ಮನರಂಜನೆ

ಧರ್ಮ ಕೀರ್ತಿರಾಜ್‍ ‘ಬಿಗ್‍ ಬಾಸ್‍’ನಲ್ಲಿ; ‘ಟೆನೆಂಟ್‍’ ಟೀಸರ್‍ ಯೂಟ್ಯೂಬ್‍ನಲ್ಲಿ

 

ಆ ಕಡೆ ಹಿರಿಯ ಖಳನಟ ಕೀರ್ತಿರಾಜ್‍ ಅವರ ಮಗ ಧರ್ಮ ಕೀರ್ತಿರಾಜ್‍, ‘ಬಿಗ್‍ ಬಾಸ್‍’ ಕಾರ್ಯಕ್ರಮದಲ್ಲಿ ಬ್ಯುಸಿಯಾಗಿದ್ದರೆ, ಇತ್ತ ಅವರ ಅಭಿನಯದ ಹೊಸ ಚಿತ್ರವೊಂದರ ಟೀಸರ್‍ ಸದ್ದಿಲ್ಲದೆ ಬಿಡುಗಡೆಯಾಗಿದೆ. ಅದೇ ‘ಟೆನೆಂಟ್‍’.

‘ಟೆನೆಂಟ್‍’ ಎಂದರೆ ಬಾಡಿಗೆದಾರ ಎಂದು ಎಲ್ಲರಿಗೂ ಗೊತ್ತೇ ಇದೆ. ಮನೆಯೊಂದರಲ್ಲಿ ನಡೆಯುವ ಕ್ರೈಮ್‍ ಥ್ರಿಲ್ಲರ್‍ ಚಿತ್ರ ಇದು. ಧರ್ಮ ಜೊತೆಗೆ ಸೋನು ಗೌಡ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಚಿತ್ರದ ಮೊದಲ ನೋಟ ಬಿಡುಗಡೆ ಆಗಿದ್ದು, ಇತ್ತೀಚೆಗೆ ಚಿತ್ರದ ಮೊದಲ ಟೀಸರ್‍ ಬಿಡುಗಡೆ ಆಗಿದೆ.

ವಿಶೇಷವೆಂದರೆ, ಕನ್ನಡ ಚಿತ್ರರಂಗದ ಹಲವು ಗಣ್ಯರು ಸೇರಿ ಈ ಟೀಸರ್‍ ಬಿಡುಗಡೆ ಮಾಡಿದ್ದಾರೆ. ನಿರ್ದೇಶಕರಾದ ಶಶಾಂಕ್, ಪವನ್ ಒಡೆಯರ್, ಛಾಯಾಗ್ರಹಕರಾದ ಸತ್ಯ ಹೆಗ್ಡೆ, ಡಿಸೈನರ್ ಹಾಗೂ ವಿತರಕಿ ಸಚಿನ್ನಾ ಹೆಗ್ಗಾರ್, ಚಂದನ್ ಶೆಟ್ಟಿ, ನವೀಶ್ ಶಂಕರ್ ಸೇರಿದಂತೆ ಅನೇಕರು ಟೀಸರ್‍ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಬೆಂಬಲ ಸೂಚಿಸಿದ್ದಾರೆ.

‘ಟೆನೆಂಟ್‍’ ಚಿತ್ರವನ್ನು ನಿರ್ದೇಶಿಸಿರುವುದು ಶ್ರೀಧರ್‍ ಶಾಸ್ತ್ರಿ. ವಿ.ಎಫ್.ಎಕ್ಸ್ ನಲ್ಲಿ ನಾಲ್ಕು ವರ್ಷಗಳ ಅನುಭವವಿರುವ ಶ್ರೀಧರ್, ಈಗ ಇದೇ ಮೊದಲ ಬಾರಿಗೆ ‘ಟನೆಂಟ್‍’ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದಕ್ಕೂ ಮುನ್ನ ಒಂದಿಷ್ಟು ಕಿರುಚಿತ್ರಗಳನ್ನು ನಿರ್ದೇಶಿಸಿ ಅನುಭವವಿರುವ ಶ್ರೀಧರ್‍, ಇದೇ ಮೊದಲ ಬಾರಿಗೆ ಚಿತ್ರ ನಿರ್ದೇನಕ್ಕೆ ಕೈ ಹಾಕಿದ್ದಾರೆ.

