

9 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago