ಮನರಂಜನೆ

ಪೃಥ್ವಿ ಅಂಬಾರ್‍ ಅಭಿನಯದ ‘ಚೌಕಿದಾರ್’ಗೆ ಧನ್ಯಾ ರಾಮ್‍ಕುಮಾರ್‍ ನಾಯಕಿ

ಡಾ. ರಾಜಕುಮಾರ್ ಮೊಮ್ಮಗಳು ಮತ್ತು ರಾಮ್‍ಕುಮಾರ್‍ ಅವರ ಮಗಳು ಧನ್ಯಾ ರಾಮ್‍ಕುಮಾರ್‍ ಅಭಿನಯದ ‘ನಿನ್ನ ಸನಿಹಕೆ’, ‘ಹೈಡ್‍ ಆ್ಯಂಡ್‍ ಸೀಕ್‍’ ಮತ್ತು ‘ದಿ ಜಡ್ಜ್ಮೆಂಟ್‍’ ಚಿತ್ರಗಳು ಇದುವರೆಗೂ ಬಿಡುಗಡೆಯಾಗಿವೆ. ಆದರೆ, ಯಾವೊಂದು ಚಿತ್ರವೂ ದೊಡ್ಡ ಯಶಸ್ಸು ಕಂಡಿಲ್ಲ. ಹೀಗೆ ಒಂದು ಗೆಲುವಿನ ಹುಡುಕಾಟದಲ್ಲಿರುವ ಧನ್ಯಾ ಇದೀಗ ಹೊಸ ಚಿತ್ರವೊಂದರಲ್ಲಿ ನಟಿಸುವುದಕ್ಕೆ ಸಜ್ಜಾಗುತ್ತಿದ್ದಾರೆ.

‘ರಥಾವರ’ ಖ್ಯಾತಿಯ ಚಂದ್ರಶೇಖರ್ ಬಂಡಿಯಪ್ಪ, ಪೃಥ್ವಿ ಅಂಬಾರ್‍ ಅಭಿನಯದಲ್ಲಿ ಒಂದು ಹೊಸ ಚಿತ್ರ ನಿರ್ಮಿಸುತ್ತಿರುವ ಸುದ್ದಿ ಈಗಾಗಲೇ ಹಳತಾಗಿದೆ. ಚಿತ್ರಕ್ಕೆ ‘ಚೌಕಿದಾರ್‍’ ಎಂಬ ಹೆಸರನ್ನು ಇಡಲಾಗಿದ್ದು, ಇದೀಗ ಈ ಚಿತ್ರಕ್ಕೆ ಧನ್ಯಾ ರಾಮ್‍ಕುಮಾರ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ಇದುವರೆಗೂ ಹಲವು ಚಿತ್ರಗಳಲ್ಲಿ ಲವರ್‌ ಬಾಯ್‌ ಆಗಿ ಕಾಣಿಸಿಕೊಂಡಿದ್ದ ಪೃಥ್ವಿ, ಈ ಚಿತ್ರದಲ್ಲಿ ಆ್ಯಕ್ಷನ್‍ ಹೀರೋ ಆಗಿದ್ದಾರೆ. ಇದೊಂದು ಫ್ಯಾಮಿಲಿ ಚಿತ್ರವಾಗಿದ್ದು, ಸಾಯಿಕುಮಾರ್ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಕಳೆದ ವಾರ ಬಂದಿತ್ತು. ಈಗ ಧನ್ಯಾ ರಾಮ್‍ಕುಮಾರ್‍ ಚಿತ್ರತಂಡದ ಭಾಗವಾಗಿರುವ ಸುದ್ದಿ ಬಂದಿದೆ. ಮುಂದಿನ ದಿನಗಳಲ್ಲಿ ಇನ್ನೂ ಯಾರ್ಯಾರು ನಟಿಸಬಹುದು ಎಂಬ ಕುತೂಹಲ ಎಲ್ಲರಲ್ಲೂ ಇದೆ.

ವಿದ್ಯಾ ಶೇಖರ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಡಾ.ಕಲ್ಲಹಳ್ಳಿ ಚಂದ್ರಶೇಖರ್, ‘ಚೌಕಿದಾರ್’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಸಚಿನ್‌ ಬಸ್ರೂರು ಈ ಚಿತ್ರಕ್ಕೆ ಸಂಗೀತ ನಿರ್ದೇಶನ ನೀಡುತ್ತಿದ್ದು, ವಿ. ನಾಗೇಂದ್ರ ಪ್ರಸಾದ್‌, ಪ್ರಮೋದ್‌ ಮರವಂತೆ ಹಾಡುಗಳಿಗೆ ಸಾಹಿತ್ಯ ಬರೆಯುತ್ತಿದ್ದಾರೆ.

‘ಚೌಕಿದಾರ್’ ಒಂದು ಪ್ಯಾನ್‍ ಇಂಡಿಯಾ ಚಿತ್ರವಾಗಿದದು, ಬಹುಭಾಷೆಯಲ್ಲಿ ಮೂಡಿಬರುತ್ತಿರುವ ಚಿತ್ರವಾಗಿದೆ. ಚಿತ್ರಕ್ಕೆ ಬೆಂಗಳೂರಿನ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಜುಲೈ 03ರಂದು ಮುಹೂರ್ತ ನಡೆಯಲಿದೆ. ಆ ದಿನ ಚಿತ್ರತಂಡದಲ್ಲಿ ಇನ್ನೂ ಯಾರೆಲ್ಲಾ ಇರಬಹುದು ಎಂಬ ವಿಷಯ ಸ್ಪಷ್ಟವಾಗಲಿದೆ.

ಈ ಮಧ್ಯೆ, ಧನ್ಯಾ ರಾಮ್‍ಕುಮಾರ್ ‘ಪೌಡರ್‍’ ಮತ್ತು ‘ಕಾಲಾ ಪತ್ಥರ್’ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದು, ಆ ಚಿತ್ರಗಳು ಬಿಡುಗಡೆಗೆ ಸಜ್ಜಾಗಿವೆ.

ಭೂಮಿಕಾ

Recent Posts

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

52 mins ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

1 hour ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

1 hour ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

9 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

9 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

9 hours ago