ಮಾಸ್ಟರ್ ಚಾಯ್ಸ್ ಕ್ರಿಯೇಷನ್ ನಡಿ ನಾಗರಾಜ್ ಟಿ, ‘ಟೆನೆಂಟ್’ ಚಿತ್ರವನ್ನು ನಿರ್ಮಿಸುತ್ತಿದ್ದು, ಪೃಥ್ವಿರಾಜ್ ಸಹ ನಿರ್ಮಾಪಕರಾಗಿ ಕೈ ಜೋಡಿಸಿದ್ದಾರೆ. ಇನ್ನು, ಶ್ರೀಧರ್ ಶಾಸ್ತ್ರಿ ನಿರ್ದೇಶನದ ಜೊತೆಗೆ ಕಥೆ ಮತ್ತು ಚಿತ್ರಕಥೆಯನ್ನು ಸಹ ರಚಿಸಿದ್ದಾರೆ.

‘ಟೆನೆಂಟ್‍’ ಚಿತ್ರದಲ್ಲಿ ಧರ್ಮ ಕೀರ್ತಿರಾಜ್, ಸೋನು ಗೌಡ, ತಿಲಕ್‍ ಜೊತೆಗೆ ರಾಕೇಶ್ ಮಯ್ಯ, ‘ಉಗ್ರಂ’ ಮಂಜು ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಗಿರೀಶ್ ಹೊತೂರ್ ಸಂಗೀತ, ಉಜ್ವಲ್ ಚಂದ್ರ ಸಂಕಲನ ಮತ್ತು ಮನೋಹರ್ ಜೋಷಿ ಛಾಯಾಗ್ರಹಣವಿದೆ.

‘ಟೆನೆಂಟ್‍’ ಚಿತ್ರವು ನವೆಂಬರ್‍ 22ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

andolana

Recent Posts

ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ ; ಕೈ ಶಾಸಕರಿಗೆ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…

18 mins ago

ಹೆದ್ದಾರಿ ತಡೆದು ಪ್ರತಿಭಟನೆ : ಬಂಡೀಪುರ ರಾತ್ರಿ ಸಂಚಾರ ತೆರವು ಮಾಡದಂತೆ ಆಗ್ರಹ

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…

1 hour ago

ಕೊಡಗು | ತೆರೆದ ಬಾವಿಗೆ ಬಿದ್ದ ಕಾಡಾನೆ ಮರಿ , ರಕ್ಷಣೆ

ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…

1 hour ago

ಹೊರ್ಮುಜ್‌ ಬಿಕ್ಕಟ್ಟು | ಅಮೆರಿಕ ದಿಗ್ಬಂಧನ ಬೆನ್ನಲ್ಲೇ ಇರಾನ್‌ ವಾರ್ನಿಂಗ್‌

ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…

2 hours ago

ವಿಧಾನಸೌಧಕ್ಕೆ ಮತ್ತೆ ಬರೋದು ಭಗವಂತನ ಇಚ್ಛೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮರಳಿ ವಿಧಾನಸೌಧ ಪ್ರವೇಶ ಮಾಡುವ ಬಗ್ಗೆ ಜನರ ಆಶೀರ್ವಾದ ಮತ್ತು ಭಗವಂತನ ಇಚ್ಛೆ ನಿರ್ಧರಿಸುತ್ತದೆ ಎಂದು ಕೇಂದ್ರದ ಬೃಹತ್…

4 hours ago

ಜುಲೈ.3ರಿಂದ ವಾರ್ಷಿಕ ಅಮರನಾಥ ಯಾತ್ರೆ ಆರಂಭ

ಶ್ರೀನಗರ: ಹಿಂದೂಗಳ ಪವಿತ್ರ ಯಾತ್ರಾ ಸ್ಥಳವಾದ ಅಮರನಾಥ ಗುಹೆಗೆ ವಾರ್ಷಿಕ ತೀರ್ಥಯಾತ್ರೆ ಈ ವರ್ಷ ಜುಲೈ 3ರಂದು ಆರಂಭವಾಗಲಿದೆ. ಕೇಂದ್ರಾಡಳಿತ…

5 hours ago