ಆ ಕಡೆ ಹಿರಿಯ ಖಳನಟ ಕೀರ್ತಿರಾಜ್ ಅವರ ಮಗ ಧರ್ಮ ಕೀರ್ತಿರಾಜ್, ‘ಬಿಗ್ ಬಾಸ್’ ಕಾರ್ಯಕ್ರಮದಲ್ಲಿ ಬ್ಯುಸಿಯಾಗಿದ್ದರೆ, ಇತ್ತ ಅವರ ಅಭಿನಯದ ಹೊಸ ಚಿತ್ರವೊಂದರ ಟೀಸರ್ ಸದ್ದಿಲ್ಲದೆ ಬಿಡುಗಡೆಯಾಗಿದೆ. ಅದೇ ‘ಟೆನೆಂಟ್’.
‘ಟೆನೆಂಟ್’ ಎಂದರೆ ಬಾಡಿಗೆದಾರ ಎಂದು ಎಲ್ಲರಿಗೂ ಗೊತ್ತೇ ಇದೆ. ಮನೆಯೊಂದರಲ್ಲಿ ನಡೆಯುವ ಕ್ರೈಮ್ ಥ್ರಿಲ್ಲರ್ ಚಿತ್ರ ಇದು. ಧರ್ಮ ಜೊತೆಗೆ ಸೋನು ಗೌಡ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಚಿತ್ರದ ಮೊದಲ ನೋಟ ಬಿಡುಗಡೆ ಆಗಿದ್ದು, ಇತ್ತೀಚೆಗೆ ಚಿತ್ರದ ಮೊದಲ ಟೀಸರ್ ಬಿಡುಗಡೆ ಆಗಿದೆ.
ವಿಶೇಷವೆಂದರೆ, ಕನ್ನಡ ಚಿತ್ರರಂಗದ ಹಲವು ಗಣ್ಯರು ಸೇರಿ ಈ ಟೀಸರ್ ಬಿಡುಗಡೆ ಮಾಡಿದ್ದಾರೆ. ನಿರ್ದೇಶಕರಾದ ಶಶಾಂಕ್, ಪವನ್ ಒಡೆಯರ್, ಛಾಯಾಗ್ರಹಕರಾದ ಸತ್ಯ ಹೆಗ್ಡೆ, ಡಿಸೈನರ್ ಹಾಗೂ ವಿತರಕಿ ಸಚಿನ್ನಾ ಹೆಗ್ಗಾರ್, ಚಂದನ್ ಶೆಟ್ಟಿ, ನವೀಶ್ ಶಂಕರ್ ಸೇರಿದಂತೆ ಅನೇಕರು ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಬೆಂಬಲ ಸೂಚಿಸಿದ್ದಾರೆ.
‘ಟೆನೆಂಟ್’ ಚಿತ್ರವನ್ನು ನಿರ್ದೇಶಿಸಿರುವುದು ಶ್ರೀಧರ್ ಶಾಸ್ತ್ರಿ. ವಿ.ಎಫ್.ಎಕ್ಸ್ ನಲ್ಲಿ ನಾಲ್ಕು ವರ್ಷಗಳ ಅನುಭವವಿರುವ ಶ್ರೀಧರ್, ಈಗ ಇದೇ ಮೊದಲ ಬಾರಿಗೆ ‘ಟನೆಂಟ್’ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದಕ್ಕೂ ಮುನ್ನ ಒಂದಿಷ್ಟು ಕಿರುಚಿತ್ರಗಳನ್ನು ನಿರ್ದೇಶಿಸಿ ಅನುಭವವಿರುವ ಶ್ರೀಧರ್, ಇದೇ ಮೊದಲ ಬಾರಿಗೆ ಚಿತ್ರ ನಿರ್ದೇನಕ್ಕೆ ಕೈ ಹಾಕಿದ್ದಾರೆ.
ಮಾಸ್ಟರ್ ಚಾಯ್ಸ್ ಕ್ರಿಯೇಷನ್ ನಡಿ ನಾಗರಾಜ್ ಟಿ, ‘ಟೆನೆಂಟ್’ ಚಿತ್ರವನ್ನು ನಿರ್ಮಿಸುತ್ತಿದ್ದು, ಪೃಥ್ವಿರಾಜ್ ಸಹ ನಿರ್ಮಾಪಕರಾಗಿ ಕೈ ಜೋಡಿಸಿದ್ದಾರೆ. ಇನ್ನು, ಶ್ರೀಧರ್ ಶಾಸ್ತ್ರಿ ನಿರ್ದೇಶನದ ಜೊತೆಗೆ ಕಥೆ ಮತ್ತು ಚಿತ್ರಕಥೆಯನ್ನು ಸಹ ರಚಿಸಿದ್ದಾರೆ.
‘ಟೆನೆಂಟ್’ ಚಿತ್ರದಲ್ಲಿ ಧರ್ಮ ಕೀರ್ತಿರಾಜ್, ಸೋನು ಗೌಡ, ತಿಲಕ್ ಜೊತೆಗೆ ರಾಕೇಶ್ ಮಯ್ಯ, ‘ಉಗ್ರಂ’ ಮಂಜು ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಗಿರೀಶ್ ಹೊತೂರ್ ಸಂಗೀತ, ಉಜ್ವಲ್ ಚಂದ್ರ ಸಂಕಲನ ಮತ್ತು ಮನೋಹರ್ ಜೋಷಿ ಛಾಯಾಗ್ರಹಣವಿದೆ.
‘ಟೆನೆಂಟ್’ ಚಿತ್ರವು ನವೆಂಬರ್ 22ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…
ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…
ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…
ಹುಣಸೂರು : ಲಾರಿ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲ್ಲೂಕಿನ…
ಬೆಂಗಳೂರು : ಮುಂದಿನ ಮಾರ್ಚ್ ತಿಂಗಳ 2ರೊಳಗೆ ಸರ್ಕಾರ ತಮ್ಮ ಬೇಡಿಕೆ ಈಡೇರಿಸಬೇಕೆಂದು ಗಡುವು ನೀಡಿರುವ ಸಾರಿಗೆ ನೌಕರರು, ಶುಕ್ರವಾರದಿಂದ…
ಮಂಡ್ಯ : ಮಾರ್ಚ್ 23ರಿಂದ ಏಪ್ರಿಲ್ 5ರವರೆಗೆ ವೈರಮುಡಿ ಬ್ರಹ್ಮೋತ್ಸವ 2026 ನಡೆಯಲಿದೆ. ಮಾರ್ಚ್ 28 ಶನಿವಾರದಂದು ವೈರಮುಡಿ ಕಿರೀಟಧಾರಣೆ…