ಮನರಂಜನೆ

ಧರ್ಮ ಕೀರ್ತಿರಾಜ್‍ ‘ಬಿಗ್‍ ಬಾಸ್‍’ನಲ್ಲಿ; ‘ಟೆನೆಂಟ್‍’ ಟೀಸರ್‍ ಯೂಟ್ಯೂಬ್‍ನಲ್ಲಿ

 

ಆ ಕಡೆ ಹಿರಿಯ ಖಳನಟ ಕೀರ್ತಿರಾಜ್‍ ಅವರ ಮಗ ಧರ್ಮ ಕೀರ್ತಿರಾಜ್‍, ‘ಬಿಗ್‍ ಬಾಸ್‍’ ಕಾರ್ಯಕ್ರಮದಲ್ಲಿ ಬ್ಯುಸಿಯಾಗಿದ್ದರೆ, ಇತ್ತ ಅವರ ಅಭಿನಯದ ಹೊಸ ಚಿತ್ರವೊಂದರ ಟೀಸರ್‍ ಸದ್ದಿಲ್ಲದೆ ಬಿಡುಗಡೆಯಾಗಿದೆ. ಅದೇ ‘ಟೆನೆಂಟ್‍’.

‘ಟೆನೆಂಟ್‍’ ಎಂದರೆ ಬಾಡಿಗೆದಾರ ಎಂದು ಎಲ್ಲರಿಗೂ ಗೊತ್ತೇ ಇದೆ. ಮನೆಯೊಂದರಲ್ಲಿ ನಡೆಯುವ ಕ್ರೈಮ್‍ ಥ್ರಿಲ್ಲರ್‍ ಚಿತ್ರ ಇದು. ಧರ್ಮ ಜೊತೆಗೆ ಸೋನು ಗೌಡ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಚಿತ್ರದ ಮೊದಲ ನೋಟ ಬಿಡುಗಡೆ ಆಗಿದ್ದು, ಇತ್ತೀಚೆಗೆ ಚಿತ್ರದ ಮೊದಲ ಟೀಸರ್‍ ಬಿಡುಗಡೆ ಆಗಿದೆ.

ವಿಶೇಷವೆಂದರೆ, ಕನ್ನಡ ಚಿತ್ರರಂಗದ ಹಲವು ಗಣ್ಯರು ಸೇರಿ ಈ ಟೀಸರ್‍ ಬಿಡುಗಡೆ ಮಾಡಿದ್ದಾರೆ. ನಿರ್ದೇಶಕರಾದ ಶಶಾಂಕ್, ಪವನ್ ಒಡೆಯರ್, ಛಾಯಾಗ್ರಹಕರಾದ ಸತ್ಯ ಹೆಗ್ಡೆ, ಡಿಸೈನರ್ ಹಾಗೂ ವಿತರಕಿ ಸಚಿನ್ನಾ ಹೆಗ್ಗಾರ್, ಚಂದನ್ ಶೆಟ್ಟಿ, ನವೀಶ್ ಶಂಕರ್ ಸೇರಿದಂತೆ ಅನೇಕರು ಟೀಸರ್‍ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಬೆಂಬಲ ಸೂಚಿಸಿದ್ದಾರೆ.

‘ಟೆನೆಂಟ್‍’ ಚಿತ್ರವನ್ನು ನಿರ್ದೇಶಿಸಿರುವುದು ಶ್ರೀಧರ್‍ ಶಾಸ್ತ್ರಿ. ವಿ.ಎಫ್.ಎಕ್ಸ್ ನಲ್ಲಿ ನಾಲ್ಕು ವರ್ಷಗಳ ಅನುಭವವಿರುವ ಶ್ರೀಧರ್, ಈಗ ಇದೇ ಮೊದಲ ಬಾರಿಗೆ ‘ಟನೆಂಟ್‍’ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದಕ್ಕೂ ಮುನ್ನ ಒಂದಿಷ್ಟು ಕಿರುಚಿತ್ರಗಳನ್ನು ನಿರ್ದೇಶಿಸಿ ಅನುಭವವಿರುವ ಶ್ರೀಧರ್‍, ಇದೇ ಮೊದಲ ಬಾರಿಗೆ ಚಿತ್ರ ನಿರ್ದೇನಕ್ಕೆ ಕೈ ಹಾಕಿದ್ದಾರೆ.

ಮಾಸ್ಟರ್ ಚಾಯ್ಸ್ ಕ್ರಿಯೇಷನ್ ನಡಿ ನಾಗರಾಜ್ ಟಿ, ‘ಟೆನೆಂಟ್’ ಚಿತ್ರವನ್ನು ನಿರ್ಮಿಸುತ್ತಿದ್ದು, ಪೃಥ್ವಿರಾಜ್ ಸಹ ನಿರ್ಮಾಪಕರಾಗಿ ಕೈ ಜೋಡಿಸಿದ್ದಾರೆ. ಇನ್ನು, ಶ್ರೀಧರ್ ಶಾಸ್ತ್ರಿ ನಿರ್ದೇಶನದ ಜೊತೆಗೆ ಕಥೆ ಮತ್ತು ಚಿತ್ರಕಥೆಯನ್ನು ಸಹ ರಚಿಸಿದ್ದಾರೆ.

‘ಟೆನೆಂಟ್‍’ ಚಿತ್ರದಲ್ಲಿ ಧರ್ಮ ಕೀರ್ತಿರಾಜ್, ಸೋನು ಗೌಡ, ತಿಲಕ್‍ ಜೊತೆಗೆ ರಾಕೇಶ್ ಮಯ್ಯ, ‘ಉಗ್ರಂ’ ಮಂಜು ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಗಿರೀಶ್ ಹೊತೂರ್ ಸಂಗೀತ, ಉಜ್ವಲ್ ಚಂದ್ರ ಸಂಕಲನ ಮತ್ತು ಮನೋಹರ್ ಜೋಷಿ ಛಾಯಾಗ್ರಹಣವಿದೆ.

‘ಟೆನೆಂಟ್‍’ ಚಿತ್ರವು ನವೆಂಬರ್‍ 22ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

andolana

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

4 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

4 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

4 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

4 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

4 hours ago