ಮನರಂಜನೆ

ಪೃಥ್ವಿ ಅಂಬಾರ್‍ ಅಭಿನಯದ ‘ಚೌಕಿದಾರ್’ಗೆ ಧನ್ಯಾ ರಾಮ್‍ಕುಮಾರ್‍ ನಾಯಕಿ

ಡಾ. ರಾಜಕುಮಾರ್ ಮೊಮ್ಮಗಳು ಮತ್ತು ರಾಮ್‍ಕುಮಾರ್‍ ಅವರ ಮಗಳು ಧನ್ಯಾ ರಾಮ್‍ಕುಮಾರ್‍ ಅಭಿನಯದ ‘ನಿನ್ನ ಸನಿಹಕೆ’, ‘ಹೈಡ್‍ ಆ್ಯಂಡ್‍ ಸೀಕ್‍’ ಮತ್ತು ‘ದಿ ಜಡ್ಜ್ಮೆಂಟ್‍’ ಚಿತ್ರಗಳು ಇದುವರೆಗೂ ಬಿಡುಗಡೆಯಾಗಿವೆ. ಆದರೆ, ಯಾವೊಂದು ಚಿತ್ರವೂ ದೊಡ್ಡ ಯಶಸ್ಸು ಕಂಡಿಲ್ಲ. ಹೀಗೆ ಒಂದು ಗೆಲುವಿನ ಹುಡುಕಾಟದಲ್ಲಿರುವ ಧನ್ಯಾ ಇದೀಗ ಹೊಸ ಚಿತ್ರವೊಂದರಲ್ಲಿ ನಟಿಸುವುದಕ್ಕೆ ಸಜ್ಜಾಗುತ್ತಿದ್ದಾರೆ.

‘ರಥಾವರ’ ಖ್ಯಾತಿಯ ಚಂದ್ರಶೇಖರ್ ಬಂಡಿಯಪ್ಪ, ಪೃಥ್ವಿ ಅಂಬಾರ್‍ ಅಭಿನಯದಲ್ಲಿ ಒಂದು ಹೊಸ ಚಿತ್ರ ನಿರ್ಮಿಸುತ್ತಿರುವ ಸುದ್ದಿ ಈಗಾಗಲೇ ಹಳತಾಗಿದೆ. ಚಿತ್ರಕ್ಕೆ ‘ಚೌಕಿದಾರ್‍’ ಎಂಬ ಹೆಸರನ್ನು ಇಡಲಾಗಿದ್ದು, ಇದೀಗ ಈ ಚಿತ್ರಕ್ಕೆ ಧನ್ಯಾ ರಾಮ್‍ಕುಮಾರ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ಇದುವರೆಗೂ ಹಲವು ಚಿತ್ರಗಳಲ್ಲಿ ಲವರ್‌ ಬಾಯ್‌ ಆಗಿ ಕಾಣಿಸಿಕೊಂಡಿದ್ದ ಪೃಥ್ವಿ, ಈ ಚಿತ್ರದಲ್ಲಿ ಆ್ಯಕ್ಷನ್‍ ಹೀರೋ ಆಗಿದ್ದಾರೆ. ಇದೊಂದು ಫ್ಯಾಮಿಲಿ ಚಿತ್ರವಾಗಿದ್ದು, ಸಾಯಿಕುಮಾರ್ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಕಳೆದ ವಾರ ಬಂದಿತ್ತು. ಈಗ ಧನ್ಯಾ ರಾಮ್‍ಕುಮಾರ್‍ ಚಿತ್ರತಂಡದ ಭಾಗವಾಗಿರುವ ಸುದ್ದಿ ಬಂದಿದೆ. ಮುಂದಿನ ದಿನಗಳಲ್ಲಿ ಇನ್ನೂ ಯಾರ್ಯಾರು ನಟಿಸಬಹುದು ಎಂಬ ಕುತೂಹಲ ಎಲ್ಲರಲ್ಲೂ ಇದೆ.

ವಿದ್ಯಾ ಶೇಖರ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಡಾ.ಕಲ್ಲಹಳ್ಳಿ ಚಂದ್ರಶೇಖರ್, ‘ಚೌಕಿದಾರ್’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಸಚಿನ್‌ ಬಸ್ರೂರು ಈ ಚಿತ್ರಕ್ಕೆ ಸಂಗೀತ ನಿರ್ದೇಶನ ನೀಡುತ್ತಿದ್ದು, ವಿ. ನಾಗೇಂದ್ರ ಪ್ರಸಾದ್‌, ಪ್ರಮೋದ್‌ ಮರವಂತೆ ಹಾಡುಗಳಿಗೆ ಸಾಹಿತ್ಯ ಬರೆಯುತ್ತಿದ್ದಾರೆ.

‘ಚೌಕಿದಾರ್’ ಒಂದು ಪ್ಯಾನ್‍ ಇಂಡಿಯಾ ಚಿತ್ರವಾಗಿದದು, ಬಹುಭಾಷೆಯಲ್ಲಿ ಮೂಡಿಬರುತ್ತಿರುವ ಚಿತ್ರವಾಗಿದೆ. ಚಿತ್ರಕ್ಕೆ ಬೆಂಗಳೂರಿನ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಜುಲೈ 03ರಂದು ಮುಹೂರ್ತ ನಡೆಯಲಿದೆ. ಆ ದಿನ ಚಿತ್ರತಂಡದಲ್ಲಿ ಇನ್ನೂ ಯಾರೆಲ್ಲಾ ಇರಬಹುದು ಎಂಬ ವಿಷಯ ಸ್ಪಷ್ಟವಾಗಲಿದೆ.

ಈ ಮಧ್ಯೆ, ಧನ್ಯಾ ರಾಮ್‍ಕುಮಾರ್ ‘ಪೌಡರ್‍’ ಮತ್ತು ‘ಕಾಲಾ ಪತ್ಥರ್’ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದು, ಆ ಚಿತ್ರಗಳು ಬಿಡುಗಡೆಗೆ ಸಜ್ಜಾಗಿವೆ.

ಭೂಮಿಕಾ

Recent Posts

ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ: ಎಸ್.ಟಿ.ಸೋಮಶೇಖರ್‌

ಬೆಂಗಳೂರು: ನಾನು ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ. ಕಾಂಗ್ರೆಸ್‌ಗೆ ಹೋಗುತ್ತೇನೆ ಎಂದು ಶಾಸಕ ಎಸ್.ಟಿ.ಸೋಮಶೇಖರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

39 mins ago

ಬಿಹಾರದ ನಳಂದಾ ದೇಗುಲದಲ್ಲಿ ಕಾಲ್ತುಳಿತ: 8 ಮಂದಿ ಸಾವು

ನಳಂದಾ: ಬಿಹಾರದ ನಳಂದಾ ಜಿಲ್ಲೆಯ ಶೀತಲಾ ದೇವಸ್ಥಾನದ ಧಾರ್ಮಿಕ ಸಮಾರಂಭವೊಂದರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಂದಿ ಮಹಿಳೆಯರು ಸಾವನ್ನಪ್ಪಿದ್ದಾರೆ.…

52 mins ago

ಕೌಟುಂಬಿಕ ಕಲಹ: ಬೆಂಗಳೂರಿನಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆ

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊತ್ತನೂರು ಪೊಲೀಸ್‌ ಠಾಣೆ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ…

1 hour ago

ಉಜ್ವಲ ಹೋಯ್ತು, ಈಗ ಸೌದೆ ಯೋಜನೆ ಸ್ಟಾರ್ಟ್‌: ಡಿಸಿಎಂ ಡಿ.ಕೆ.ಶಿವಕುಮಾರ್‌ ವಾಗ್ದಾಳಿ

ಬೆಂಗಳೂರು: ಸೌದೆ ಮುಕ್ತ ಭಾರತ ಮಾಡ್ತೀವಿ ಎಂದು ಹೇಳಿ ಎಲ್ಲಾ ಕಡೆ ಗ್ಯಾಸ್‌ ತಂದರು. ಹಳ್ಳಿಗಳಲ್ಲೂ ಗ್ಯಾಸ್‌ ಬಂತು. ಈಗ…

2 hours ago

ಇರಾನ್‌ನ ಇಸ್ಫಹಾನ್‌ನಲ್ಲಿ ಸರಣಿ ಸ್ಫೋಟ

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ತನ್ನ ಪ್ರತೀಕಾರ ಮುಂದುವರಿಸಿದೆ. ಇರಾನ್‌ನ ಇಸ್ಪಹಾನ್‌ ನಗರದಲ್ಲಿರುವ ಮಿಲಿಟರಿ ಕೇಂದ್ರದ ಮೇಲೆ…

2 hours ago

ಓದುಗರ ಪತ್ರ: ಟೋಲ್ ದರ ಹೆಚ್ಚಳ ಗಾಯದ ಮೇಲೆ ಬರೆ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಏಪ್ರಿಲ್‌ನಿಂದ ಅನ್ವಯವಾಗುವಂತೆ ಫಾಸ್ಟ್‌ಟ್ಯಾಗ್ ವಾರ್ಷಿಕ ಪಾಸ್ ದರವನ್ನು ೩೦೦೦ ರೂ.ನಿಂದ ೩೦೭೫ ರೂ. ಗೆ ಏರಿಸಿರುವುದು…

3 hours ago